6:44 PM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಸಿ.ಟಿ. ರವಿ ಬಂಧನ: ಬೆಳಗಾವಿಯಲ್ಲಿ ಬಿಜೆಪಿಯಿಂದ ಭಾರೀ ಪ್ರತಿಭಟನೆ

20/12/2024, 22:22

ಬೆಳಗಾವಿ(reporterkarnataka.com): ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಸಿ. ಟಿ.ರವಿ ಅವರ ಬಂಧನ ಖಂಡಿಸಿ ಬಿಜೆಪಿಯಿಂದ ಬೆಳಗಾವಿಯ ಚನ್ನಮ್ಮ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.


ಸುವರ್ಣಸೌಧದೊಳಕ್ಕೆ ನುಗ್ಗಿ ಕೆಲವು ಕಾಂಗ್ರೆಸ್ ಪುಡಾರಿಗಳು, ರೌಡಿಗಳು ದಾಂಧಲೆ ನಡೆಸಿದವರು ಹಾಗೂ ನಡುರಸ್ತೆಯಲ್ಲಿ ಹಲ್ಲೆ ಮಾಡಲು ಪ್ರಚೋದನೆ ನೀಡಿದವರನ್ನೂ ಸಹ ಬಂಧಿಸಬೇಕು. ಅಲ್ಲದೇ ಸಭಾಪತಿಗಳ ಗಮನಕ್ಕೂ ತರದೆ ಏಕಾಏಕಿ ಸಿ.ಟಿ. ರವಿ ಅವರನ್ನು ಬಂಧಿಸಿದ್ದು ಅಕ್ಷಮ್ಯ ಅಪರಾಧ. ಅವರು ಗಾಯವಾಗಿದ್ದರೂ ಆಸ್ಪತ್ರೆಗೆ ಕರೆದುಕೊಂಡು ಹೋಗದೇ ರಾತ್ರಿಯೆಲ್ಲಾ 400-500 ಕಿ.ಮೀ ಸುತ್ತಾಡಿಸಿ ಬೆಂಗಳೂರಿನ ನ್ಯಾಯಾಲಯಕ್ಕೆ ಹಾಜರು ಪಡಿಸುತ್ತೇವೆ ಎಂದು ಗದಗ, ರಾಮದುರ್ಗ ಸೇರಿ ಎಲ್ಲಾ ಪೊಲೀಸ್ ಸ್ಟೇಷನ್ ಸುತ್ತಾಡಿಸಿ ದ್ವೇಷ ಹಾಗೂ ಕೀಳುಮಟ್ಟದ ರಾಜಕೀಯ ಮಾಡುವ ಮೂಲಕ ಪ್ರಜಾಪ್ರಭುತ್ವಕ್ಕೆ ಕೊಳ್ಳಿ ಇಡಲು ಹೊರಟಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್. ಅಶೋಕ್, ಉಪ ನಾಯಕ ಅರವಿಂದ ಬೆಲ್ಲದ್, ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಮಾಜಿ ಶಾಸಕ ಸಂಜಯ್ ಪಾಟೀಲ್, ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್, ಗೀತಾ ಸುತಾರ್, ಸತೀಶ್ ಅಪ್ಪಾಜಿಗೋಳ ಸೇರಿದಂತೆ ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು