8:35 PM Saturday25 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಮೇಲೆ ಹಲ್ಲೆ: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಖಂಡನೆ

19/12/2024, 23:58

ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಮೇಲೆ ಹಲ್ಲೆ: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಖಂಡನೆ

ಮಂಗಳೂರು(reporterkarnataka.com):
ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯರಾದ ಸಿ‌‌.ಟಿ.ರವಿ ಯವರ ಮೇಲೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರ ಸಹೋದರ ಚೆನ್ನರಾಜ ಮತ್ತು ಆಪ್ತ ಸಹಾಯಕ ಸದ್ದಾಂ ಮತ್ತು ಸಂಗಡಿಗರು ಹಲ್ಲೆ ಮಾಡುವುದರ ಮೂಲಕ ತಮ್ಮ ಗೂಂಡಾ ಪ್ರವೃತ್ತಿಯನ್ನು ರಾಜ್ಯದ ಶಕ್ತಿ ಕೇಂದ್ರವಾದ ಸುವರ್ಣ ಸೌಧದ ಒಳಗೂ ಆರಂಭಿಸಿ ಅತೀ ಕೆಟ್ಟ ಘಟನೆಗೆ ಕಾರಣರಾಗಿದ್ದಾರೆ ಎಂದು ದ.ಕ. ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.
ಭೃಷ್ಟಾಚಾರ ಮಾಡಿದರೂ ಮೊಂಡುತನ ತೋರುವ ಸಿದ್ದರಾಮಯ್ಯನ ನಡವಳಿಕೆ ಕಾಂಗ್ರೇಸಿಗರ ಭಂಡತನಕ್ಕೆ ದಾರಿ ಮಾಡಿದಂತಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ವಿಧಾನ ಪರಿಷತ್ ನ ಸದಸ್ಯರಾದ ಕಿಶೋರ್ ಕುಮಾರ್ ರವರ ಮೇಲೂ ಹಲ್ಲೆ ನಡೆಸಿರುವುದನ್ನು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಅವರು ಖಂಡಿಸಿದ್ದಾರೆ.
ಸುವರ್ಣ ಸೌಧದಲ್ಲಿ ಆಗಿರುವ ಭದ್ರತಾ ವೈಫಲ್ಯಕ್ಕೆ ಮತ್ತು ಆಗಿರುವ ಘಟನೆಗೆ ಮುಖ್ಯಮಂತ್ರಿಗಳು ಕ್ಷಮೆಯಾಚಿಸಬೇಕು ಮತ್ತು ಹಲ್ಲೆಕೋರರಿಗೆ ಶಿಕ್ಷೆಯಾಗ ಬೇಕೆಂದು ಅವರು ಆಗ್ರಹಿಸಿದ್ದಾರೆ.
ಜನಪ್ರತಿನಿಧಿಗಳಿಗೆ ರಾಜ್ಯದ ಶಕ್ತಿಕೇಂದ್ರದಲ್ಲೇ ರಕ್ಷಣೆ ಇಲ್ಲದಿರುವುದು ಅತ್ಯಂತ ಕಳವಳಕಾರಿ ಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ಕೇವಲ ಈ ರೀತಿಯ ಘಟನೆಗಳಿಂದ ರಾಜ್ಯ ಸುದ್ದಿಯಾಗುತ್ತಿರುವುದು ಬಹಳ ಖೇದಕರ. ಉತ್ತರ ಕರ್ಣಾಟಕದ ಜನತೆಯ ಬೇಡಿಕೆ ಮತ್ತು ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ ಯಾಗಬೇಕಿದ್ದ ಸುವರ್ಣ ಸೌಧ ಗೂಂಡತನಕ್ಕೆ ಸಾಕ್ಷಿಯಾಗಿರುವುದು ನಾಚಿಕೆಗೇಡು. ಜತೆಯಲ್ಲಿ ಸಾರ್ವಜನಿಕರಿಗೆ ಕಾಂಗ್ರೆಸಿಗರಿಂದ ಆಗುತ್ತಿರುವ ಅನ್ಯಾಯದ ಪಾಡು ಕೇಳಂದತಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು