9:44 AM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಸಿಆರ್ ಝಡ್ ನಿಯಮ ಸಡಿಲಿಕೆ ಪ್ರವಾಸೋದ್ಯಮ‌ಕ್ಕೆ ಪೂರಕ: ಉಡುಪಿ ಟೂರಿಸಂ ಕನೆಕ್ಟ್ – 2022 ಕಾರ್ಯಾಗಾರಕ್ಕೆ ಚಾಲನೆ

09/11/2022, 14:29

ಉಡುಪಿ(reporterkarnataka.com): ಕರಾವಳಿ ಪ್ರವಾಸೋದ್ಯಮ ಸಂಘಟನೆ, ಉಡುಪಿ ಜಿಲ್ಲಾಡಳಿತ, ಉಡುಪಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಸಹಯೋಗದಲ್ಲಿ ಆಯೋಜಿಸಿರುವ “ಉಡುಪಿ ಟೂರಿಸಂ ಕನೆಕ್ಟ್ – 2022” ಕಾರ್ಯಾಗಾರಕ್ಕೆ ಶಾಸಕ ರಘುಪತಿ ಭಟ್ ಇಂದು ಉಡುಪಿಯ ಹೋಟೆಲ್ ಕಿದಿಯೂರಿನ ಶೇಷಶಯನ ಸಭಾಂಗಣದಲ್ಲಿ ಚಾಲನೆ ನೀಡಿದರು.
ಬಳಿಕ‌ ಮಾತನಾಡಿದ ಶಾಸಕರು, ಉಡುಪಿ ಜಿಲ್ಲೆಯಲ್ಲಿಯೂ ಅತ್ಯಂತ ಸುಂದರ ಬೀಚ್ ಗಳಿವೆ. ಗೋವಾಕ್ಕಿಂತಲೂ ಸ್ವಚ್ಛ ಹಾಗೂ ಸುಂದರವಾದ ಬೀಚ್ ಗಳು ನಮ್ಮಲ್ಲಿವೆ. ಆದರೆ ಅವುಗಳು ಸೂಕ್ತ ಮೂಲಭೂತ ಸೌಕರ್ಯಗಳ ಕೊರತೆಯಿಂದ ಹೆಚ್ಚೆಚ್ಚು ಪ್ರವಾಸಿಗರನ್ನು ಆಕರ್ಷಿಸಲು ವಿಫಲವಾಗುತ್ತಿವೆ. ಕೇಂದ್ರ ಸರ್ಕಾರ ಸಿಆರ್ ಝಡ್ ನಿಯಮದಲ್ಲಿ‌ ಸಡಿಲಿಕೆ ಮಾಡಿರುವುದರಿಂದ ಪ್ರವಾಸೋದ್ಯಮ‌ದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದರು.


ಕೇಂದ್ರ ಪ್ರವಾಸೋದ್ಯಮ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಮೊಹಮ್ಮದ್ ಫಾರೂಕ್, ರಾಜ್ಯ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕಿ ಅನಿತಾ ಬಿ, ಕೆನರಾ ಬ್ಯಾಂಕ್ ಮಣಿಪಾಲ ಶಾಖೆಯ ಜನರಲ್ ಮ್ಯಾನೇಜರ್ ರಾಮ ನಾಯ್ಕ್, ಕರಾವಳಿ ಪ್ರವಾಸೋದ್ಯಮ ಸಂಘಟನೆಯ ಅಧ್ಯಕ್ಷ ಮನೋಹರ್ ಶೆಟ್ಟಿ, ಉಪಾಧ್ಯಕ್ಷ ನಾಗರಾಜ ಹೆಬ್ಬಾರ್, ಕಾರ್ಯದರ್ಶಿ ಗೌರವ್ ಶಣವ, ಕೋಶಾಧಿಕಾರಿ ಚಂದ್ರಕಾಂತ್ ಡಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು