5:20 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

Crime | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮೂವರು ಆರೋಪಿಗಳ ಸೆರೆ; ಒಬ್ಬನಿಗೆ ನ್ಯಾಯಾಂಗ ಬಂಧನ; ಇಬ್ಬರು ಪೊಲೀಸ್ ಕಸ್ಟಡಿಗೆ

14/05/2025, 22:03

ಮಂಗಳೂರು(reporterkarnataka.com): ನಗರದ ಹೊರವಲಯದ ಬಜಪೆ ಸಮೀಪ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳಾದ
ಕಳವಾರು ಆಶ್ರಯ ಕಾಲೋನಿ ನಿವಾಸಿಯಾದ ಅಜರುದ್ದೀನ್ ಅಲಿಯಾಸ್ ಅಜರ್ ಅಲಿಯಾಸ್ ಅಜ್ಜು(29), , ಕಾಪು ಸಮೀಪದ ಬೆಳಪು ಬದ್ರಿಯ ನಗರ ನಿವಾಸಿ
ಅಬ್ದುಲ್ ಖಾದರ್ ಅಲಿಯಾಸ್ ನೌಫಲ್(24) ಹಾಗೂ ಫರಂಗಿಪೇಟೆ
ಕುಂಪನಮಜಲು ರಸ್ತೆಯ
ಸಿಟಿ ಲೈಟ್ ಹೊಟೇಲ್ ಹಿಂಭಾಗದ ಅಪಾರ್ಟಮೆಂಟ್ ನ ನಿವಾಸಿ ನೌಷದ್ ಅಲಿಯಾಸ್ ವಾಮಂಜೂರು ನೌಷದ್ ಅವರನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ಮೇ 1ರಂದು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಹಾಸ್ ಶೆಟ್ಟಿ ಕೊಲೆ ನಡೆದಿತ್ತು. ಬಂಧಿತ ಆರೋಪಿಗಳ ಪೈಕಿ
ಅಜರುದ್ದೀನ್ ಎಂಬಾತನ ವಿರುದ್ಧ ಈ ಹಿಂದೆ ಪಣಂಬೂರು, ಸುರತ್ಕಲ್, ಮುಲ್ಕಿ ಪೊಲೀಸ್ ರಾಣೆಗಳಲ್ಲಿ 3 ಕಳವು ಪ್ರಕರಣ ದಾಖಲಾಗಿತ್ತು. ಈತನು ಪ್ರಕರಣದ ಆರೋಪಿಗಳಿಗೆ ಕೊಲೆಯಾದ ಸುಹಾಸ್ ಶೆಟ್ಟಿಯ ಚಲನವಲನದ ಬಗ್ಗೆ ಮಾಹಿತಿಯನ್ನು ನೀಡಿ ಕೊಲೆಗೆ ಸಹಕರಿಸಿದ್ದಾನೆ ಎಂದು ತಿಳಿದು ಬಂದಿದೆ. ಇನ್ನೊಬ್ಬ ಆರೋಪಿ ಅಬ್ದುಲ್ ಖಾದರ್ ಕೊಲೆ ಕೃತ್ಯ ನಡೆಸಿದ ನಂತರ ಕಾರಿನಲ್ಲಿ ಪರಾರಿಯಾಗುವ ಸಮಯದಲ್ಲಿ ಆರೋಪಿಗಳಿಗೆ ಸಹಕರಿಸಿದ್ದನು. ಮತ್ತೊರ್ವ ಆರೋಪಿ ನೌಷದ್ ಎಂಬಾತನು ಸುಹಾಸ್ ಶೆಟ್ಟಿಯ ಕೊಲೆಗೆ ಉಳಿದ ಆರೋಪಿಗಳ ಜೊತೆ ಸಂಚು ರೂಪಿಸಿ ಕೊಲೆ ಕೃತ್ಯದಲ್ಲಿ ಭಾಗಿಯಾಗಿರುವುದಾಗಿದೆ. ಈತನು ಈ ಹಿಂದೆ ಸುರತ್ಕಲ್, ಬಜ್ಪೆ, ಮೂಡಬಿದ್ರಿ, ಮಂಗಳೂರು ಉತ್ತರ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ದರೋಡೆಗೆ ಸಂಚು ಸೇರಿದಂತೆ ಒಟ್ಟು 6 ಪ್ರಕರಣಗಳು ದಾಖಲಾಗಿರುತ್ತದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗಳ ಪೈಕಿ ಅಜರುದ್ದೀನ್ ಎಂಬಾತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿರುತ್ತದೆ.
ಆರೋಪಿಗಳಾದ ಅಬ್ದುಲ್ ಖಾದರ್ ಮತ್ತು ನೌಷದ್ ಎಂಬವರನ್ನು ಹೆಚ್ಚಿನ ತನಿಖೆ ಕುರಿತು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಈ ಕೊಲೆ ಪ್ರಕರಣದ ತನಿಖೆಯು ಮುಂದುವರಿದಿದ್ದು, ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು