8:13 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡದಲ್ಲಿ ನಿಸ್ಸಂಶಯವಾಗಿ ಕಾಂಗ್ರೆಸ್ ಜಯಭೇರಿ: ಕೊಕ್ಕಡ ಪ್ರಚಾರ ಸಭೆಯಲ್ಲಿ ಪದ್ಮರಾಜ್ ಆರ್. ಪೂಜಾರಿ ವಿಶ್ವಾಸ

18/04/2024, 21:15

ಕೊಕ್ಕಡ(reporterkarnataka.com): ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ಪರವಾಗಿ ಕೊಕ್ಕಡದಲ್ಲಿ ಚುನಾವಣಾ ಪ್ರಚಾರ ಸಭೆ ನಡೆಯಿತು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಮಾತನಾಡಿ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಯಭೇರಿ ಬಾರಿಸಲಿದೆ‌. ಇದರಲ್ಲಿ ಯಾವುದೇ ಸಂಶಯ ಬೇಡ. ಇದುವರೆಗೆ ಆರ್ಥಿಕವಾಗಿ ಹಿಂದುಳಿದವರ ಏಳಿಗೆಗಾಗಿ ಶ್ರಮಿಸಿದ್ದೇನೆ. ಇನ್ನು ಮುಂದೆಯೂ ಬಡವರ ಏಳಿಗೆಗಾಗಿ ದುಡಿಯುತ್ತೇನೆ. ಕಾಂಗ್ರೆಸ್ ಸರಕಾರ ನೀಡಿರುವ ಗ್ಯಾರೆಂಟಿ ಯೋಜನೆಗಳಿಂದ ಆರ್ಥಿಕ ಶಕ್ತಿ ತುಂಬುವ ಕೆಲಸ ಆಗಿದೆ ಎಂದ ಅವರು, ವಸಂತ್ ಬಂಗೇರರ ಚಿಂತನೆ, ಆದರ್ಶಗಳನ್ನು ನಾವು ಮುಂದುವರಿಸಿಕೊಂಡು ಹೋಗುತ್ತೇವೆ ಎಂದರು.
ಮಾಜಿ ಸಚಿವ ಗಂಗಾಧರ ಗೌಡ ಮಾತನಾಡಿ, ನಿಷ್ಕಲಂಕ ವ್ಯಕ್ತಿತ್ವದ ಪದ್ಮರಾಜ್ ಆರ್. ಪೂಜಾರಿ ಅವರು ಈ ಮಣ್ಣಿನಲ್ಲೇ ಹುಟ್ಟಿ, ಬೆಳೆದವರು. ಯಾವುದೇ ಅಪಪ್ರಚಾರಕ್ಕೆ ಕಿವಿಗೊಡದೇ, ಅವರ ಗೆಲುವಿಗಾಗಿ ಎಲ್ಲರೂ ಶ್ರಮಿಸಬೇಕು ಎಂದು ಕರೆ ನೀಡಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಸಿಪಿಎಂ ಪಕ್ಷದ ನೇತಾರ ಬಿ.ಎಂ. ಭಟ್, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಾಹುಲ್ ಹಮೀದ್, ಡಿಸಿಸಿ ಪ್ರ. ಕಾರ್ಯದರ್ಶಿ ರಂಜನ್ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸತೀಶ್ ಕಾಶಿಪಟ್ಣ, ನಾಗೇಶ್ ಗೌಡ, ಜಿಪಂ ಮಾಜಿ ಸದಸ್ಯೆ ನಮಿತಾ ಕೆ. ಪೂಜಾರಿ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಲಕ್ಷ್ಮೀಶ್ ಗಬ್ಬಲಡ್ಕ, ಪ್ರಚಾರ ಸಮಿತಿ ಅಧ್ಯಕ್ಷ ಧರ್ಣೇಂದ್ರ ಕುಮಾರ್, ವಂದನಾ ಭಂಡಾರಿ, ಶೇಖರ್ ಬೆಳಾಲ್, ಗಣೇಶ್ ಗಬ್ಬಲಡ್ಕ, ಬಾಲಕೃಷ್ಣ ಗೌಡ ಕೇರಿಮಾರು, ಸುಂದರ ಗೌಡ, ರಾಜಶೇಖರ್ ಅಜ್ರಿ, ಹಕೀಂ, ದಯಾನಂದ ಪೂಜಾರಿ, ಕಲಂದರ್ ಕೊಕ್ಕಡ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು