9:44 PM Friday20 - June 2025
ಬ್ರೇಕಿಂಗ್ ನ್ಯೂಸ್
Bangalore | ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ: ರಾಜ್ಯಾದ್ಯಂತ ಪರಿಸರ… Power Minister | ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ; ನೌಕರರ ಬೇಡಿಕೆಗಳಿಗೆ ಸ್ಪಂದನೆ:… ವಿದ್ಯುತ್ ಪ್ರಸರಣ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಮುಖ್ಯಮಂತ್ರಿ… ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ… Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ

ಇತ್ತೀಚಿನ ಸುದ್ದಿ

ಸಿ.ಟಿ‌. ರವಿ ಪತ್ರ ಬರೆದಿದ್ದಾರೆ, ಹೆಬ್ಬಾಳ್ಕರ್ ಅವರಿಂದ ಯಾವುದೇ ಪತ್ರ ಬಂದಿಲ್ಲ: ಸಭಾಪತಿ ಬಸವರಾಜ್ ಹೊರಟ್ಟಿ

25/12/2024, 16:58

ಹುಬ್ಬಳ್ಳಿ(reporterkarnataka.com): ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಈಗಾಗಲೇ 7 ಪೇಜ್ ಗಳ ಪತ್ರವನ್ನು ಬರೆದಿದ್ದಾರೆ. ಆದರೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರಿಂದ ಇದುವರೆಗೆ ಯಾವುದೇ ಪತ್ರ ಬಂದಿಲ್ಲ‌ ಎಂದು ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದರು.
ಈ ಕುರಿತು ನಗರದಲ್ಲಿ‌ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪರಿಷತ್ ಸದಸ್ಯರಾದ ಸಿ.ಟಿ. ರವಿಯವರು ಪತ್ರದಲ್ಲಿ ಪೊಲೀಸರು ನಡೆಸಿಕೊಂಡಿರುವುದರ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಸಿ.ಟಿ. ರವಿಯವರು ಸ್ಟ್ರೈಕ್ ಮಾಡುವ ವೇಳೆ ಸಂಜೆ 6 ಗಂಟೆಗೆ ಪೊಲೀಸರ ವಶಕ್ಕೆ ಪಡೆದಿರುವುದು ಹೇಳಿಕೊಂಡಿದ್ದಾರೆ.‌ ರವಿಯವರು ನಮ್ಮ ಸದನದ ಸದಸ್ಯರಾಗಿದ್ದು, ಹಾಗಾಗಿ‌ ಅವರ ಹಕ್ಕುಚ್ಯುತಿ ಬಗ್ಗೆ ಪರಿಶೀಲನೆ ಮಾಡುತ್ತೇವೆ. ಜತೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಂದ ಯಾವುದೇ ಪತ್ರ ಇನ್ನೂ
ಬಂದಿಲ್ಲ. ಘಟನಾ ದಿನ ಲಕ್ಷ್ಮೀ ‌ಅವರು ನೋವಿನಲ್ಲಿದ್ದರು, ಇತ್ತೀಚಿನ ಎರಡು ದಿನಗಳಿಂದ ಮಾಧ್ಯಮಗಳಲ್ಲಿ‌ ಅವರ ಹೇಳಿಕೆ ಗಮನಿಸಿದ್ದೇವೆ. ಅವರ ಹೇಳಿಕೆ ನೋಡಿದ್ದಾಗ‌ ಅವರು ನೊಂದಿರುವುದು ಗೊತ್ತಾಗುತ್ತೆ. ಕಾನೂನು ತನಿಖೆ ಹೊರತುಪಡಿಸಿ ಹೆಣ್ಮಕ್ಕಳಿಗೆ‌ ಗೌರವ ನೀಡುವುದು ನಮ್ಮ‌ ಧರ್ಮ. ನಮ್ಮಗೂ ಹೆಣ್ಮಕ್ಕಳು ಇದ್ದಾರೆ. ಲಕ್ಷ್ಮೀ ಅವರು ನಮ್ಮಗೆ ಮಗಳೆ ಅಂತಾ ತಿಳ್ಕೊಂಡಿದ್ದೇವೆ.‌ ಸಿಎಂ ಅವರೊಂದಿಗೆ ಮಾತಾಡಿ ಸದ್ಯ ಈ ವಾತಾವರಣ ತಿಳಿ ಮಾಡೋ ಪ್ರಯತ್ನದಲ್ಲಿದ್ದೇನಿ. ನನ್ನ ತೀರ್ಮಾನ ತೆಗೆದುಕೊಂಡಿದ್ದೇನೆ, ಅದಕ್ಕೆ ಬಹುತೇಕರು ಒಳ್ಳೆಯ ತೀರ್ಮಾನ ಅಂತಿದ್ದಾರೆ.‌ ಯಾರಿಗೂ ನೋವಾಗದ ರೀತಿಯಲ್ಲಿ ತೀರ್ಮಾನ ಮಾಡಿದ್ದೇನಿ. ಪರಿಷತ್ ಸದನದ ಘಟನೆಯ ಕುರಿತು ರಾಜ್ಯಪಾಲರ ಮಾಹಿತಿ ಕೇಳಿರುವ ವಿಚಾರ ಮಾತನಾಡಿ, ರಾಜ್ಯಪಾಲರು ಮಾಹಿತಿ ಕೇಳಿರುವುದು ನಿಜ. 19 ದಿನಾಂಕದಂದು ಆಗಿರುವ ಘಟನೆ ವಿವರಣೆ ಕೇಳಿದರು, ರಾಜ್ಯಪಾಲರಿಗೆ ವಿವರಣೆ ನೀಡಿದ್ದೇನಿ. ಡಿಸೆಂಬರ್ 27 ರಂದು ಬೆಳಗಾವಿಗೆ ತೆರಳಲಿದ್ದೇನಿ ಸಿಕ್ಕರೆ ಮಾತಾಡುತ್ತೇನೆ, ಇಲ್ವಾದಲ್ಲಿ ಬೆಂಗಳೂರಿನಲ್ಲಿ ಮಾತಾಡುತ್ತೇನೆ. ಈ ಪ್ರಕರಣ ಸಾಮಾಧಾನ ಮಾಡೋ ಜವಾಬ್ದಾರಿ ಎಲ್ಲರ ಮೇಲೂ ಇದೆ, ಸಮಾಧಾನ ಮಾಡೋವುದು ಎಲ್ಲರಿಗೂ ಒಳ್ಳೆಯದು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು