2:04 AM Saturday14 - February 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

ಇತ್ತೀಚಿನ ಸುದ್ದಿ

ಸೈಬರ್ ಕ್ರೈಂ ತಡೆಗೆ ಪೊಲೀಸ್ ಇಲಾಖೆಯಲ್ಲಿರುವ ಸಿಬ್ಬಂದಿಗಳಿಗೆ ತರಬೇತಿ: ಗೃಹ ಸಚಿವ ಡಾ. ಪರಮೇಶ್ವರ್

29/10/2023, 19:47

ಮಂಗಳೂರು(reporterkarnataka.com): ರಾಜ್ಯದಲ್ಲಿ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ಇರುವವರಿಗೆಲ್ಲ ಸೈಬರ್ ಕ್ರೈಂ ತರಬೇತಿ ನೀಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.
ಅವರು ಭಾನುವಾರ ನಗರದ ಶಸ್ತ್ರಸ್ತ್ರ ಪೊಲೀಸ್ ಠಾಣೆಯನ್ನು ಉದ್ಘಾಟಿಸಿದ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ರಾಜ್ಯದಲ್ಲಿ ಕಳೆದ 6 ತಿಂಗಳಿಂದ ಅಪರಾಧ ಪ್ರಕರಣಗಳು ಇಳಿಮುಖವಾಗಿದ್ದು, ಸೈಬರ್ ಕ್ರೈ ಪ್ರಕರಣಗಳು ಮಾತ್ರ ಹೆಚ್ಚುತ್ತಲೇ ಇವೆ. ಆದುದರಿಂದ ಪೊಲೀಸ್ ಇಲಾಖೆಯಲ್ಲಿ ಇರುವವರಿಗೆಲ್ಲ ಸೈಬರ್ ಕ್ರೈಂ ತರಬೇತಿ ನೀಡಲಾಗುವುದು ಎಂದರು.

ಮೊದಲು ಪೊಲೀಸ್ ಇಲಾಖೆಗೆ ಎಸ್‌ಎಸ್‌ಎಲ್‌ಸಿ, ಪಿಯುಸಿ ಆದವರು ಬರುತ್ತಿದ್ದರು. ಆದರೆ ಈಗ ಸ್ನಾತಕೋತ್ತರ ಪದವಿ, ಡಬಲ್ ಪದವಿ, ಇಂಜಿನಿಯರಿಂಗ್ ಅದವರೆಲ್ಲ ಬರುತ್ತಿದ್ದಾರೆ. ಅವರಿಗೆ ಕಂಪ್ಯೂಟರ್ ತರಬೇತಿ, ಸೈಬರ್ ಕ್ರೈಂ ಬಗ್ಗೆ ತರಬೇತಿ ನೀಡುವುದು ಸುಲಭ ಎಂದು ಗೃಹ ಸಚಿವರು ಅಭಿಪ್ರಾಯಪಟ್ಟರು.
ಪೊಲೀಸ್ ಇಲಾಖೆಯನ್ನು ಹಾಗೂ ಸಿಬ್ಬಂದಿಗಳನ್ನು ಆಧುನಿಕರಿಸುವ ನಿಟ್ಟಿನಲ್ಲಿ ತರಬೇತಿ ನೀಡಲಾಗುವುದು. ಈಗಾಗಲೇ ರಾಜ್ಯದ ಬಹುತೇಕ ಪೊಲೀಸ್ ಠಾಣೆಗಳು ಹಳೆಯದಾಗಿದ್ದು, ಅದನ್ನು ಆಧುನಿಕರಿಸುವ ನಿಟ್ಟಿನಲ್ಲಿ ಪೊಲೀಸ್ ಠಾಣೆ ಯೋಜನೆಯಡಿ ನೂತನ 100 ಪೊಲೀಸ್ ಠಾಣೆಗಳನ್ನು ತೆರೆಯಲಾಗುವುದು. ಮುಂದಿನ ದಿನಗಳಲ್ಲಿ ಬಾಕಿ ಇರುವ ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಅವರು ಹೇಳಿದರು.
ಈಗಾಗಲೇ ‘ಪೊಲೀಸ್ ಗೃಹ’ ಯೋಜನೆಯಡಿ ಶೇ.40ರಷ್ಟು ಎರಡು ಬೆಡ್ ರೂಂಗಳ ಫ್ಲಾಟ್‌ಗಳನ್ನು ನಿರ್ಮಾಣ ಮಾಡಲಾಗಿದ್ದು, ಮುಂದಿನ ನಾಲ್ಕು ವರ್ಷದಲ್ಲಿ ಶೇ.70 ರಷ್ಟು ಪೂರ್ಣಗೊಳಿಸಲಾಗುವುದು ಎಂದು ಗೃಹ ಸಚಿವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು