8:06 AM Sunday18 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಮೇಲೆ ಹಲ್ಲೆ: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಖಂಡನೆ

19/12/2024, 23:58

ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಮೇಲೆ ಹಲ್ಲೆ: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಖಂಡನೆ

ಮಂಗಳೂರು(reporterkarnataka.com):
ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯರಾದ ಸಿ‌‌.ಟಿ.ರವಿ ಯವರ ಮೇಲೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರ ಸಹೋದರ ಚೆನ್ನರಾಜ ಮತ್ತು ಆಪ್ತ ಸಹಾಯಕ ಸದ್ದಾಂ ಮತ್ತು ಸಂಗಡಿಗರು ಹಲ್ಲೆ ಮಾಡುವುದರ ಮೂಲಕ ತಮ್ಮ ಗೂಂಡಾ ಪ್ರವೃತ್ತಿಯನ್ನು ರಾಜ್ಯದ ಶಕ್ತಿ ಕೇಂದ್ರವಾದ ಸುವರ್ಣ ಸೌಧದ ಒಳಗೂ ಆರಂಭಿಸಿ ಅತೀ ಕೆಟ್ಟ ಘಟನೆಗೆ ಕಾರಣರಾಗಿದ್ದಾರೆ ಎಂದು ದ.ಕ. ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.
ಭೃಷ್ಟಾಚಾರ ಮಾಡಿದರೂ ಮೊಂಡುತನ ತೋರುವ ಸಿದ್ದರಾಮಯ್ಯನ ನಡವಳಿಕೆ ಕಾಂಗ್ರೇಸಿಗರ ಭಂಡತನಕ್ಕೆ ದಾರಿ ಮಾಡಿದಂತಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ವಿಧಾನ ಪರಿಷತ್ ನ ಸದಸ್ಯರಾದ ಕಿಶೋರ್ ಕುಮಾರ್ ರವರ ಮೇಲೂ ಹಲ್ಲೆ ನಡೆಸಿರುವುದನ್ನು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಅವರು ಖಂಡಿಸಿದ್ದಾರೆ.
ಸುವರ್ಣ ಸೌಧದಲ್ಲಿ ಆಗಿರುವ ಭದ್ರತಾ ವೈಫಲ್ಯಕ್ಕೆ ಮತ್ತು ಆಗಿರುವ ಘಟನೆಗೆ ಮುಖ್ಯಮಂತ್ರಿಗಳು ಕ್ಷಮೆಯಾಚಿಸಬೇಕು ಮತ್ತು ಹಲ್ಲೆಕೋರರಿಗೆ ಶಿಕ್ಷೆಯಾಗ ಬೇಕೆಂದು ಅವರು ಆಗ್ರಹಿಸಿದ್ದಾರೆ.
ಜನಪ್ರತಿನಿಧಿಗಳಿಗೆ ರಾಜ್ಯದ ಶಕ್ತಿಕೇಂದ್ರದಲ್ಲೇ ರಕ್ಷಣೆ ಇಲ್ಲದಿರುವುದು ಅತ್ಯಂತ ಕಳವಳಕಾರಿ ಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ಕೇವಲ ಈ ರೀತಿಯ ಘಟನೆಗಳಿಂದ ರಾಜ್ಯ ಸುದ್ದಿಯಾಗುತ್ತಿರುವುದು ಬಹಳ ಖೇದಕರ. ಉತ್ತರ ಕರ್ಣಾಟಕದ ಜನತೆಯ ಬೇಡಿಕೆ ಮತ್ತು ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ ಯಾಗಬೇಕಿದ್ದ ಸುವರ್ಣ ಸೌಧ ಗೂಂಡತನಕ್ಕೆ ಸಾಕ್ಷಿಯಾಗಿರುವುದು ನಾಚಿಕೆಗೇಡು. ಜತೆಯಲ್ಲಿ ಸಾರ್ವಜನಿಕರಿಗೆ ಕಾಂಗ್ರೆಸಿಗರಿಂದ ಆಗುತ್ತಿರುವ ಅನ್ಯಾಯದ ಪಾಡು ಕೇಳಂದತಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು