9:17 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಸಿ.ಟಿ. ರವಿ ಎಲ್ಲ ನಾಯಕರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಬಹುದಾ? ನಾವು ಅವರ ಕುರಿತು ಮಾತನಾಡಬಾರ್ದಾ?: ಕೆಪಿಸಿಸಿ ವಕ್ತಾರ ಲಕ್ಷ್ಮಣ್

17/08/2023, 19:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಬಿಜೆಪಿ ನಾಯಕ ಸಿ.ಟಿ.ರವಿ ಮಾತ್ರ ಎಲ್ಲಾ ನಾಯಕರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಬಹುದು. ಆದರೆ ಅವರ ಬಗ್ಗೆ ನಿಜ ಹೇಳಿದ್ರೆ ಕೆಳಗಿಂದ ಮೇಲಕ್ಕೆ ಉರ್ದೋಗುತ್ತೆ ಎಂದು
ರವಿ ವಿರುದ್ಧ ಕೆಪಿಸಿಸಿ ರಾಜ್ಯ ವಕ್ತಾರ ಲಕ್ಷ್ಮಣ್ ವಾಗ್ದಾಳಿ ನಡೆಸಿದ್ದಾರೆ.
2020ರಲ್ಲಿ ಸಿ.ಟಿ.ರವಿ ಎಲ್ಲೆಲ್ಲಿ ಬೇನಾಮಿ ಹೆಸರಲ್ಲಿ ಆಸ್ತಿ ಮಾಡಿದ್ದಾರೆಂದು ಪ್ರಶ್ನಿಸಿದ್ದೆ.
ಸತ್ಯಹರಿಶ್ಚಂದ್ರನಂತೆ ಮಾತನಾಡ್ತೀರಾ, ನಿಮ್ಮ ಹಿನ್ನೆಲೆ ಏನೆಂದು ಪ್ರಶ್ನಿಸಿದ್ದೆ. ನೀವು ಬ್ಯುಸಿನಿಸ್ ಮ್ಯಾನ್, ಎಜುಕೇಶನಲಿಸ್ಟ್, ಇಂಡಸ್ಟ್ರಿಯಲಿಸ್ಟ್, ರಿಯಲ್ ಎಸ್ಟೇಟ್ ಏನೆಂದು ಜನರಿಗೆ ತಿಳಿಸಿ ಎಂದಿದ್ದೆ ಎಂದು ಲಕ್ಷ್ಮಣ್ ನುಡಿದರು.
ಜನ ಹೇಳ್ತಿದ್ದಾರೆ, ನೀವು ಲೂಟಿ ರವಿ ಎಂದು ಪ್ರಶ್ನೆ ಮಾಡಿದ್ದೆ.
ಸಿ.ಟಿ. ರವಿ ನನ್ನ ಮೇಲೆ ಮಾನನಷ್ಟ ಮೊಕ್ಕದ್ದಮೆ ಹಾಕಿದ್ರು, ಇಂದು ಬೇಲ್ ಆಗಿದೆ. ಇತರೆ ಬಿಜೆಪಿ ಮುಖಂಡರು ಕೂಡ ಬೆಂಗಳೂರು, ಮೈಸೂರಿನಲ್ಲಿ ಕೇಸ್ ದಾಖಲಿಸಿದ್ದಾರೆ.
ಬಿಜೆಪಿ, ಪ್ರಧಾನಿ ಮೋದಿ, ಸಿ.ಟಿ.ರವಿ ವಿರುದ್ಧ ಮಾತನಾಡಿದ್ರೆ ಕೇಸ್ ಹಾಕಿ, ಇಡಿ, ಸಿಬಿಐ, ಪೊಲೀಸ್ ಮೂಲಕ ಹೆದರಿಸಲು ಪ್ರಯತ್ನಿಸುತ್ತಾರೆ.
ಬಿಜೆಪಿಯವರ ಈ ಬೆದರಿಕೆಗೆ ನಾವು ಬೆದರುವ ವಂಶಸ್ಥರಲ್ಲ, ಕಾಂಗ್ರೆಸ್ ವಂಶಸ್ಥರು.
ನನ್ನ ಆರೋಪದ ಬಗ್ಗೆ ತನಿಖೆ ಮಾಡುವಂತೆ ಸರ್ಕಾರಕ್ಕೂ ಮನವಿ ಮಾಡ್ತೇನೆ. ನ್ಯಾಯಧೀಶರ ಮೂಲಕ ನನ್ನ ಆರೋಪದ ತನಿಖೆ ಆಗಬೇಕೆಂದು ಒತ್ತಾಯಿಸುತ್ತೇನೆ. ನನ್ನ ಆರೋಪದ ಬಗ್ಗೆ ಸಿಐಡಿ ಮೂಲಕ ಸಮಗ್ರ ತನಿಖೆಯಾಗಬೇಕೆಂದು ಸಿಎಂಗೆ ಮನವಿ ಮಾಡಿದ್ದೇನೆ ಎಂದು ಚಿಕ್ಕಮಗಳೂರಿನಲ್ಲಿ ಕೆಪಿಸಿಸಿ ರಾಜ್ಯ ವಕ್ತಾರ ಲಕ್ಷ್ಮಣ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು