11:15 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಸೈಕಲ್‌ನಲ್ಲಿ ಆಡುತ್ತಿದ್ದ ಆರು ವರ್ಷದ ಬಾಲಕನ ಮೇಲೆ ಹರಿದ ಟಿಪ್ಪರ್ ; ಬಜಾಲ್‌ನಲ್ಲಿ ನಡೆದ ದುರ್ಘಟನೆ

20/04/2022, 22:10

ಮಂಗಳೂರು(reporterkarnataka.com: ನಗರದ ಬಜಾಲ್ ಕಟ್ಟಪುಣಿ ಎಂಬಲ್ಲಿ ಲಾರಿ ಹರಿದು ಆರು ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಬುಧವಾರ ಸಂಜೆ ಆರು ಗಂಟೆ ವೇಳೆಗೆ ನಡೆದಿದೆ.

ಬಜಾಲ್ ಜಲ್ಲಿಗುಡ್ಡೆ ಸಮೀಪದ ಕಟ್ಟಪುಣಿಯ ಕೋರ್ದಬ್ಬು ದೈವಸ್ಥಾನದ ರಸ್ತೆಯಲ್ಲಿ ಘಟನೆ ನಡೆದಿದ್ದು, ಬಾಲಕ ಸೈಕಲ್ ನಲ್ಲಿ ಆಡುತ್ತಿದ್ದಾಗ ಟಿಪ್ಪರ್ ಲಾರಿ ಬಾಲಕನ ಮೇಲಿನಿಂದ ಹರಿದಿದೆ.


ಸ್ಥಳೀಯ ನಿವಾಸಿ ಹಿದಾಯತುಲ್ಲಾ ಎಂಬವರ ಪುತ್ರ ಮೊಹಮ್ಮದ್ ಜೀಶನ್ (6) ಮೃತ ಬಾಲಕ.ಮೊಹಮ್ಮದ್ ಜೀಶನ್ ಮತ್ತು ಇನ್ನೊಬ್ಬ ಬಾಲಕ ಜೊತೆಯಾಗಿ ಅಂಗಡಿಗೆಂದು ಬಂದಿದ್ದು ಒಬ್ಬ ಹುಡುಗ ಇಳಿದು ಹೋಗಿದ್ದಾನೆ ಎನ್ನಲಾಗುತ್ತಿದೆ. ಈ ವೇಳೆ ಸೈಕಲ್ ನಲ್ಲಿದ್ದ ಹುಡುಗನಿಗೆ ಟಿಪ್ಪರ್ ಡಿಕ್ಕಿಯಾಗಿದೆ. ಕಟ್ಟಪುಣಿ ರಸ್ತೆ ಕಿರಿದಾದ ರಸ್ತೆಯಾಗಿದ್ದು ಟಿಪ್ಪರ್ ಲಾರಿಯಲ್ಲಿ ಚಾಲಕ ಮಣ್ಣು ಹೇರಿಕೊಂಡು ಫೈಸಲ್ ನಗರಕ್ಕೆ ತೆರಳುತ್ತಿದ್ದ.

ಘಟನೆ ಆಗುತ್ತಲೇ ಜನ ಸೇರಿದ್ದು, ಲಾರಿ ಚಾಲಕ ಅಬುಬಕ್ಕರ್ ಟಿಪ್ಪರ್ ಬಿಟ್ಟು ಪರಾರಿಯಾಗಿದ್ದಾನೆ. ಕಂಕನಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು