9:40 AM Wednesday19 - August 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ…

ಇತ್ತೀಚಿನ ಸುದ್ದಿ

ಕಸ್ಟಮ್ಸ್ ಸುಂಕ ಮತ್ತು ನಿರ್ದಿಷ್ಟ ಖಾದ್ಯ ತೈಲಗಳ ಮೇಲಿನ ಕೃಷಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸೆಸ್  ಕಡಿತ: ಸಿಬಿಐಸಿ ಆದೇಶ

14/10/2021, 08:39

ಹೊಸದಿಲ್ಲಿ(reporterkarnataka.com) : ಕೇಂದ್ರೀಯ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ (ಸಿಬಿಐಸಿ) ಎರಡು ಪ್ರತ್ಯೇಕ ಆದೇಶಗಳಲ್ಲಿ ಮೂಲ ಕಸ್ಟಮ್ಸ್ ಸುಂಕ ಮತ್ತು ನಿರ್ದಿಷ್ಟ ಖಾದ್ಯ ತೈಲಗಳ ಮೇಲಿನ ಕೃಷಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸೆಸ್ ಅನ್ನು ಕಡಿತಗೊಳಿಸಿದೆ.

ಕಚ್ಚಾ ತಾಳೆ ಎಣ್ಣೆ, ಕಚ್ಚಾ ಸೋಯಾ-ಬೀನ್ ಎಣ್ಣೆ ಮತ್ತು ಕಚ್ಚಾ ಸೂರ್ಯಕಾಂತಿ ಬೀಜದ ಎಣ್ಣೆಯ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು ಶೇ 2.5ರಿಂದ ಶೂನ್ಯಕ್ಕೆ ಇಳಿಸಲಾಗಿದೆ. ಕಚ್ಚಾ ತಾಳೆ ಎಣ್ಣೆಯು ಕೃಷಿ ಸೆಸ್ ಅನ್ನು ಶೇ 20ರಿಂದ ಶೇ 7.5ಕ್ಕೆ ಭಾರೀ ಪ್ರಮಾಣದಲ್ಲಿ ಇಳಿಕೆ ಮಾಡಿರುವುದರ ಅನುಕೂಲ ಗ್ರಾಹಕರಿಗೆ ಆಗಲಿದೆ.

ಕಚ್ಚಾ ಸೋಯಾ-ಬೀನ್ ಎಣ್ಣೆ ಮತ್ತು ಕಚ್ಚಾ ಸೂರ್ಯಕಾಂತಿ ಎಣ್ಣೆ ಎರಡರ ಮೇಲಿನ ಕೃಷಿ ಸೆಸ್ ಅನ್ನು ಶೇ 20ರಿಂದ ಶೇ 5ಕ್ಕೆ ಇಳಿಸಲಾಗಿದೆ. ಈ ಎಲ್ಲ ಬದಲಾವಣೆಗಳು ಗುರುವಾರದಿಂದ (ಅಕ್ಟೋಬರ್ 14, 2021ರಿಂದ 2021ರ ಮಾರ್ಚ್ ರ ಅಂತ್ಯದವರೆಗೆ) ಜಾರಿಯಲ್ಲಿರುತ್ತವೆ ಎಂದು ಆದೇಶಗಳಲ್ಲಿ ತೋರಿಸಲಾಗಿದೆ.

ಖಾದ್ಯ ದರ್ಜೆಯ ಸೋಯಾಬೀನ್ ಎಣ್ಣೆ, ಖಾದ್ಯ ದರ್ಜೆಯ ಸೂರ್ಯಕಾಂತಿ ಎಣ್ಣೆ, ಸಂಸ್ಕರಿಸಿದ ಬ್ಲೀಚ್ ಡಿಯೋಡರೈಸ್ಡ್ (ಆರ್ ಬಿಡಿ) ಪಾಮ್ ಆಯಿಲ್, ಆರ್ ಬಿಡಿ ಪಾಮೋಲಿನ್, ಆರ್ ಬಿಡಿ ಪಾಮ್ ಸ್ಟೀರಿನ್ ಮತ್ತು ಕಚ್ಚಾ ತಾಳೆ ಎಣ್ಣೆಯನ್ನು ಹೊರತುಪಡಿಸಿ ಯಾವುದೇ ಪಾಮ್ ಎಣ್ಣೆಯನ್ನು ಶೇ 32.5ರಿಂದ ಶೇ 17.5ಕ್ಕೆ ಕಡಿಮೆ ಮಾಡಲಾಗಿದೆ. ಅಕ್ಟೋಬರ್ 8ರಿಂದ ಜಾರಿಗೆ ಬರುವಂತೆ ನ್ಯಾಷನಲ್ ಕಮಾಡಿಟಿ ಮತ್ತು ಡೆರಿವೇಟಿವ್ಸ್ ಎಕ್ಸ್‌ಚೇಂಜ್ ಲಿಮಿಟೆಡ್ (NCDEX)ನಲ್ಲಿ ಸಾಸಿವೆ ಎಣ್ಣೆ ಮತ್ತು ಎಣ್ಣೆಬೀಜಗಳ ಮೇಲೆ ಸ್ಪೆಕ್ಯುಲೆಟಿವ್ (ಸಟ್ಟಾ) ವ್ಯಾಪಾರವನ್ನು ಸರ್ಕಾರ ಸ್ಥಗಿತಗೊಳಿಸಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಖಾದ್ಯ ತೈಲದ ಹೆಚ್ಚಿನ ಬೆಲೆಗಳು ದೇಶೀಯ ಬೆಲೆಯ ಮೇಲೆ ಗಣನೀಯ ಪರಿಣಾಮ ಬೀರುತ್ತವೆ. ಗ್ರಾಹಕ ಬೆಲೆ ಸೂಚ್ಯಂಕ ಆಧಾರಿತ ತೈಲಗಳು ಮತ್ತು ಫ್ಯಾಟ್ ಹಣದುಬ್ಬರವು ಸೆಪ್ಟೆಂಬರ್‌ನಲ್ಲಿ ವರ್ಷದಿಂದ ವರ್ಷಕ್ಕೆ ಶೇ 34.19 ಹೆಚ್ಚಾಗಿದೆ ಎಂದು ಅಂಕಿಅಂಶಗಳ ಸಚಿವಾಲಯದಿಂದ ಲಭ್ಯವಿರುವ ಮಾಹಿತಿಯ ಪ್ರಕಾರ ತಿಳಿದುಬಂದಿದೆ. ಗ್ರಾಹಕರ ಆಹಾರ ಬೆಲೆ ಸೂಚ್ಯಂಕವನ್ನು ಆಧರಿಸಿದ ಒಟ್ಟಾರೆ ಆಹಾರ ಹಣದುಬ್ಬರವು ಸೆಪ್ಟೆಂಬರ್‌ನಲ್ಲಿ ಶೇ 0.68ರಷ್ಟಿತ್ತು, ಇದು ಹಿಂದಿನ ವರ್ಷದ ಅವಧಿಯಲ್ಲಿ ಶೇ 10.68ರಷ್ಟಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು