3:03 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸಿ.ಟಿ. ರವಿ ಬಂಧನ: ಬೆಳಗಾವಿಯಲ್ಲಿ ಬಿಜೆಪಿಯಿಂದ ಭಾರೀ ಪ್ರತಿಭಟನೆ

20/12/2024, 22:22

ಬೆಳಗಾವಿ(reporterkarnataka.com): ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಸಿ. ಟಿ.ರವಿ ಅವರ ಬಂಧನ ಖಂಡಿಸಿ ಬಿಜೆಪಿಯಿಂದ ಬೆಳಗಾವಿಯ ಚನ್ನಮ್ಮ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.


ಸುವರ್ಣಸೌಧದೊಳಕ್ಕೆ ನುಗ್ಗಿ ಕೆಲವು ಕಾಂಗ್ರೆಸ್ ಪುಡಾರಿಗಳು, ರೌಡಿಗಳು ದಾಂಧಲೆ ನಡೆಸಿದವರು ಹಾಗೂ ನಡುರಸ್ತೆಯಲ್ಲಿ ಹಲ್ಲೆ ಮಾಡಲು ಪ್ರಚೋದನೆ ನೀಡಿದವರನ್ನೂ ಸಹ ಬಂಧಿಸಬೇಕು. ಅಲ್ಲದೇ ಸಭಾಪತಿಗಳ ಗಮನಕ್ಕೂ ತರದೆ ಏಕಾಏಕಿ ಸಿ.ಟಿ. ರವಿ ಅವರನ್ನು ಬಂಧಿಸಿದ್ದು ಅಕ್ಷಮ್ಯ ಅಪರಾಧ. ಅವರು ಗಾಯವಾಗಿದ್ದರೂ ಆಸ್ಪತ್ರೆಗೆ ಕರೆದುಕೊಂಡು ಹೋಗದೇ ರಾತ್ರಿಯೆಲ್ಲಾ 400-500 ಕಿ.ಮೀ ಸುತ್ತಾಡಿಸಿ ಬೆಂಗಳೂರಿನ ನ್ಯಾಯಾಲಯಕ್ಕೆ ಹಾಜರು ಪಡಿಸುತ್ತೇವೆ ಎಂದು ಗದಗ, ರಾಮದುರ್ಗ ಸೇರಿ ಎಲ್ಲಾ ಪೊಲೀಸ್ ಸ್ಟೇಷನ್ ಸುತ್ತಾಡಿಸಿ ದ್ವೇಷ ಹಾಗೂ ಕೀಳುಮಟ್ಟದ ರಾಜಕೀಯ ಮಾಡುವ ಮೂಲಕ ಪ್ರಜಾಪ್ರಭುತ್ವಕ್ಕೆ ಕೊಳ್ಳಿ ಇಡಲು ಹೊರಟಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್. ಅಶೋಕ್, ಉಪ ನಾಯಕ ಅರವಿಂದ ಬೆಲ್ಲದ್, ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಮಾಜಿ ಶಾಸಕ ಸಂಜಯ್ ಪಾಟೀಲ್, ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್, ಗೀತಾ ಸುತಾರ್, ಸತೀಶ್ ಅಪ್ಪಾಜಿಗೋಳ ಸೇರಿದಂತೆ ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು