3:20 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಸಿ.ಟಿ.ರವಿ ಅವರದ್ದು ಕೊಳಕು ಮನಸ್ಸಿನ ವ್ಯಕ್ತಿತ್ವ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

25/12/2024, 17:06

ಬೆಳಗಾವಿ(reporterkarnataka.com): ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಮನಸ್ಸಿನಲ್ಲೆ ಕೊಳೆ ಇಟ್ಟುಕೊಂಡಿದ್ದಾರೆ. ಅದನ್ನು ಎಷ್ಟು ಬಾರಿ ತೊಳೆದರೂ ಹೋಗೋದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಅವರು, ಸಿ.ಟಿ.ರವಿ ಅವರೇ ನಿಮ್ಮ ನಾಲಿಗೆಯನ್ನು ಫಿನಾಯಿಲ್ ಹಾಕಿ ತೊಳೆಯಿರಿ. ಮೈಗೆ ಹಚ್ಚಿರೊ ಕೊಳಕನ್ನು ತೊಳೆಯಬಹುದು. ಮನಸ್ಸಿಗೆ ಹಚ್ಚಿರೋ ಕೊಳಕನ್ನು ತೊಳೆಯಲು ಸಾಧ್ಯವಿಲ್ಲ ಎಂದು ನನಗೂ ಹಿರಿಯರೊಬ್ಬರು ಹೇಳಿದ್ದಾರೆ ಎಂದು ಸಚಿವರು ತಿರುಗೇಟು ನೀಡಿದರು.
ಸಿ.ಟಿ.ರವಿ ಅವರ ಮನಸ್ಸಿನಲ್ಲೇ ಕೊಳಕಿದೆ. ಅಂತಹ ಕೊಳಕನ್ನು ತೊಳೆಯಲು ಸಾಧ್ಯವಿಲ್ಲ. ನಾನು ಎರಡು ದಿನಗಳ ಕಾಲ ಸರಿಯಾಗಿ ನಿದ್ದೆ ಮಾಡಲಿಲ್ಲ ಎಂದು ಸಚಿವರು ಹೇಳಿದರು.
ಅಂದು ಪರಿಷತ್ ಕಲಾಪದಲ್ಲಿ ಘಟನೆ ಆದ ಬಳಿಕ ನಾನು ಅಲ್ಲೆ ಕುಳಿತಿದ್ದೆ. ಅವರು ಊಸರವಳ್ಳಿ ಥರ ಓಡಿ ಹೋದರು. ತಕ್ಷಣವೇ ನಾನು ಹರಿಪ್ರಸಾದ್, ಬೋಸರಾಜು ಅವರಿಗೆ ಸಿ.ಟಿ.ರವಿ ಅವರು ಬಳಸಿದ ಭಾಷೆ ಬಗ್ಗೆ ವಿವರಿಸಿದೆ. ಡಾ. ಯತೀಂದ್ರ, ಉಮಾಶ್ರೀ, ನಾಗರಾಜ್ ಯಾದವ್, ಬಿಲ್ಕಿಸ್ ಬಾನೋ, ಎಲ್ಲರೂ ನನ್ನ ಹತ್ತಿರ ಬಂದು, ಸಿ.ಟಿ.ರವಿ ಬಳಸಿದ ಅಶ್ಲೀಲ ಪದದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಬಳಿಕ ಎಲ್ಲಾ ನಾಯಕರು ಜೊತೆಗೂಡಿ ಸಭಾಪತಿಗಳ ಬಳಿ ಹೋದೆವು ಎಂದು ಸಚಿವರು ವಿವರಿಸಿದರು.
ನಮ್ಮ ಮಾತನ್ನು ಆಲಿಸಿದ ಸಭಾಪತಿಗಳು ಕೂಡ ಕಣ್ಣೀರು ಹಾಕಿದರು. ಬಳಿಕ ಅಲ್ಲಿದ್ದ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಫೋನ್ ಮಾಡಿ ಘಟನೆಯನ್ನು ವಿವರಿಸಿದರು. ಯಾವುದೇ ಕಾರಣಕ್ಕೂ ಧೈರ್ಯಗೇಡಬೇಡಿ, ನಾವೆಲ್ಲಾ ನಿಮ್ಮೊಂದಿಗಿದ್ದೇವೆ ಎಂದು ಆ ಸಮಯದಲ್ಲಿ ಎಲ್ಲರೂ ನನಗೆ ಧೈರ್ಯ ತುಂಬಿದರು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು