1:34 AM Wednesday17 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಸಿ.ಟಿ. ರವಿ ಎಲ್ಲ ನಾಯಕರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಬಹುದಾ? ನಾವು ಅವರ ಕುರಿತು ಮಾತನಾಡಬಾರ್ದಾ?: ಕೆಪಿಸಿಸಿ ವಕ್ತಾರ ಲಕ್ಷ್ಮಣ್

17/08/2023, 19:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಬಿಜೆಪಿ ನಾಯಕ ಸಿ.ಟಿ.ರವಿ ಮಾತ್ರ ಎಲ್ಲಾ ನಾಯಕರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಬಹುದು. ಆದರೆ ಅವರ ಬಗ್ಗೆ ನಿಜ ಹೇಳಿದ್ರೆ ಕೆಳಗಿಂದ ಮೇಲಕ್ಕೆ ಉರ್ದೋಗುತ್ತೆ ಎಂದು
ರವಿ ವಿರುದ್ಧ ಕೆಪಿಸಿಸಿ ರಾಜ್ಯ ವಕ್ತಾರ ಲಕ್ಷ್ಮಣ್ ವಾಗ್ದಾಳಿ ನಡೆಸಿದ್ದಾರೆ.
2020ರಲ್ಲಿ ಸಿ.ಟಿ.ರವಿ ಎಲ್ಲೆಲ್ಲಿ ಬೇನಾಮಿ ಹೆಸರಲ್ಲಿ ಆಸ್ತಿ ಮಾಡಿದ್ದಾರೆಂದು ಪ್ರಶ್ನಿಸಿದ್ದೆ.
ಸತ್ಯಹರಿಶ್ಚಂದ್ರನಂತೆ ಮಾತನಾಡ್ತೀರಾ, ನಿಮ್ಮ ಹಿನ್ನೆಲೆ ಏನೆಂದು ಪ್ರಶ್ನಿಸಿದ್ದೆ. ನೀವು ಬ್ಯುಸಿನಿಸ್ ಮ್ಯಾನ್, ಎಜುಕೇಶನಲಿಸ್ಟ್, ಇಂಡಸ್ಟ್ರಿಯಲಿಸ್ಟ್, ರಿಯಲ್ ಎಸ್ಟೇಟ್ ಏನೆಂದು ಜನರಿಗೆ ತಿಳಿಸಿ ಎಂದಿದ್ದೆ ಎಂದು ಲಕ್ಷ್ಮಣ್ ನುಡಿದರು.
ಜನ ಹೇಳ್ತಿದ್ದಾರೆ, ನೀವು ಲೂಟಿ ರವಿ ಎಂದು ಪ್ರಶ್ನೆ ಮಾಡಿದ್ದೆ.
ಸಿ.ಟಿ. ರವಿ ನನ್ನ ಮೇಲೆ ಮಾನನಷ್ಟ ಮೊಕ್ಕದ್ದಮೆ ಹಾಕಿದ್ರು, ಇಂದು ಬೇಲ್ ಆಗಿದೆ. ಇತರೆ ಬಿಜೆಪಿ ಮುಖಂಡರು ಕೂಡ ಬೆಂಗಳೂರು, ಮೈಸೂರಿನಲ್ಲಿ ಕೇಸ್ ದಾಖಲಿಸಿದ್ದಾರೆ.
ಬಿಜೆಪಿ, ಪ್ರಧಾನಿ ಮೋದಿ, ಸಿ.ಟಿ.ರವಿ ವಿರುದ್ಧ ಮಾತನಾಡಿದ್ರೆ ಕೇಸ್ ಹಾಕಿ, ಇಡಿ, ಸಿಬಿಐ, ಪೊಲೀಸ್ ಮೂಲಕ ಹೆದರಿಸಲು ಪ್ರಯತ್ನಿಸುತ್ತಾರೆ.
ಬಿಜೆಪಿಯವರ ಈ ಬೆದರಿಕೆಗೆ ನಾವು ಬೆದರುವ ವಂಶಸ್ಥರಲ್ಲ, ಕಾಂಗ್ರೆಸ್ ವಂಶಸ್ಥರು.
ನನ್ನ ಆರೋಪದ ಬಗ್ಗೆ ತನಿಖೆ ಮಾಡುವಂತೆ ಸರ್ಕಾರಕ್ಕೂ ಮನವಿ ಮಾಡ್ತೇನೆ. ನ್ಯಾಯಧೀಶರ ಮೂಲಕ ನನ್ನ ಆರೋಪದ ತನಿಖೆ ಆಗಬೇಕೆಂದು ಒತ್ತಾಯಿಸುತ್ತೇನೆ. ನನ್ನ ಆರೋಪದ ಬಗ್ಗೆ ಸಿಐಡಿ ಮೂಲಕ ಸಮಗ್ರ ತನಿಖೆಯಾಗಬೇಕೆಂದು ಸಿಎಂಗೆ ಮನವಿ ಮಾಡಿದ್ದೇನೆ ಎಂದು ಚಿಕ್ಕಮಗಳೂರಿನಲ್ಲಿ ಕೆಪಿಸಿಸಿ ರಾಜ್ಯ ವಕ್ತಾರ ಲಕ್ಷ್ಮಣ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು