1:35 AM Thursday28 - May 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು…

ಇತ್ತೀಚಿನ ಸುದ್ದಿ

ಕ್ರಿಮಿನಲ್ ಹಿನ್ನೆಲೆಯುಳ್ಳ ವ್ಯಕ್ತಿಗಳ ಜತೆ ಪೊಲೀಸ್ ಸಂಪರ್ಕ: ಪೊಲೀಸ್ ಮಹಾ ನಿರೀಕ್ಷಕರಿಂದ ಕಟ್ಟುನಿಟ್ಟಿನ ಆದೇಶ

02/08/2021, 22:07

ಸಾಂದರ್ಭಿಕ ಚಿತ್ರ
ಬೆಂಗಳೂರು(reporterkarnataka.com): ಪೊಲೀಸ್ ಮಹಾ ನಿರೀಕ್ಷಕರು ಬಹಳ ಪ್ರಮುಖವಾದ ಆದೇಶ ಹೊರಡಿಸಿದ್ದಾರೆ. ಅದು ಶಿಸ್ತು ಮತ್ತು ಶಿಷ್ಟಾಚಾರಕ್ಕೆ ಸಂಬಂಧಿಸಿದ್ದಾಗಿದೆ. ಅದೇನೆಂದರೆ ಪೊಲೀಸರು ಇನ್ನು ಮುಂದೆ ಠಾಣೆಯಲ್ಲಿ ಹುಟ್ಟು ಹಬ್ಬ, ಮದುವೆ ವಾರ್ಷಿಕೋತ್ಸವ ಮುಂತಾದ ಖಾಸಗಿ ಆಚರಣೆಯನ್ನು ಅಪರಾಧಿ ಹಿನ್ನೆಲೆಯುಳ್ಳ ವ್ಯಕ್ತಿಗಳ ಜತೆ ಮಾಡಬಾರದು. ಕಡ್ಡಾಯವಾಗಿ ಶಿಸ್ತು ಹಾಗೂ ಶಿಷ್ಟಾಚಾರ ಕಾಯ್ದುಕೊಳ್ಳಬೇಕೆನ್ನುವುದು ಈ ಆದೇಶದ ಸಾರವಾಗಿದೆ.

ಪೊಲೀಸ್ ಮಹಾನಿರೀಕ್ಷಕರು ಹೊರಡಿಸಿರುವ ಆದೇಶದ ಪತ್ರದಲ್ಲಿ, ಅಪರಾಧಗಳ ತಡೆ, ಅಪರಾಧ ಪ್ರಕರಣಗಳ ತನಿಖೆ, ಸಾರ್ವಜನಿಕರ ಪ್ರಾಣ ಹಾಗೂ ಆಸ್ತಿ ರಕ್ಷಣೆಯ ಜವಾಬ್ದಾರಿಯನ್ನು ಹೊತ್ತಿರುವ ಪೊಲೀಸ್ ಇಲಾಖೆಯು ಶಿಸ್ತಿನ ಇಲಾಖೆಯಾಗಿದೆ. ಸಮವಸ್ತ್ರದಲ್ಲಿನ ಪೊಲೀಸ್ ಅಧಿಕಾರಿಗಳ ವರ್ತನೆಯು ಇಡೀ ಪೊಲೀಸ್ ಸಮುದಾಯವನ್ನು ಪ್ರತಿನಿಧಿಸುತ್ತದೆ ಎಂಬುದನ್ನು ಪೊಲೀಸ್ ಅಧಿಕಾರಿಗಳು ಸದಾ ಅರಿಯುವುದು ಸೂಕ್ತ ಎಂದು ಸೂಚ್ಯವಾಗಿ ಎಚ್ಚರಿಕೆ ರವಾನಿಸಿದ್ದಾರೆ.

ಸಮಾಜಘಾತುಕ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮಗಳನ್ನು ಜರುಗಿಸುವ ಮೂಲಕ ಸಮಾಜಘಾತುಕ ಚಟುವಟಿಕೆಗಳನ್ನು ತಟಸ್ಥಗೊಳಿಸಿ ಸಮಾಜದಲ್ಲಿ ಶಾಂತಿ ಸ್ಥಾಪನೆ ಹೊಣೆಗಾರಿಕೆಯಿಂದ ಕರ್ತವ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿಗಳು ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ತಮ್ಮ ಕಚೇರಿಯಲ್ಲಿ ಜವಾಬ್ದಾರಿಯುತವಾಗಿ ನಡೆದುಕೊಳ್ಳುವುದು ಅವಶ್ಯಕ ಎಂದು ಆದೇಶ ಪತ್ರವನ್ನು ಹೊರಡಿಸಿದ್ದಾರೆ. ಕಡ್ಡಾಯವಾಗಿ ಕೆಳಕಂಡ ಕ್ರಮವನ್ನು ಎಲ್ಲಾ ಪೋಲಿಸರು ಅನುಸರಿಸಬೇಕೆಂದ ಆದೇಶ ಪತ್ರದಲ್ಲಿ ತಿಳಿಸಿದೆ:

ಇನ್ನು ಠಾಣೆಗಳಲ್ಲಿ ಹುಟ್ಟುಹಬ್ಬ, ಮದುವೆ ವಾರ್ಷಿಕೋತ್ಸವ, ಇನ್ನಿತರೆ ಖಾಸಗಿ ಆಚರಿಸುವಂತಿಲ್ಲ. ಸಾರ್ವಜನಿಕರ ಹೆಸರಿನಲ್ಲಿ ಅಪರಾಧ ಹಿನ್ನೆಲೆಯುಳ್ಳ ಸಮಾಜ ಘಾತುಕ ವ್ಯಕ್ತಿಗಳ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತಿಲ್ಲ. ಖಾಸಗಿ ಕಾರ್ಯಕ್ರಮಗಳಲ್ಲಿ ಸಮವಸ್ತ್ರ ಧರಿಸಿ ಭಾಗವಹಿಸುವುದಾಗಲಿ, ಸಮಾಜಘಾತುಕ ಶಕ್ತಿಗಳೊಂದಿಗೆ ಸಂಪರ್ಕ ಇಟ್ಟುಕೊಳ್ಳುವುದಾಗಲಿ ಅಥವಾ ಅವರ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತಿಲ್ಲ. ಖಾಸಗಿ ಕಾರ್ಯಕ್ರಮಕ್ಕೆ ಪಾಲ್ಗೊಳ್ಳುವ ಮುನ್ನ ಸಂಘಟನೆ, ಸಂಸ್ಥೆಯ ವಿವರವನ್ನು ಸರಿಯಾಗಿ ತಿಳಿದು ಪಾಲ್ಗೊಳ್ಳಬೇಕು. ಇಲಾಖೆಯಿಂದ ಆಯೋಜಿಸಲಾಗುವ ಕಾರ್ಯಕ್ರಮಗಳು ಸಾರ್ವಜನಿಕರ ಅರಿವು ಮತ್ತು ಸಾರ್ವಜನಿಕ ಮತ್ತು ಪೊಲೀಸರ ಸಂಬಂಧ ವೃದ್ಧಿಸುವ ಉದ್ದೇಶವಾಗಿರಬೇಕು, ಆಗಮಿಸುವ ಮತ್ತು ನಿರ್ಗಮಿಸುವ ಪೊಲೀಸರಿಗೆ ಸ್ವಾಗತ, ಬೀಳ್ಕೊಡುಗೆ ಆಚರಣೆಯಿಂದ ದೂರವಿರುವುದು ಎಂಬ ಕ್ರಮಗಳನ್ನು ಪೊಲೀಸ್ ಮಹಾನಿರೀಕ್ಷಕ ಕಚೇರಿ ಆದೇಶಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು