4:55 PM Sunday12 - July 2026
ಬ್ರೇಕಿಂಗ್ ನ್ಯೂಸ್
ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ

ಇತ್ತೀಚಿನ ಸುದ್ದಿ

ಸಿಆರ್ ಝಡ್ ನಿಯಮ ಸಡಿಲಿಕೆ ಪ್ರವಾಸೋದ್ಯಮ‌ಕ್ಕೆ ಪೂರಕ: ಉಡುಪಿ ಟೂರಿಸಂ ಕನೆಕ್ಟ್ – 2022 ಕಾರ್ಯಾಗಾರಕ್ಕೆ ಚಾಲನೆ

09/11/2022, 14:29

ಉಡುಪಿ(reporterkarnataka.com): ಕರಾವಳಿ ಪ್ರವಾಸೋದ್ಯಮ ಸಂಘಟನೆ, ಉಡುಪಿ ಜಿಲ್ಲಾಡಳಿತ, ಉಡುಪಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಸಹಯೋಗದಲ್ಲಿ ಆಯೋಜಿಸಿರುವ “ಉಡುಪಿ ಟೂರಿಸಂ ಕನೆಕ್ಟ್ – 2022” ಕಾರ್ಯಾಗಾರಕ್ಕೆ ಶಾಸಕ ರಘುಪತಿ ಭಟ್ ಇಂದು ಉಡುಪಿಯ ಹೋಟೆಲ್ ಕಿದಿಯೂರಿನ ಶೇಷಶಯನ ಸಭಾಂಗಣದಲ್ಲಿ ಚಾಲನೆ ನೀಡಿದರು.
ಬಳಿಕ‌ ಮಾತನಾಡಿದ ಶಾಸಕರು, ಉಡುಪಿ ಜಿಲ್ಲೆಯಲ್ಲಿಯೂ ಅತ್ಯಂತ ಸುಂದರ ಬೀಚ್ ಗಳಿವೆ. ಗೋವಾಕ್ಕಿಂತಲೂ ಸ್ವಚ್ಛ ಹಾಗೂ ಸುಂದರವಾದ ಬೀಚ್ ಗಳು ನಮ್ಮಲ್ಲಿವೆ. ಆದರೆ ಅವುಗಳು ಸೂಕ್ತ ಮೂಲಭೂತ ಸೌಕರ್ಯಗಳ ಕೊರತೆಯಿಂದ ಹೆಚ್ಚೆಚ್ಚು ಪ್ರವಾಸಿಗರನ್ನು ಆಕರ್ಷಿಸಲು ವಿಫಲವಾಗುತ್ತಿವೆ. ಕೇಂದ್ರ ಸರ್ಕಾರ ಸಿಆರ್ ಝಡ್ ನಿಯಮದಲ್ಲಿ‌ ಸಡಿಲಿಕೆ ಮಾಡಿರುವುದರಿಂದ ಪ್ರವಾಸೋದ್ಯಮ‌ದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದರು.


ಕೇಂದ್ರ ಪ್ರವಾಸೋದ್ಯಮ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಮೊಹಮ್ಮದ್ ಫಾರೂಕ್, ರಾಜ್ಯ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕಿ ಅನಿತಾ ಬಿ, ಕೆನರಾ ಬ್ಯಾಂಕ್ ಮಣಿಪಾಲ ಶಾಖೆಯ ಜನರಲ್ ಮ್ಯಾನೇಜರ್ ರಾಮ ನಾಯ್ಕ್, ಕರಾವಳಿ ಪ್ರವಾಸೋದ್ಯಮ ಸಂಘಟನೆಯ ಅಧ್ಯಕ್ಷ ಮನೋಹರ್ ಶೆಟ್ಟಿ, ಉಪಾಧ್ಯಕ್ಷ ನಾಗರಾಜ ಹೆಬ್ಬಾರ್, ಕಾರ್ಯದರ್ಶಿ ಗೌರವ್ ಶಣವ, ಕೋಶಾಧಿಕಾರಿ ಚಂದ್ರಕಾಂತ್ ಡಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು