3:57 AM Saturday12 - July 2025
ಬ್ರೇಕಿಂಗ್ ನ್ಯೂಸ್
ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ…

ಇತ್ತೀಚಿನ ಸುದ್ದಿ

ಎಲ್ ಐ ಸಿಯಲ್ಲಿ ಕೇಳೋರಿಲ್ಲದೇ ಬಿದ್ದಿದೆ 21 ಸಾವಿರ ಕೋಟಿ ರುಪಾಯಿ: ಕ್ಲೈಮ್ ಮಾಡದ ಹಣವಿದು !!

17/02/2022, 13:46

ಹೊಸದಿಲ್ಲಿ(reporterkarnataka.com):

ಎಲ್‌ಐಸಿಯಲ್ಲಿ ಕ್ಲೈಮ್ ಮಾಡದ ಸುಮಾರು 21,500 ಕೋಟಿಗೂ ಹೆಚ್ಚು ನಿಧಿ ಇದೆ. ಹೌದು, ಮಾರುಕಟ್ಟೆ ನಿಯಂತ್ರಕ ಸೆಬಿಗೆ, ಐಪಿಒಗಾಗಿ ಸಲ್ಲಿಸಿದ ಕರಡಿನಲ್ಲಿ ಕಂಪನಿ ಮಾಹಿತಿ ನೀಡಿದೆ. ಸರ್ಕಾರಿ ಸ್ವಾಮ್ಯದ ವಿಮಾ ಕಂಪನಿ ಎಲ್‌ಐಸಿ ಸೆಪ್ಟೆಂಬರ್ 2021 ವೇಳೆಗೆ 21,539  ಕೋಟಿ ರೂ.ಗಳಷ್ಟು ಕ್ಲೈಮ್ ಮಾಡದ ಹಣವನ್ನು ಹೊಂದಿದೆ.

ಇದರಲ್ಲಿ ಕ್ಲೈಮ್ ಮಾಡದ ಬಾಕಿ ಮೊತ್ತದ ಮೇಲೆ ಗಳಿಸಿದ ಬಡ್ಡಿ ಹಣ ಕೂಡ ಸೇರಿದೆ. ಭಾರತೀಯ ಜೀವ ವಿಮಾ ನಿಗಮ ಸಲ್ಲಿಸಿದ ಡ್ರಾಫ್ಟ್ ರೆಡ್ ಹೆರಿಂಗ್ ಪ್ರಾಸ್ಪೆಕ್ಟಸ್ ಪ್ರಕಾರ, ಕ್ಲೈಮ್ ಮಾಡದ ಮೊತ್ತವು ಮಾರ್ಚ್ 2021ರ ಅಂತ್ಯದ ವೇಳೆಗೆ 18,489 ಕೋಟಿಯಷ್ಟಿತ್ತು.

ಸೆಬಿಯ ನಿಯಮಗಳ ಪ್ರಕಾರ ಯಾವುದೇ ವಿಮಾ ಕಂಪನಿ ತನ್ನ ಜಾಲತಾಣದಲ್ಲಿ ಕ್ಲೈಮ್ ಮಾಡದ ಮೊತ್ತವನ್ನು ಪರಿಶೀಲಿಸಲು ಸೌಲಭ್ಯವನ್ನು ಒದಗಿಸಬೇಕಿದೆ. ಈ ಸೌಲಭ್ಯವನ್ನು ಎಲ್ ಐ ಸಿ ವೆಬ್ ಸೈಟ್ ನಲ್ಲಿ ಕಲ್ಪಿಸಲಾಗಿದ್ದು, ಪಾಲಿಸಿ ಹೊಂದಿರುವವರು ತಮಗೆ ಬರಬೇಕಾದ ಮೊತ್ತವಿದೆಯೇ ಎಂಬುದನ್ನು ಪರಿಶೀಲಿಸಿ ಅದನ್ನು ಕೋರುವುದಕ್ಕೆ ಅವಕಾಶವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು