6:47 PM Thursday7 - August 2025
ಬ್ರೇಕಿಂಗ್ ನ್ಯೂಸ್
ಮುತ್ತಾಲಿಕ್ ಜತೆ ವೇದಿಕೆ ಹಂಚಿಕೊಂಡ ಕೈ ಶಾಸಕಿ: ನಯನಾ ಮೋಟಮ್ಮ ವಿರುದ್ಧ ಪ್ರಾಯಶ್ಚಿತ್ತ… ಮತದಾರರ ಹಕ್ಕು ರಕ್ಷಣೆ ರಾಜಕೀಯ ಪಕ್ಷಗಳ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:… ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ… Shivamogga | ತೀರ್ಥಹಳ್ಳಿ: ಮನೆಗಾಗಿ ಸಾಲ; ಮನನೊಂದ ವೃದ್ದ ದಂಪತಿ ಒಂದೇ ಮರಕ್ಕೆ… Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ… Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡದಲ್ಲಿ ನಿಸ್ಸಂಶಯವಾಗಿ ಕಾಂಗ್ರೆಸ್ ಜಯಭೇರಿ: ಕೊಕ್ಕಡ ಪ್ರಚಾರ ಸಭೆಯಲ್ಲಿ ಪದ್ಮರಾಜ್ ಆರ್. ಪೂಜಾರಿ ವಿಶ್ವಾಸ

18/04/2024, 21:15

ಕೊಕ್ಕಡ(reporterkarnataka.com): ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ಪರವಾಗಿ ಕೊಕ್ಕಡದಲ್ಲಿ ಚುನಾವಣಾ ಪ್ರಚಾರ ಸಭೆ ನಡೆಯಿತು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಮಾತನಾಡಿ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಯಭೇರಿ ಬಾರಿಸಲಿದೆ‌. ಇದರಲ್ಲಿ ಯಾವುದೇ ಸಂಶಯ ಬೇಡ. ಇದುವರೆಗೆ ಆರ್ಥಿಕವಾಗಿ ಹಿಂದುಳಿದವರ ಏಳಿಗೆಗಾಗಿ ಶ್ರಮಿಸಿದ್ದೇನೆ. ಇನ್ನು ಮುಂದೆಯೂ ಬಡವರ ಏಳಿಗೆಗಾಗಿ ದುಡಿಯುತ್ತೇನೆ. ಕಾಂಗ್ರೆಸ್ ಸರಕಾರ ನೀಡಿರುವ ಗ್ಯಾರೆಂಟಿ ಯೋಜನೆಗಳಿಂದ ಆರ್ಥಿಕ ಶಕ್ತಿ ತುಂಬುವ ಕೆಲಸ ಆಗಿದೆ ಎಂದ ಅವರು, ವಸಂತ್ ಬಂಗೇರರ ಚಿಂತನೆ, ಆದರ್ಶಗಳನ್ನು ನಾವು ಮುಂದುವರಿಸಿಕೊಂಡು ಹೋಗುತ್ತೇವೆ ಎಂದರು.
ಮಾಜಿ ಸಚಿವ ಗಂಗಾಧರ ಗೌಡ ಮಾತನಾಡಿ, ನಿಷ್ಕಲಂಕ ವ್ಯಕ್ತಿತ್ವದ ಪದ್ಮರಾಜ್ ಆರ್. ಪೂಜಾರಿ ಅವರು ಈ ಮಣ್ಣಿನಲ್ಲೇ ಹುಟ್ಟಿ, ಬೆಳೆದವರು. ಯಾವುದೇ ಅಪಪ್ರಚಾರಕ್ಕೆ ಕಿವಿಗೊಡದೇ, ಅವರ ಗೆಲುವಿಗಾಗಿ ಎಲ್ಲರೂ ಶ್ರಮಿಸಬೇಕು ಎಂದು ಕರೆ ನೀಡಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಸಿಪಿಎಂ ಪಕ್ಷದ ನೇತಾರ ಬಿ.ಎಂ. ಭಟ್, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಾಹುಲ್ ಹಮೀದ್, ಡಿಸಿಸಿ ಪ್ರ. ಕಾರ್ಯದರ್ಶಿ ರಂಜನ್ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸತೀಶ್ ಕಾಶಿಪಟ್ಣ, ನಾಗೇಶ್ ಗೌಡ, ಜಿಪಂ ಮಾಜಿ ಸದಸ್ಯೆ ನಮಿತಾ ಕೆ. ಪೂಜಾರಿ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಲಕ್ಷ್ಮೀಶ್ ಗಬ್ಬಲಡ್ಕ, ಪ್ರಚಾರ ಸಮಿತಿ ಅಧ್ಯಕ್ಷ ಧರ್ಣೇಂದ್ರ ಕುಮಾರ್, ವಂದನಾ ಭಂಡಾರಿ, ಶೇಖರ್ ಬೆಳಾಲ್, ಗಣೇಶ್ ಗಬ್ಬಲಡ್ಕ, ಬಾಲಕೃಷ್ಣ ಗೌಡ ಕೇರಿಮಾರು, ಸುಂದರ ಗೌಡ, ರಾಜಶೇಖರ್ ಅಜ್ರಿ, ಹಕೀಂ, ದಯಾನಂದ ಪೂಜಾರಿ, ಕಲಂದರ್ ಕೊಕ್ಕಡ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು