10:40 AM Friday14 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ದ.ಕ. ಲೋಕಸಭೆ ಕ್ಷೇತ್ರ: ಬಿಜೆಪಿ- ಕಾಂಗ್ರೆಸ್ ನಡುವೆ ನೆಕ್ ಟು ನೆಕ್ ಫೈಟ್; ಗೆಲುವು ಯಾರದೇ ಇರಲಿ, ಗೆಲುವಿನ ಅಂತರ ಮಾತ್ರ ತಗ್ಗಲಿದೆ!

24/04/2024, 18:03

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ರಾಜ್ಯದ ಮೊದಲ ಹಂತದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಚಿತ್ರಣವೇ ಸಂಪೂರ್ಣ ಬದಲಾಗಿದೆ. ಇಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಹೊಸ ಮುಖಗಳನ್ನು ಕಣಕ್ಕಿಳಿಸಿದ್ದು, ನೆಕ್ ಟು ನೆಕ್ ಫೈಟ್ ಏರ್ಪಟ್ಟಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಮಾನ್ಯವಾಗಿ ಹೆಚ್ಚಿನವರ ಬಾಯಿಯಲ್ಲಿ ಕೇಳಿ ಬರುತ್ತಿರುವುದು ಒಂದೇ ಮಾತು. ಅದೇನೆಂದರೆ, ‘ಈ ಹಿಂದೆ ನಡೆದ ಚುನಾವಣೆಗಳಂತಲ್ಲ ಈ ಬಾರಿಯ ಸ್ಪರ್ಧೆ’ ಎನ್ನುವುದು. ಯಾಕೆಂದರೆ ಈ ಹಿಂದೆ ನಡೆದ ಸುಮಾರು 6 ಚುನಾವಣೆಗಳಲ್ಲಿ ಇಲ್ಲಿ ಬಿಜೆಪಿಗೆ ನಿರಾಯಸದ ಗೆಲುವಿನ ವಾತಾವರಣ ಇತ್ತು.
ಆದರೆ, ಈ ಬಾರಿ ಚಿತ್ರಣ ಪೂರ್ತಿ ಬದಲಾಗಿದೆ. ಕಾರಣ ಕಾಂಗ್ರೆಸ್ ಪಕ್ಷ ಕಣಕ್ಕಿಳಿಸಿದ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ವ್ಯಕ್ತಿತ್ವ ಹಾಗೂ ಸೈದಾಂತಿಕವಾಗಿ ಅವರಲ್ಲಿರುವ ಗಟ್ಟಿತನ ಮತ್ತು ಪಕ್ಷದೊಳಗೆ ಅಭ್ಯರ್ಥಿ ಕುರಿತು ಕೇಳಿ ಬಾರದ ಅಪಸ್ವರ.
ಕಳೆದ 6 ಲೋಕಸಭೆ ಚುನಾವಣೆಯನ್ನು ಅವಲೋಕಿಸಿದರೆ, ಈ ಬಾರಿ ದಕ್ಷಿಣ ಕನ್ನಡದ ಕಾಂಗ್ರೆಸಿಗರು ತಮ್ಮ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಈ ಹಿಂದಿನ ಚುನಾವಣೆಯಂತೆ ಯಾವುದೇ ಬಣ ರಾಜಕೀಯ ಸಕ್ರಿಯವಾಗಿಲ್ಲ. ಯಾವುದೇ ಗುಂಪುಗಾರಿಕೆ ಕಾಣುತ್ತಿಲ್ಲ. ಯಾವುದೇ ಅಪಸ್ವರ ಕೇಳಿಸುತ್ತಿಲ್ಲ. ಪದ್ಮರಾಜ್ ಅವರ ಕೊಡೆಯಡಿ ಎಲ್ಲ ನಾಯಕರು ಹೆಗಲಿಗೆ ಹೆಗಲು ಕೊಟ್ಟಿದ್ದಾರೆ. ಪ್ರಚಾರ ಸಮಿತಿ ಅಧ್ಯಕ್ಷ ಬಿ. ರಮಾನಾಥ ರೈ ಅವರ ನಾಯಕತ್ವದಡಿಯಲ್ಲಿ ಜಿಲ್ಲೆಯಲ್ಲಿ ಎಲ್ಲ ಕಾಂಗ್ರೆಸ್ ನಾಯಕರು, ಮುಖಂಡರು, ಮರಿ ಮುಖಂಡರು, ಕಾರ್ಯಕರ್ತರು ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಆರಂಭದಲ್ಲಿ ಕೆಲವು ನಾಯಕರು, ಮುಖಂಡರು ಮುಖ ತೋರಿಸಿ ಕಣ್ಮರೆಯಾದರೂ ಮತ್ತೆ ಪ್ರಚಾರ ಕಾರ್ಯದಲ್ಲಿ ಸೇರಿಕೊಂಡಿದ್ದಾರೆ.
ಕಳೆದ 3 ದಶಕಗಳಿಂದ ಬಿಜೆಪಿ ಕೈಗೊಪ್ಪಿಸಿದ ದ.ಕ. ಕ್ಷೇತ್ರವನ್ನು ಮತ್ತೆ ಕೈವಶ ಮಾಡಿಕೊಳ್ಳುವ ನಿಟ್ಟಿನಲ್ಲಿ ಕೈ ಪಾಳಯಕ್ಕೆ ಇದು ಬಹಳ ಮಹತ್ವದ ಚುನಾವಣೆಯಾಗಿದೆ. ವಿ. ಧನಂಜಯ ಕುಮಾರ್, ಡಿ.ವಿ. ಸದಾನಂದ ಗೌಡ ಹಾಗೂ ನಳಿನ್ ಕುಮಾರ್ ಕಟೀಲ್ ಅವರು ಕಳೆದ 33 ವರ್ಷಗಳಿಂದ ದಕ್ಷಿಣ ಕನ್ನಡವನ್ನು ಪ್ರತಿನಿಧಿಸಿದ್ದಾರೆ. ಈ ಬಾರಿ ಬಿಜೆಪಿ ಅಭ್ಯರ್ಥಿಯನ್ನು ಬದಲಾಯಿಸಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ ನ ಪದ್ಮರಾಜ್ ಅವರ ಹಾಗೆ ನಿವೃತ್ತ ಸೇನಾಧಿಕಾರಿಯಾದ ಕ್ಯಾ.
ಚೌಟ ಅವರು ಕೂಡ ಚುನಾವಣಾ ರಾಜಕೀಯಕ್ಕೆ ಹೊಸ ಮುಖ. ಹಾಗಾಗಿ ಉಭಯ ಪಕ್ಷಗಳಿಗೆ ಪರಸ್ಪರ ಅಭ್ಯರ್ಥಿಯನ್ನು ನಿಂದಿಸುವ ಅವಕಾಶ ತಪ್ಪಿ ಹೋಗಿದೆ.
ಕಾಂಗ್ರೆಸಿಗೆ ಈ ಬಾರಿಯ ಚುನಾವಣೆಯ ಪ್ಲಸ್ ಎಂದರೆ ಜಿಲ್ಲೆಯ ಕೈ ನಾಯಕರು ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಜತೆಗೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ಮತಗಳನ್ನು ಹರಿದು ಹಂಚಿಕೊಳ್ಳುವಂತಹ ಯಾವುದೇ ಅಭ್ಯರ್ಥಿ ಕಣದಲ್ಲಿಲ್ಲ. ಇದು ಕೈ ಪಾಳಯಕ್ಕೆ ವರದಾನವಾಗಿದೆ.
ಇನ್ನೊಂದು ಕಡೆಯಲ್ಲಿ ಬಿಜೆಪಿಯ ಪ್ಲಸ್ ಪಾಯಿಂಟ್ ಎಂದರೆ ಕೇಸರಿ ಪಾಳಯದ ಸಾಂಪ್ರದಾಯಿಕ ಮತಗಳು ಏನೇ ಆದರೂ ಅದು ಬೇರೆ ಕಡೆ ತಿರುಗುವುದಿಲ್ಲ. ಬಿಜೆಪಿ ಹೇಳುವ ಹಿಂದುತ್ವದ ಬಹು ದೊಡ್ಡ ಅನುಯಾಯಿಗಳು ಕರಾವಳಿಯಲ್ಲಿದ್ದಾರೆ. ಕಾಂಗ್ರೆಸ್ ನ ಒಗ್ಗಟ್ಟಿನ ಮಂತ್ರ, ಮತ ವಿಭಜಿಸುವ ಸ್ಪರ್ಧಿಗಳು ಇಲ್ಲದಿರುವುದು, ಇವೆಲ್ಲದರ ಜತೆ ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳು ಇನ್ನಷ್ಟು ಮತಗಳನ್ನು ಸೆಳೆಯುವ ಸಾಧ್ಯತೆಗಳಿವೆ. ಇವೆಲ್ಲದರೊಂದಿಗೆ ಕುದ್ರೋಳಿ ದೇಗುಲದಲ್ಲಿ 26 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರ ವೈಯಕ್ತಿಕ ಚರಿಷ್ಮಾ ಕೂಡ ಕೆಲಸ ಮಾಡಲಿದೆ. ಇವೆಲ್ಲದ ಪರಿಣಾಮ ದ.ಕ. ಅಖಾಡದಲ್ಲಿ ನೆಕ್ ಟು ನೆಕ್ ಫೈಟ್ ಏರ್ಪಟ್ಟಿದೆ. ಹಾಗಾಗಿ ಗೆಲವು ಯಾರದೇ ಇರಲಿ, ಗೆಲುವಿನ ಅಂತರ ಮಾತ್ರ ಇಳಿಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು