4:45 AM Thursday31 - July 2025
ಬ್ರೇಕಿಂಗ್ ನ್ಯೂಸ್
ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಸ್ಪಾಟ್ ನಂಬರ್ 4ರ ಉತ್ಖನನ ಪ್ರಕ್ರಿಯೆ ಆರಂಭ ಬಾಲಮಂದಿರ, ಮಹಿಳಾ ನಿಲಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ: ಚಿಣ್ಣರನ್ನು ಮುದ್ದಾಡಿದ…

ಇತ್ತೀಚಿನ ಸುದ್ದಿ

ದ. ಕ. ಜಿಲ್ಲೆಯಲ್ಲಿ ದಿನಕ್ಕೆ ಸುಮಾರು 1 ಲಕ್ಷ ಲೀಟರ್‌ನಷ್ಟು ಹಾಲಿನ ಕೊರತೆ: ಹೈನುರಾಸುಗಳಲ್ಲಿ ಪೋಷಕಾಂಶಗಳ ನಿರ್ವಹಣೆ ಕಾರ್ಯಾಗಾರದಲ್ಲಿ ಬಹಿರಂಗ

17/11/2023, 23:33

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನಕ್ಕೆ ಸುಮಾರು ಒಂದು ಲಕ್ಷ ಲೀಟರ್‌ನಷ್ಟು ಹಾಲಿನ ಉತ್ಪಾದನಾ ಕೊರತೆಯಿದ್ದು, ಈ ಕೊರತೆಯನ್ನು ಸರಿದೂಗಿಸಲು ಹೈನುರಾಸುಗಳಿಗೆ ಕೊಡುವ ಆಹಾರ ಮತ್ತು ಪೋಷಕಾಂಶಗಳ ಸಮತೋಲನ ಬಳಕೆಯ ಬಗ್ಗೆ ರೈತರು ಹೆಚ್ಚು ಗಮನ ಹರಿಸಬೇಕೆಂದು ಪಶು ಪಾಲನ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಹೇಳಿದರು.


ಪಶುವೈದ್ಯರಿಗೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿರುವ ರೈತರಿಗೆ ಹೈನುರಾಸುಗಳಲ್ಲಿ ಪೋಷಕಾಂಶಗಳ ನಿರ್ವಹಣೆ’ ಕುರಿತ ವಿಷಯದಲ್ಲಿ ಒಂದು ದಿನದ ತಾಂತ್ರಿಕ
ಮಾಹಿತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಹಿರಿಯ ವಿಜ್ಞಾನಿಗಳು ಮತ್ತು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಟಿ.ಜೆ. ರಮೇಶ ಮಾತನಾಡಿ, ರೈತರು ಮೇವಿನ ಪರ್ಯಾಯ ಮೂಲಗಳ ಬಗ್ಗೆ ಹೆಚ್ಚು ಗಮನ ಹರಿಸಲು ಸೂಚಿಸಿದರು.
ಸಮಾರಂಭದ ಉದ್ಘಾಟನೆಯನ್ನು ಕ.ಪ.ಪ.ಮೀ.ವಿ.ವಿ. ವಿಸ್ತರಣಾ ನಿರ್ದೇಶಕ ಡಾ.ಎಸ್.ಆರ್. ಸೋಮಶೇಖರ್ ನೆರವೇರಿಸಿದರು
ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ಎನ್‌.ಕೆ.ಎಸ್‌.ಗೌಡ, (ಮುಖ್ಯಸ್ಥರು, ಪ್ರಾಣಿ ಆಹಾರ ವಿಭಾಗ), ಡಾ. ಗಿರಿಧರ್, (ಮುಖ್ಯ ವಿಜ್ಞಾನಿಗಳು, ರಾಷ್ಟ್ರೀಯ ಪಶು ಮೋಷಣೆ ಮತ್ತು ಶರೀರಕ್ರಿಯಾ ವಿಜ್ಞಾನ ಸಂಸ್ಥೆ,ಐ.ಸಿ.ಎ.ಆರ್‍, ಆಡುಗೋಡಿ ಬೆಂಗಳೂರು) ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಐ.ಸಿ.ಎ.ಆರ್.-ಗೇರು, ನಿರ್ದೇಶನಾಲಯ, ಪುತ್ತೂರು ಇವರ ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಯ್ದ ಪರಿಶಿಷ್ಟ ಜಾತಿ ರೈತರಿಗೆ ಹಸುಗಳಿಗೆ ಕೊಟ್ಟಿಗೆಯಲ್ಲಿ ಬಳಸುವ ರಬ್ಬರ್‌ಮ್ಯಾಟ್‌ಗಳನ್ನು ವಿತರಿಸಲಾಯಿತು. ಈ ಕಾರ್ಯಕ್ರಮವನ್ನು ಡಾ. ಶಿವಕುಮಾರ್, ಆರ್, (ಸಹಾಯಕ
ಪ್ರಾಧ್ಯಾಪಕರು (ಪ್ರಾಣಿ ಶಾಸ್ತ್ರ) ಕೃಷಿ ವಿಜ್ಞಾನ ಕೇಂದ್ರ, ಮಂಗಳೂರು), ಇವರು ಸಂಯೋಜನೆ ಮಾಡಿದ್ದು, ಡಾ.ಮೋಹನ್‌, ಜಿ.ಎಸ್‌.(ಮುಖ್ಯ ವಿಜ್ಞಾನಿಗಳು, ಹಾಗೂ ಡಾ. ಮಂಜೇಶ, ವಿಜ್ಞಾನಿಗಳು, ಗೇರು ನಿರ್ದೇಶನಾಲಯ, ಪುತ್ತೂರು) ಹಾಗೂ ಕೃಷಿ ವಿಜ್ಞಾನ ಕೇಂದ್ರದ ಎಲ್ಲಾ ವಿಜ್ಞಾನಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು