12:26 AM Tuesday1 - July 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:…

ಇತ್ತೀಚಿನ ಸುದ್ದಿ

Crime | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮೂವರು ಆರೋಪಿಗಳ ಸೆರೆ; ಒಬ್ಬನಿಗೆ ನ್ಯಾಯಾಂಗ ಬಂಧನ; ಇಬ್ಬರು ಪೊಲೀಸ್ ಕಸ್ಟಡಿಗೆ

14/05/2025, 22:03

ಮಂಗಳೂರು(reporterkarnataka.com): ನಗರದ ಹೊರವಲಯದ ಬಜಪೆ ಸಮೀಪ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳಾದ
ಕಳವಾರು ಆಶ್ರಯ ಕಾಲೋನಿ ನಿವಾಸಿಯಾದ ಅಜರುದ್ದೀನ್ ಅಲಿಯಾಸ್ ಅಜರ್ ಅಲಿಯಾಸ್ ಅಜ್ಜು(29), , ಕಾಪು ಸಮೀಪದ ಬೆಳಪು ಬದ್ರಿಯ ನಗರ ನಿವಾಸಿ
ಅಬ್ದುಲ್ ಖಾದರ್ ಅಲಿಯಾಸ್ ನೌಫಲ್(24) ಹಾಗೂ ಫರಂಗಿಪೇಟೆ
ಕುಂಪನಮಜಲು ರಸ್ತೆಯ
ಸಿಟಿ ಲೈಟ್ ಹೊಟೇಲ್ ಹಿಂಭಾಗದ ಅಪಾರ್ಟಮೆಂಟ್ ನ ನಿವಾಸಿ ನೌಷದ್ ಅಲಿಯಾಸ್ ವಾಮಂಜೂರು ನೌಷದ್ ಅವರನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ಮೇ 1ರಂದು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಹಾಸ್ ಶೆಟ್ಟಿ ಕೊಲೆ ನಡೆದಿತ್ತು. ಬಂಧಿತ ಆರೋಪಿಗಳ ಪೈಕಿ
ಅಜರುದ್ದೀನ್ ಎಂಬಾತನ ವಿರುದ್ಧ ಈ ಹಿಂದೆ ಪಣಂಬೂರು, ಸುರತ್ಕಲ್, ಮುಲ್ಕಿ ಪೊಲೀಸ್ ರಾಣೆಗಳಲ್ಲಿ 3 ಕಳವು ಪ್ರಕರಣ ದಾಖಲಾಗಿತ್ತು. ಈತನು ಪ್ರಕರಣದ ಆರೋಪಿಗಳಿಗೆ ಕೊಲೆಯಾದ ಸುಹಾಸ್ ಶೆಟ್ಟಿಯ ಚಲನವಲನದ ಬಗ್ಗೆ ಮಾಹಿತಿಯನ್ನು ನೀಡಿ ಕೊಲೆಗೆ ಸಹಕರಿಸಿದ್ದಾನೆ ಎಂದು ತಿಳಿದು ಬಂದಿದೆ. ಇನ್ನೊಬ್ಬ ಆರೋಪಿ ಅಬ್ದುಲ್ ಖಾದರ್ ಕೊಲೆ ಕೃತ್ಯ ನಡೆಸಿದ ನಂತರ ಕಾರಿನಲ್ಲಿ ಪರಾರಿಯಾಗುವ ಸಮಯದಲ್ಲಿ ಆರೋಪಿಗಳಿಗೆ ಸಹಕರಿಸಿದ್ದನು. ಮತ್ತೊರ್ವ ಆರೋಪಿ ನೌಷದ್ ಎಂಬಾತನು ಸುಹಾಸ್ ಶೆಟ್ಟಿಯ ಕೊಲೆಗೆ ಉಳಿದ ಆರೋಪಿಗಳ ಜೊತೆ ಸಂಚು ರೂಪಿಸಿ ಕೊಲೆ ಕೃತ್ಯದಲ್ಲಿ ಭಾಗಿಯಾಗಿರುವುದಾಗಿದೆ. ಈತನು ಈ ಹಿಂದೆ ಸುರತ್ಕಲ್, ಬಜ್ಪೆ, ಮೂಡಬಿದ್ರಿ, ಮಂಗಳೂರು ಉತ್ತರ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ದರೋಡೆಗೆ ಸಂಚು ಸೇರಿದಂತೆ ಒಟ್ಟು 6 ಪ್ರಕರಣಗಳು ದಾಖಲಾಗಿರುತ್ತದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗಳ ಪೈಕಿ ಅಜರುದ್ದೀನ್ ಎಂಬಾತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿರುತ್ತದೆ.
ಆರೋಪಿಗಳಾದ ಅಬ್ದುಲ್ ಖಾದರ್ ಮತ್ತು ನೌಷದ್ ಎಂಬವರನ್ನು ಹೆಚ್ಚಿನ ತನಿಖೆ ಕುರಿತು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಈ ಕೊಲೆ ಪ್ರಕರಣದ ತನಿಖೆಯು ಮುಂದುವರಿದಿದ್ದು, ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು