4:50 PM Saturday12 - July 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ… ಕೊಪ್ಪ ಮೊರಾರ್ಜಿ‌ ವಸತಿ ಶಾಲೆಯ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಪ್ರಿನ್ಸಿಪಾಲ್, ವಾರ್ಡನ್ ಅಮಾನತು:…

ಇತ್ತೀಚಿನ ಸುದ್ದಿ

ಕ್ರಿಮಿನಲ್ ಹಿನ್ನೆಲೆಯುಳ್ಳ ವ್ಯಕ್ತಿಗಳ ಜತೆ ಪೊಲೀಸ್ ಸಂಪರ್ಕ: ಪೊಲೀಸ್ ಮಹಾ ನಿರೀಕ್ಷಕರಿಂದ ಕಟ್ಟುನಿಟ್ಟಿನ ಆದೇಶ

02/08/2021, 22:07

ಸಾಂದರ್ಭಿಕ ಚಿತ್ರ
ಬೆಂಗಳೂರು(reporterkarnataka.com): ಪೊಲೀಸ್ ಮಹಾ ನಿರೀಕ್ಷಕರು ಬಹಳ ಪ್ರಮುಖವಾದ ಆದೇಶ ಹೊರಡಿಸಿದ್ದಾರೆ. ಅದು ಶಿಸ್ತು ಮತ್ತು ಶಿಷ್ಟಾಚಾರಕ್ಕೆ ಸಂಬಂಧಿಸಿದ್ದಾಗಿದೆ. ಅದೇನೆಂದರೆ ಪೊಲೀಸರು ಇನ್ನು ಮುಂದೆ ಠಾಣೆಯಲ್ಲಿ ಹುಟ್ಟು ಹಬ್ಬ, ಮದುವೆ ವಾರ್ಷಿಕೋತ್ಸವ ಮುಂತಾದ ಖಾಸಗಿ ಆಚರಣೆಯನ್ನು ಅಪರಾಧಿ ಹಿನ್ನೆಲೆಯುಳ್ಳ ವ್ಯಕ್ತಿಗಳ ಜತೆ ಮಾಡಬಾರದು. ಕಡ್ಡಾಯವಾಗಿ ಶಿಸ್ತು ಹಾಗೂ ಶಿಷ್ಟಾಚಾರ ಕಾಯ್ದುಕೊಳ್ಳಬೇಕೆನ್ನುವುದು ಈ ಆದೇಶದ ಸಾರವಾಗಿದೆ.

ಪೊಲೀಸ್ ಮಹಾನಿರೀಕ್ಷಕರು ಹೊರಡಿಸಿರುವ ಆದೇಶದ ಪತ್ರದಲ್ಲಿ, ಅಪರಾಧಗಳ ತಡೆ, ಅಪರಾಧ ಪ್ರಕರಣಗಳ ತನಿಖೆ, ಸಾರ್ವಜನಿಕರ ಪ್ರಾಣ ಹಾಗೂ ಆಸ್ತಿ ರಕ್ಷಣೆಯ ಜವಾಬ್ದಾರಿಯನ್ನು ಹೊತ್ತಿರುವ ಪೊಲೀಸ್ ಇಲಾಖೆಯು ಶಿಸ್ತಿನ ಇಲಾಖೆಯಾಗಿದೆ. ಸಮವಸ್ತ್ರದಲ್ಲಿನ ಪೊಲೀಸ್ ಅಧಿಕಾರಿಗಳ ವರ್ತನೆಯು ಇಡೀ ಪೊಲೀಸ್ ಸಮುದಾಯವನ್ನು ಪ್ರತಿನಿಧಿಸುತ್ತದೆ ಎಂಬುದನ್ನು ಪೊಲೀಸ್ ಅಧಿಕಾರಿಗಳು ಸದಾ ಅರಿಯುವುದು ಸೂಕ್ತ ಎಂದು ಸೂಚ್ಯವಾಗಿ ಎಚ್ಚರಿಕೆ ರವಾನಿಸಿದ್ದಾರೆ.

ಸಮಾಜಘಾತುಕ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮಗಳನ್ನು ಜರುಗಿಸುವ ಮೂಲಕ ಸಮಾಜಘಾತುಕ ಚಟುವಟಿಕೆಗಳನ್ನು ತಟಸ್ಥಗೊಳಿಸಿ ಸಮಾಜದಲ್ಲಿ ಶಾಂತಿ ಸ್ಥಾಪನೆ ಹೊಣೆಗಾರಿಕೆಯಿಂದ ಕರ್ತವ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿಗಳು ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ತಮ್ಮ ಕಚೇರಿಯಲ್ಲಿ ಜವಾಬ್ದಾರಿಯುತವಾಗಿ ನಡೆದುಕೊಳ್ಳುವುದು ಅವಶ್ಯಕ ಎಂದು ಆದೇಶ ಪತ್ರವನ್ನು ಹೊರಡಿಸಿದ್ದಾರೆ. ಕಡ್ಡಾಯವಾಗಿ ಕೆಳಕಂಡ ಕ್ರಮವನ್ನು ಎಲ್ಲಾ ಪೋಲಿಸರು ಅನುಸರಿಸಬೇಕೆಂದ ಆದೇಶ ಪತ್ರದಲ್ಲಿ ತಿಳಿಸಿದೆ:

ಇನ್ನು ಠಾಣೆಗಳಲ್ಲಿ ಹುಟ್ಟುಹಬ್ಬ, ಮದುವೆ ವಾರ್ಷಿಕೋತ್ಸವ, ಇನ್ನಿತರೆ ಖಾಸಗಿ ಆಚರಿಸುವಂತಿಲ್ಲ. ಸಾರ್ವಜನಿಕರ ಹೆಸರಿನಲ್ಲಿ ಅಪರಾಧ ಹಿನ್ನೆಲೆಯುಳ್ಳ ಸಮಾಜ ಘಾತುಕ ವ್ಯಕ್ತಿಗಳ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತಿಲ್ಲ. ಖಾಸಗಿ ಕಾರ್ಯಕ್ರಮಗಳಲ್ಲಿ ಸಮವಸ್ತ್ರ ಧರಿಸಿ ಭಾಗವಹಿಸುವುದಾಗಲಿ, ಸಮಾಜಘಾತುಕ ಶಕ್ತಿಗಳೊಂದಿಗೆ ಸಂಪರ್ಕ ಇಟ್ಟುಕೊಳ್ಳುವುದಾಗಲಿ ಅಥವಾ ಅವರ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತಿಲ್ಲ. ಖಾಸಗಿ ಕಾರ್ಯಕ್ರಮಕ್ಕೆ ಪಾಲ್ಗೊಳ್ಳುವ ಮುನ್ನ ಸಂಘಟನೆ, ಸಂಸ್ಥೆಯ ವಿವರವನ್ನು ಸರಿಯಾಗಿ ತಿಳಿದು ಪಾಲ್ಗೊಳ್ಳಬೇಕು. ಇಲಾಖೆಯಿಂದ ಆಯೋಜಿಸಲಾಗುವ ಕಾರ್ಯಕ್ರಮಗಳು ಸಾರ್ವಜನಿಕರ ಅರಿವು ಮತ್ತು ಸಾರ್ವಜನಿಕ ಮತ್ತು ಪೊಲೀಸರ ಸಂಬಂಧ ವೃದ್ಧಿಸುವ ಉದ್ದೇಶವಾಗಿರಬೇಕು, ಆಗಮಿಸುವ ಮತ್ತು ನಿರ್ಗಮಿಸುವ ಪೊಲೀಸರಿಗೆ ಸ್ವಾಗತ, ಬೀಳ್ಕೊಡುಗೆ ಆಚರಣೆಯಿಂದ ದೂರವಿರುವುದು ಎಂಬ ಕ್ರಮಗಳನ್ನು ಪೊಲೀಸ್ ಮಹಾನಿರೀಕ್ಷಕ ಕಚೇರಿ ಆದೇಶಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು