10:42 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಸಿ.ಟಿ.ರವಿ ಅವರದ್ದು ಕೊಳಕು ಮನಸ್ಸಿನ ವ್ಯಕ್ತಿತ್ವ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

25/12/2024, 17:06

ಬೆಳಗಾವಿ(reporterkarnataka.com): ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಮನಸ್ಸಿನಲ್ಲೆ ಕೊಳೆ ಇಟ್ಟುಕೊಂಡಿದ್ದಾರೆ. ಅದನ್ನು ಎಷ್ಟು ಬಾರಿ ತೊಳೆದರೂ ಹೋಗೋದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಅವರು, ಸಿ.ಟಿ.ರವಿ ಅವರೇ ನಿಮ್ಮ ನಾಲಿಗೆಯನ್ನು ಫಿನಾಯಿಲ್ ಹಾಕಿ ತೊಳೆಯಿರಿ. ಮೈಗೆ ಹಚ್ಚಿರೊ ಕೊಳಕನ್ನು ತೊಳೆಯಬಹುದು. ಮನಸ್ಸಿಗೆ ಹಚ್ಚಿರೋ ಕೊಳಕನ್ನು ತೊಳೆಯಲು ಸಾಧ್ಯವಿಲ್ಲ ಎಂದು ನನಗೂ ಹಿರಿಯರೊಬ್ಬರು ಹೇಳಿದ್ದಾರೆ ಎಂದು ಸಚಿವರು ತಿರುಗೇಟು ನೀಡಿದರು.
ಸಿ.ಟಿ.ರವಿ ಅವರ ಮನಸ್ಸಿನಲ್ಲೇ ಕೊಳಕಿದೆ. ಅಂತಹ ಕೊಳಕನ್ನು ತೊಳೆಯಲು ಸಾಧ್ಯವಿಲ್ಲ. ನಾನು ಎರಡು ದಿನಗಳ ಕಾಲ ಸರಿಯಾಗಿ ನಿದ್ದೆ ಮಾಡಲಿಲ್ಲ ಎಂದು ಸಚಿವರು ಹೇಳಿದರು.
ಅಂದು ಪರಿಷತ್ ಕಲಾಪದಲ್ಲಿ ಘಟನೆ ಆದ ಬಳಿಕ ನಾನು ಅಲ್ಲೆ ಕುಳಿತಿದ್ದೆ. ಅವರು ಊಸರವಳ್ಳಿ ಥರ ಓಡಿ ಹೋದರು. ತಕ್ಷಣವೇ ನಾನು ಹರಿಪ್ರಸಾದ್, ಬೋಸರಾಜು ಅವರಿಗೆ ಸಿ.ಟಿ.ರವಿ ಅವರು ಬಳಸಿದ ಭಾಷೆ ಬಗ್ಗೆ ವಿವರಿಸಿದೆ. ಡಾ. ಯತೀಂದ್ರ, ಉಮಾಶ್ರೀ, ನಾಗರಾಜ್ ಯಾದವ್, ಬಿಲ್ಕಿಸ್ ಬಾನೋ, ಎಲ್ಲರೂ ನನ್ನ ಹತ್ತಿರ ಬಂದು, ಸಿ.ಟಿ.ರವಿ ಬಳಸಿದ ಅಶ್ಲೀಲ ಪದದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಬಳಿಕ ಎಲ್ಲಾ ನಾಯಕರು ಜೊತೆಗೂಡಿ ಸಭಾಪತಿಗಳ ಬಳಿ ಹೋದೆವು ಎಂದು ಸಚಿವರು ವಿವರಿಸಿದರು.
ನಮ್ಮ ಮಾತನ್ನು ಆಲಿಸಿದ ಸಭಾಪತಿಗಳು ಕೂಡ ಕಣ್ಣೀರು ಹಾಕಿದರು. ಬಳಿಕ ಅಲ್ಲಿದ್ದ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಫೋನ್ ಮಾಡಿ ಘಟನೆಯನ್ನು ವಿವರಿಸಿದರು. ಯಾವುದೇ ಕಾರಣಕ್ಕೂ ಧೈರ್ಯಗೇಡಬೇಡಿ, ನಾವೆಲ್ಲಾ ನಿಮ್ಮೊಂದಿಗಿದ್ದೇವೆ ಎಂದು ಆ ಸಮಯದಲ್ಲಿ ಎಲ್ಲರೂ ನನಗೆ ಧೈರ್ಯ ತುಂಬಿದರು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು