10:42 AM Tuesday16 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

Cyber crime | ನಟ ಉಪೇಂದ್ರ ದಂಪತಿ ಮೊಬೈಲ್ ಹ್ಯಾಕ್ ಪ್ರಕರಣ: ಬಿಹಾರ ಮೂಲದ ಆರೋಪಿಯ ಬಂಧನ

12/11/2025, 13:12

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ನಟ ಉಪೇಂದ್ರ ಮತ್ತು ಪ್ರಿಯಾಂಕಾ ಅವರ ಮೊಬೈಲ್ ಹ್ಯಾಕ್ ಪ್ರಕರಣ ಸಂಬಂಧ ಬಿಹಾರ ಮೂಲದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬಿಹಾರ ಮೂಲದ ವಿಕಾಸ್ ಕುಮಾರ್ ಎಂದು ತಿಳಿದುಬಂದಿದೆ.
ಆನ್‌ಲೈನ್ ಲಿಂಕ್ ಮೂಲಕ ಪ್ರಿಯಾಂಕಾ ಅವರ ವಾಟ್ಸಾಪ್ ಹ್ಯಾಕ್ ಮಾಡಿ, ಹಣ ವರ್ಗಾಯಿಸಲು ವಂಚಕರು ಸಂದೇಶ ಕಳುಹಿಸಿದ್ದರು. ಇದೀಗ ಸದಾಶಿವನಗರ ಪೊಲೀಸರಿಂದ ಆರೋಪಿ ಬಂಧನವಾಗಿದೆ. ಸೆಪ್ಟೆಂಬರ್15 ರಂದು ಉಪೇಂದ್ರ ದಂಪತಿ ಮೊಬೈಲ್ ಹ್ಯಾಕ್ ಮಾಡಲಾಗಿತ್ತು.

*ಏನಿದು ಪ್ರಕರಣ?:*
ಪ್ರಿಯಾಂಕ ಉಪೇಂದ್ರ ಅವರು ಆನ್‌ಲೈನ್‌ನಲ್ಲಿ ಕೆಲ ವಸ್ತುಗಳನ್ನು ಬುಕ್ ಮಾಡಿದ್ದರು. ಇದಾದ ನಂತರ ಪ್ರಿಯಾಂಕ ಅವರಿಗೆ ಮೊಬೈಲ್‌ಗೆ ಲಿಂಕ್ ಬಂದಿತ್ತು. OTP ಹೇಳುವಂತೆ ಸೈಬರ್ ಖದೀಮರು ಹೇಳಿದ್ದರು. ಪ್ರಿಯಾಂಕ ಉಪೇಂದ್ರ ಆ ಲಿಂಕ್‌ವನ್ನು ಕ್ಲಿಕ್‌ ಮಾಡಿದ್ದರು. ಆ ಕೂಡಲೇ ಪ್ರಿಯಾಂಕ ಅವರ ವಾಟ್ಸ್‌ಆಪ್‌ ಹ್ಯಾಕ್ ಮಾಡಿದ್ದಾರೆ. ಇದಾದ ಬಳಿಕ ಪ್ರಿಯಾಂಕಾ ಕಾಂಟೆಕ್ಟ್‌ನಲ್ಲಿದ್ದವರಿಗೆ 55 ಸಾವಿರ ರೂ ಹಣ ಕಳಿಸುವಂತೆ ಮೇಸೆಜ್ ಮಾಡಿದ್ದಾರೆ ಖದೀಮರು. ಈ ವೇಳೆ ಮ್ಯಾನೇಜರ್ ಹಾಗೂ ಉಪೇಂದ್ರ ಮೊಬೈಲ್ ಕೂಡ ಹ್ಯಾಕ್‌ ಮಾಡಿದ್ದರು. ಹಣ ಅಗತ್ಯವಿದೆ ಎಂದು ಪ್ರಿಯಾಂಕ ವಾಟ್ಸ್‌ ಅಪ್‌ ನಿಂದ ಹಲವರಿಗೆ ಮೆಸೇಜ್ ಕೂಡ ಕಳಿಸಿದ್ರು.

*ಒಂದೂವರೆ ಲಕ್ಷ ರೂ ಹಣ ಪೀಕಿದ ಖದೀಮರು:*
ಪ್ರಿಯಾಂಕ ಉಪೇಂದ್ರ ಮೆಸೇಜ್ ಮಾಡಿದ್ದಾರೆಂದು ಹಲವರು ಹಣ ಕೂಡ ಹಾಕಿದ್ದಾರೆ. ಪ್ರಿಯಾಂಕ ಉಪೇಂದ್ರ ಅವರ ಮೆಸೇಜ್ ನೋಡಿ ಕರೆ ಮಾಡಿದವರ ಪೋನ್ ಕಾಲ್ ಕಟ್ ಆಗ್ತಿತ್ತು. ಎಮರ್ಜೆನ್ಸಿ ಇದೆ ಹಣ ಹಾಕುವಂತೆ ವಾಟ್ಸ್‌ಅಪ್‌ ಹ್ಯಾಕ್ ಮಾಡಿ ಸೈಬರ್ ಖದೀಮರು ಮೆಸೆಜ್‌ ಕಳುಹಿಸುತ್ತಿದ್ದರು. ‌
ಕೆಲವು ಮಂದಿ ತುರ್ತಾಗಿ ಏನೋ ಇರಬೇಕೆಂದು 55 ಸಾವಿರ ಹಣ ಕೂಡ ಕಳುಹಿಸಿ ಬಿಟ್ಟಿದ್ದರು. ಕೂಡಲೇ ಈ ವಿಷಯ ಪ್ರಿಯಾಂಕಗೆ ಗೊತ್ತಾಗಿತ್ತು. ಪುತ್ರ ಕೂಡ ಪ್ರಿಯಾಂಕ ಅವರ ಅಕೌಂಟ್‌ಗೆ ಐವತ್ತು ಸಾವಿರ ರೂ ಹಣಹಾಕಿದ್ರು. ಸ್ನೇಹಿತರು ಕರೆ ಮಾಡಿ ವಿಚಾರ ತಿಳಿಸಿದ್ರು. ಆ ವೇಳೆಗಾಗಲೇ ಒಂದೂವರೆ ಲಕ್ಷ ಹಣ ಅಕೌಂಟ್‌ಗೆ ಸೈಬರ್ ವಂಚಕರು ಕಳುಹಿಸಿಕೊಂಡಿದ್ದರು.
ಬಳಿಕ ಸದಾಶಿವನಗರ ಠಾಣೆಗೆ ಪ್ರಿಯಾಂಕ ಉಪೇಂದ್ರ ದೂರು ನೀಡಿದ್ದಾರೆ. ಪೊಲೀಸರು ತನಿಖೆ ವೇಳೆ ಬಿಹಾರದ ದಶರತಪುರದ ನಿವಾಸಿಗಳು ಅನ್ನೋದು ಗೊತ್ತಾಗಿತ್ತು. 20 ರಿಂದ 25 ವಯಸ್ಸಿನ ಯುವಕರು ಇದೇ ದಂಧೆಯಲ್ಲಿ ನಿರತರಾಗಿರೋದು ತಿಳಿದು ಬಂದಿದೆ. ಬಿಹಾರಕ್ಕೆ ಹೋಗಿದ್ದ ಪೊಲೀಸರೇ ಶಾಕ್ ಆಗಿದ್ದಾರೆ.
ಊರಿನ 150 ಮಂದಿ ಯುವಕರು ಸೈಬರ್ ಅಪರಾಧದಲ್ಲೇ ನಿರತರಾಗಿರೋದು ವಿಚಾರಣೆ ವೇಳೆ ತಿಳಿದು ಬಂದಿದೆ. ಕೊನೆಗೆ ಪೊಲೀಸರು ಆರೋಪಿ ವಿಕಾಸ್ ಕುಮಾರ್ ಬಂಧಿಸಿ ಕರೆತಂದಿದ್ದಾರೆ. ಸದ್ಯ ಕಸ್ಟಡಿಗೆ ಆರೋಪಿ ವಿಕಾಸ್ ಪಡೆದು ವಿಚಾರಣೆ ಮಾಡುತ್ತಿದ್ದಾರೆ. ಕೇಂದ್ರ ವಿಭಾಗದ ಸೈಬರ್ ಹಾಗೂ ಸದಾಶಿವನಗರ ಪೊಲೀಸರಿಂದ ತನಿಖೆ ಮುಂದುವರಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು