4:19 AM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಸಿ.ಟಿ. ರವಿ ಎಲ್ಲ ನಾಯಕರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಬಹುದಾ? ನಾವು ಅವರ ಕುರಿತು ಮಾತನಾಡಬಾರ್ದಾ?: ಕೆಪಿಸಿಸಿ ವಕ್ತಾರ ಲಕ್ಷ್ಮಣ್

17/08/2023, 19:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಬಿಜೆಪಿ ನಾಯಕ ಸಿ.ಟಿ.ರವಿ ಮಾತ್ರ ಎಲ್ಲಾ ನಾಯಕರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಬಹುದು. ಆದರೆ ಅವರ ಬಗ್ಗೆ ನಿಜ ಹೇಳಿದ್ರೆ ಕೆಳಗಿಂದ ಮೇಲಕ್ಕೆ ಉರ್ದೋಗುತ್ತೆ ಎಂದು
ರವಿ ವಿರುದ್ಧ ಕೆಪಿಸಿಸಿ ರಾಜ್ಯ ವಕ್ತಾರ ಲಕ್ಷ್ಮಣ್ ವಾಗ್ದಾಳಿ ನಡೆಸಿದ್ದಾರೆ.
2020ರಲ್ಲಿ ಸಿ.ಟಿ.ರವಿ ಎಲ್ಲೆಲ್ಲಿ ಬೇನಾಮಿ ಹೆಸರಲ್ಲಿ ಆಸ್ತಿ ಮಾಡಿದ್ದಾರೆಂದು ಪ್ರಶ್ನಿಸಿದ್ದೆ.
ಸತ್ಯಹರಿಶ್ಚಂದ್ರನಂತೆ ಮಾತನಾಡ್ತೀರಾ, ನಿಮ್ಮ ಹಿನ್ನೆಲೆ ಏನೆಂದು ಪ್ರಶ್ನಿಸಿದ್ದೆ. ನೀವು ಬ್ಯುಸಿನಿಸ್ ಮ್ಯಾನ್, ಎಜುಕೇಶನಲಿಸ್ಟ್, ಇಂಡಸ್ಟ್ರಿಯಲಿಸ್ಟ್, ರಿಯಲ್ ಎಸ್ಟೇಟ್ ಏನೆಂದು ಜನರಿಗೆ ತಿಳಿಸಿ ಎಂದಿದ್ದೆ ಎಂದು ಲಕ್ಷ್ಮಣ್ ನುಡಿದರು.
ಜನ ಹೇಳ್ತಿದ್ದಾರೆ, ನೀವು ಲೂಟಿ ರವಿ ಎಂದು ಪ್ರಶ್ನೆ ಮಾಡಿದ್ದೆ.
ಸಿ.ಟಿ. ರವಿ ನನ್ನ ಮೇಲೆ ಮಾನನಷ್ಟ ಮೊಕ್ಕದ್ದಮೆ ಹಾಕಿದ್ರು, ಇಂದು ಬೇಲ್ ಆಗಿದೆ. ಇತರೆ ಬಿಜೆಪಿ ಮುಖಂಡರು ಕೂಡ ಬೆಂಗಳೂರು, ಮೈಸೂರಿನಲ್ಲಿ ಕೇಸ್ ದಾಖಲಿಸಿದ್ದಾರೆ.
ಬಿಜೆಪಿ, ಪ್ರಧಾನಿ ಮೋದಿ, ಸಿ.ಟಿ.ರವಿ ವಿರುದ್ಧ ಮಾತನಾಡಿದ್ರೆ ಕೇಸ್ ಹಾಕಿ, ಇಡಿ, ಸಿಬಿಐ, ಪೊಲೀಸ್ ಮೂಲಕ ಹೆದರಿಸಲು ಪ್ರಯತ್ನಿಸುತ್ತಾರೆ.
ಬಿಜೆಪಿಯವರ ಈ ಬೆದರಿಕೆಗೆ ನಾವು ಬೆದರುವ ವಂಶಸ್ಥರಲ್ಲ, ಕಾಂಗ್ರೆಸ್ ವಂಶಸ್ಥರು.
ನನ್ನ ಆರೋಪದ ಬಗ್ಗೆ ತನಿಖೆ ಮಾಡುವಂತೆ ಸರ್ಕಾರಕ್ಕೂ ಮನವಿ ಮಾಡ್ತೇನೆ. ನ್ಯಾಯಧೀಶರ ಮೂಲಕ ನನ್ನ ಆರೋಪದ ತನಿಖೆ ಆಗಬೇಕೆಂದು ಒತ್ತಾಯಿಸುತ್ತೇನೆ. ನನ್ನ ಆರೋಪದ ಬಗ್ಗೆ ಸಿಐಡಿ ಮೂಲಕ ಸಮಗ್ರ ತನಿಖೆಯಾಗಬೇಕೆಂದು ಸಿಎಂಗೆ ಮನವಿ ಮಾಡಿದ್ದೇನೆ ಎಂದು ಚಿಕ್ಕಮಗಳೂರಿನಲ್ಲಿ ಕೆಪಿಸಿಸಿ ರಾಜ್ಯ ವಕ್ತಾರ ಲಕ್ಷ್ಮಣ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು