1:21 AM Tuesday23 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಸಿ.ಟಿ. ರವಿ ಎಲ್ಲ ನಾಯಕರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಬಹುದಾ? ನಾವು ಅವರ ಕುರಿತು ಮಾತನಾಡಬಾರ್ದಾ?: ಕೆಪಿಸಿಸಿ ವಕ್ತಾರ ಲಕ್ಷ್ಮಣ್

17/08/2023, 19:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಬಿಜೆಪಿ ನಾಯಕ ಸಿ.ಟಿ.ರವಿ ಮಾತ್ರ ಎಲ್ಲಾ ನಾಯಕರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಬಹುದು. ಆದರೆ ಅವರ ಬಗ್ಗೆ ನಿಜ ಹೇಳಿದ್ರೆ ಕೆಳಗಿಂದ ಮೇಲಕ್ಕೆ ಉರ್ದೋಗುತ್ತೆ ಎಂದು
ರವಿ ವಿರುದ್ಧ ಕೆಪಿಸಿಸಿ ರಾಜ್ಯ ವಕ್ತಾರ ಲಕ್ಷ್ಮಣ್ ವಾಗ್ದಾಳಿ ನಡೆಸಿದ್ದಾರೆ.
2020ರಲ್ಲಿ ಸಿ.ಟಿ.ರವಿ ಎಲ್ಲೆಲ್ಲಿ ಬೇನಾಮಿ ಹೆಸರಲ್ಲಿ ಆಸ್ತಿ ಮಾಡಿದ್ದಾರೆಂದು ಪ್ರಶ್ನಿಸಿದ್ದೆ.
ಸತ್ಯಹರಿಶ್ಚಂದ್ರನಂತೆ ಮಾತನಾಡ್ತೀರಾ, ನಿಮ್ಮ ಹಿನ್ನೆಲೆ ಏನೆಂದು ಪ್ರಶ್ನಿಸಿದ್ದೆ. ನೀವು ಬ್ಯುಸಿನಿಸ್ ಮ್ಯಾನ್, ಎಜುಕೇಶನಲಿಸ್ಟ್, ಇಂಡಸ್ಟ್ರಿಯಲಿಸ್ಟ್, ರಿಯಲ್ ಎಸ್ಟೇಟ್ ಏನೆಂದು ಜನರಿಗೆ ತಿಳಿಸಿ ಎಂದಿದ್ದೆ ಎಂದು ಲಕ್ಷ್ಮಣ್ ನುಡಿದರು.
ಜನ ಹೇಳ್ತಿದ್ದಾರೆ, ನೀವು ಲೂಟಿ ರವಿ ಎಂದು ಪ್ರಶ್ನೆ ಮಾಡಿದ್ದೆ.
ಸಿ.ಟಿ. ರವಿ ನನ್ನ ಮೇಲೆ ಮಾನನಷ್ಟ ಮೊಕ್ಕದ್ದಮೆ ಹಾಕಿದ್ರು, ಇಂದು ಬೇಲ್ ಆಗಿದೆ. ಇತರೆ ಬಿಜೆಪಿ ಮುಖಂಡರು ಕೂಡ ಬೆಂಗಳೂರು, ಮೈಸೂರಿನಲ್ಲಿ ಕೇಸ್ ದಾಖಲಿಸಿದ್ದಾರೆ.
ಬಿಜೆಪಿ, ಪ್ರಧಾನಿ ಮೋದಿ, ಸಿ.ಟಿ.ರವಿ ವಿರುದ್ಧ ಮಾತನಾಡಿದ್ರೆ ಕೇಸ್ ಹಾಕಿ, ಇಡಿ, ಸಿಬಿಐ, ಪೊಲೀಸ್ ಮೂಲಕ ಹೆದರಿಸಲು ಪ್ರಯತ್ನಿಸುತ್ತಾರೆ.
ಬಿಜೆಪಿಯವರ ಈ ಬೆದರಿಕೆಗೆ ನಾವು ಬೆದರುವ ವಂಶಸ್ಥರಲ್ಲ, ಕಾಂಗ್ರೆಸ್ ವಂಶಸ್ಥರು.
ನನ್ನ ಆರೋಪದ ಬಗ್ಗೆ ತನಿಖೆ ಮಾಡುವಂತೆ ಸರ್ಕಾರಕ್ಕೂ ಮನವಿ ಮಾಡ್ತೇನೆ. ನ್ಯಾಯಧೀಶರ ಮೂಲಕ ನನ್ನ ಆರೋಪದ ತನಿಖೆ ಆಗಬೇಕೆಂದು ಒತ್ತಾಯಿಸುತ್ತೇನೆ. ನನ್ನ ಆರೋಪದ ಬಗ್ಗೆ ಸಿಐಡಿ ಮೂಲಕ ಸಮಗ್ರ ತನಿಖೆಯಾಗಬೇಕೆಂದು ಸಿಎಂಗೆ ಮನವಿ ಮಾಡಿದ್ದೇನೆ ಎಂದು ಚಿಕ್ಕಮಗಳೂರಿನಲ್ಲಿ ಕೆಪಿಸಿಸಿ ರಾಜ್ಯ ವಕ್ತಾರ ಲಕ್ಷ್ಮಣ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು