8:00 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

Crime News | ವೇಣೂರು: ಬೈಕ್ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

21/11/2025, 20:11

ಬೆಳ್ತಂಗಡಿ(reporterkarnataka.com): ವೇಣೂರು ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.


ಬಂಧಿತ ಆರೋಪಿಗಳನ್ನು ವೇಣೂರು ನಿವಾಸಿ ಮಹಮ್ಮದ್‌ ಇರ್ಷಾದ್‌ (25) ಹಾಗೂ ಪಡಂಗಡಿ ನಿವಾಸಿ ಸಾದಿಕ್‌ ಖಾನ್‌ (26) ಎಂದು ಗುರುತಿಸಲಾಗಿದೆ.
*ಘಟನೆ ವಿವರ:*
ಬೆಳ್ತಂಗಡಿಯ ಕುಕ್ಕೇಡಿ ನಿವಾಸಿ ಸಂಪತ್‌ ಕುಮಾರ್‌ ಎಂಬವರು ನವೆಂಬರ್ 10ರಂದು ರಾತ್ರಿ ವೇಣೂರು ಠಾಣಾ ವ್ಯಾಪ್ತಿಯ ಪಾನೂರು ಶ್ರೀ ಗುರುನಾರಾಯಣ ವೃತ್ತದ ಬಳಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಮೋಟಾರು ಸೈಕಲ್‌ ಕಳ್ಳತನ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ವೇಣೂರು ಪೊಲೀಸ್‌ ಠಾಣೆಯಲ್ಲಿ ಅ.ಕ್ರ 88/2025 ಕಲಂ 303‌ (2) ಬಿ.ಎನ್.‌ ಎಸ್.‌ 2023 ರಂತೆ ಪ್ರಕರಣ ದಾಖಲಿಸಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಅರೋಪಿಗಳಾದ ವೇಣೂರು ನಿವಾಸಿ ಮಹಮ್ಮದ್‌ ಇರ್ಷಾದ್‌ ಹಾಗೂ ಪಡಂಗಡಿ ನಿವಾಸಿ ಸಾದಿಕ್‌ ಖಾನ್‌ ಎಂಬವರುಗಳನ್ನು ದಸ್ತಗಿರಿ ಮಾಡಿದ್ದರು.
ಕಳವಾದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಆರೋಪಿತರ ಪತ್ತೆಗಾಗಿ ಬೆಳ್ತಂಗಡಿ ಡಿವೈಎಸ್ ಪಿ
ರೋಹಿಣಿ ಸಿ.ಕೆ. ಅವರ ನಿರ್ದೇಶನದಂತೆ ಬೆಳ್ತಂಗಡಿ ವೃತ್ತ ನಿರೀಕ್ಷಕರಾದ ಬಿ.ಜಿ. ಸುಬ್ಬಾಪೂರ ಮಠ ಅವರ ಮಾರ್ಗದರ್ಶನದಂತೆ, ವೇಣೂರು ಪೊಲೀಸ್‌ ಠಾಣಾ ಪೊಲೀಸ್‌ ಉಪನಿರೀಕ್ಷಕರಾದ ಅಕ್ಷಯ್‌ ಡವಗಿ, ಓಮನ ಎನ್.‌ ಹಾಗೂ ಎ.ಎಸ್.‌ ಐ. ವೆಂಕಟೇಶ್‌ ನಾಯ್ಕ, ಹಚ್ ಸಿ. ಕೃಷ್ಣ, ಹೆಚ್ ಸಿ ಕೇಶವತಿ, ಪಿಸಿ
ಬಸವರಾಜ್‌, ಪಿಸಿ ಮೋಹನ್‌ ರವರನ್ನೊಳಗೊಂಡ ತಂಡ ಕಾರ್ಯಚರಣೆ ನಡೆಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು