2:15 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ದ. ಕ. ಜಿಲ್ಲೆ; ಕೆಂಪುಕಲ್ಲು ಗಣಿಗಾರಿಕೆಗೆ ಪರವಾನಿಗೆ ನೀಡಲು ಏಕಗವಾಕ್ಷಿ ವ್ಯವಸ್ಥೆ: ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

24/07/2025, 17:53

*ಕಾನೂನಿನ ಅನ್ವಯ ಕೆಂಪುಕಲ್ಲು ಗಣಿಗಾರಿಕೆಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸ್ಪೀಕರ್ ಯು.ಟಿ ಖಾದರ್ ನೇತೃತ್ವದಲ್ಲಿ ಸಭೆ*

*ವಾರದೊಳಗೆ SOP ಸಿದ್ಧಪಡಿಸಲು ಸಭೆಯಲ್ಲಿ ನಿರ್ಧಾರ*

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಕಾನೂನಿನ ಅನ್ವಯ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಬೆಂಗಳೂರಿನ ವಿಧಾನ ಸೌಧದಲ್ಲಿ ಇಂದು ಸ್ಪೀಕರ್ ಯು.ಟಿ. ಖಾದರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಗಣಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಯಿತು.
ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಇರುವ ಅಡೆತಡೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ನಿಯಮಗಳಲ್ಲಿ ಬದಲಾವಣೆಗಳನ್ನು ತರುವ ಕುರಿತಂತೆ ಗಣಿ ಇಲಾಖೆ ಅಧಿಕಾರಿಗಳೊಂದಿಗೆ ಸಚಿವ ದಿನೇಶ್ ಗುಂಡೂರಾವ್ ಚರ್ಚೆ ನಡೆಸಿದರು.

ವಾಣಿಜ್ಯ ಉದ್ದೇಶವಲ್ಲದ ಕೆಂಪುಕಲ್ಲು ಕ್ವಾರಿಗಳಿಗೆ ಅಧಿಕೃತವಾಗಿ ಪರವಾನಿಗೆ ಕೊಡುವ ವ್ಯವಸ್ಥೆ ಜಾರಿಯಾಗಬೇಕು. ಪರವಾನಿಗೆ ಪಡೆಯಲು ಏಕಗವಾಕ್ಷಿ ಯೋಜನೆ ರೀತಿಯಲ್ಲಿ ವ್ಯವಸ್ಥೆ ಕಲ್ಪಿಸಬೇಕು. ಸಮಯಮಿತಿಯಲ್ಲಿ ಪರವಾನಿಗೆಗಳನ್ನು ಕೊಡುವ ಕಾರ್ಯಗತಿ ಜಾರಿಗೆ ತರುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗಣಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಕೆಂಪುಕಲ್ಲು ಉತ್ಪಾದಕರೊಂದಿಗೆ ಚರ್ಚೆ ನಡೆಸಿ ವಾರದೊಳಗೆ ಹೊಸ ನೀತಿ ಜಾರಿಗೊಳಿಸುವತ್ತ SOP ಸಿದ್ಧಪಡಿಸುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ವಿಧಾನ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು, ಮಣ್ಣ ಸಮತಟ್ಟು ಸೇರಿದಂತೆ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ 3 ಮೀಟರ್ ಮಾತ್ರ ಆಳಕ್ಕೆ ಡ್ರಿಲ್ ಮಾಡಲು ಅವಕಾಶವಿದ್ದು, ಇದನ್ನ 6 ಮೀಟರ್ ಗೆ ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈಗಾಗಲೇ ಕೆಲವು ಚಟುವಟಿಕೆಗಳಿಗೆ ಯಾವುದೇ ನಿರ್ಬಂಧವಿಲ್ಲ. ಆದರೆ ಕೆಂಪುಕಲ್ಲು ಗಣಿಗಾರಿಕೆಗೆ ಕೆಲವು ನಿರ್ಭಂಧಗಳಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಲಭ ರೀತಿಯಲ್ಲಿ ಕೆಂಪುಕಲ್ಲು ಗ್ರಾಹಕರಿಗೆ ದೊರೆಯುವಂತಾಗಬೇಕು. ರಾಯಾಲ್ಟಿಯನ್ನ ಕಡಿಮೆಗೊಳಿಸಿಗೆ ನಿಯಮ ಬದ್ಧವಾಗಿ ಕಲ್ಲು ಗಣಿಗಾರಿಗೆಕೆ ಅವಕಾಶ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.‌

ಇತ್ತೀಚಿನ ಸುದ್ದಿ

ಜಾಹೀರಾತು