6:01 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡದಲ್ಲಿ ನಿಸ್ಸಂಶಯವಾಗಿ ಕಾಂಗ್ರೆಸ್ ಜಯಭೇರಿ: ಕೊಕ್ಕಡ ಪ್ರಚಾರ ಸಭೆಯಲ್ಲಿ ಪದ್ಮರಾಜ್ ಆರ್. ಪೂಜಾರಿ ವಿಶ್ವಾಸ

18/04/2024, 21:15

ಕೊಕ್ಕಡ(reporterkarnataka.com): ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ಪರವಾಗಿ ಕೊಕ್ಕಡದಲ್ಲಿ ಚುನಾವಣಾ ಪ್ರಚಾರ ಸಭೆ ನಡೆಯಿತು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಮಾತನಾಡಿ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಯಭೇರಿ ಬಾರಿಸಲಿದೆ‌. ಇದರಲ್ಲಿ ಯಾವುದೇ ಸಂಶಯ ಬೇಡ. ಇದುವರೆಗೆ ಆರ್ಥಿಕವಾಗಿ ಹಿಂದುಳಿದವರ ಏಳಿಗೆಗಾಗಿ ಶ್ರಮಿಸಿದ್ದೇನೆ. ಇನ್ನು ಮುಂದೆಯೂ ಬಡವರ ಏಳಿಗೆಗಾಗಿ ದುಡಿಯುತ್ತೇನೆ. ಕಾಂಗ್ರೆಸ್ ಸರಕಾರ ನೀಡಿರುವ ಗ್ಯಾರೆಂಟಿ ಯೋಜನೆಗಳಿಂದ ಆರ್ಥಿಕ ಶಕ್ತಿ ತುಂಬುವ ಕೆಲಸ ಆಗಿದೆ ಎಂದ ಅವರು, ವಸಂತ್ ಬಂಗೇರರ ಚಿಂತನೆ, ಆದರ್ಶಗಳನ್ನು ನಾವು ಮುಂದುವರಿಸಿಕೊಂಡು ಹೋಗುತ್ತೇವೆ ಎಂದರು.
ಮಾಜಿ ಸಚಿವ ಗಂಗಾಧರ ಗೌಡ ಮಾತನಾಡಿ, ನಿಷ್ಕಲಂಕ ವ್ಯಕ್ತಿತ್ವದ ಪದ್ಮರಾಜ್ ಆರ್. ಪೂಜಾರಿ ಅವರು ಈ ಮಣ್ಣಿನಲ್ಲೇ ಹುಟ್ಟಿ, ಬೆಳೆದವರು. ಯಾವುದೇ ಅಪಪ್ರಚಾರಕ್ಕೆ ಕಿವಿಗೊಡದೇ, ಅವರ ಗೆಲುವಿಗಾಗಿ ಎಲ್ಲರೂ ಶ್ರಮಿಸಬೇಕು ಎಂದು ಕರೆ ನೀಡಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಸಿಪಿಎಂ ಪಕ್ಷದ ನೇತಾರ ಬಿ.ಎಂ. ಭಟ್, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಾಹುಲ್ ಹಮೀದ್, ಡಿಸಿಸಿ ಪ್ರ. ಕಾರ್ಯದರ್ಶಿ ರಂಜನ್ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸತೀಶ್ ಕಾಶಿಪಟ್ಣ, ನಾಗೇಶ್ ಗೌಡ, ಜಿಪಂ ಮಾಜಿ ಸದಸ್ಯೆ ನಮಿತಾ ಕೆ. ಪೂಜಾರಿ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಲಕ್ಷ್ಮೀಶ್ ಗಬ್ಬಲಡ್ಕ, ಪ್ರಚಾರ ಸಮಿತಿ ಅಧ್ಯಕ್ಷ ಧರ್ಣೇಂದ್ರ ಕುಮಾರ್, ವಂದನಾ ಭಂಡಾರಿ, ಶೇಖರ್ ಬೆಳಾಲ್, ಗಣೇಶ್ ಗಬ್ಬಲಡ್ಕ, ಬಾಲಕೃಷ್ಣ ಗೌಡ ಕೇರಿಮಾರು, ಸುಂದರ ಗೌಡ, ರಾಜಶೇಖರ್ ಅಜ್ರಿ, ಹಕೀಂ, ದಯಾನಂದ ಪೂಜಾರಿ, ಕಲಂದರ್ ಕೊಕ್ಕಡ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು