3:43 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ದ. ಕ. ಜಿಲ್ಲೆಯಲ್ಲಿ ದಿನಕ್ಕೆ ಸುಮಾರು 1 ಲಕ್ಷ ಲೀಟರ್‌ನಷ್ಟು ಹಾಲಿನ ಕೊರತೆ: ಹೈನುರಾಸುಗಳಲ್ಲಿ ಪೋಷಕಾಂಶಗಳ ನಿರ್ವಹಣೆ ಕಾರ್ಯಾಗಾರದಲ್ಲಿ ಬಹಿರಂಗ

17/11/2023, 23:33

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನಕ್ಕೆ ಸುಮಾರು ಒಂದು ಲಕ್ಷ ಲೀಟರ್‌ನಷ್ಟು ಹಾಲಿನ ಉತ್ಪಾದನಾ ಕೊರತೆಯಿದ್ದು, ಈ ಕೊರತೆಯನ್ನು ಸರಿದೂಗಿಸಲು ಹೈನುರಾಸುಗಳಿಗೆ ಕೊಡುವ ಆಹಾರ ಮತ್ತು ಪೋಷಕಾಂಶಗಳ ಸಮತೋಲನ ಬಳಕೆಯ ಬಗ್ಗೆ ರೈತರು ಹೆಚ್ಚು ಗಮನ ಹರಿಸಬೇಕೆಂದು ಪಶು ಪಾಲನ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಹೇಳಿದರು.


ಪಶುವೈದ್ಯರಿಗೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿರುವ ರೈತರಿಗೆ ಹೈನುರಾಸುಗಳಲ್ಲಿ ಪೋಷಕಾಂಶಗಳ ನಿರ್ವಹಣೆ’ ಕುರಿತ ವಿಷಯದಲ್ಲಿ ಒಂದು ದಿನದ ತಾಂತ್ರಿಕ
ಮಾಹಿತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಹಿರಿಯ ವಿಜ್ಞಾನಿಗಳು ಮತ್ತು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಟಿ.ಜೆ. ರಮೇಶ ಮಾತನಾಡಿ, ರೈತರು ಮೇವಿನ ಪರ್ಯಾಯ ಮೂಲಗಳ ಬಗ್ಗೆ ಹೆಚ್ಚು ಗಮನ ಹರಿಸಲು ಸೂಚಿಸಿದರು.
ಸಮಾರಂಭದ ಉದ್ಘಾಟನೆಯನ್ನು ಕ.ಪ.ಪ.ಮೀ.ವಿ.ವಿ. ವಿಸ್ತರಣಾ ನಿರ್ದೇಶಕ ಡಾ.ಎಸ್.ಆರ್. ಸೋಮಶೇಖರ್ ನೆರವೇರಿಸಿದರು
ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ಎನ್‌.ಕೆ.ಎಸ್‌.ಗೌಡ, (ಮುಖ್ಯಸ್ಥರು, ಪ್ರಾಣಿ ಆಹಾರ ವಿಭಾಗ), ಡಾ. ಗಿರಿಧರ್, (ಮುಖ್ಯ ವಿಜ್ಞಾನಿಗಳು, ರಾಷ್ಟ್ರೀಯ ಪಶು ಮೋಷಣೆ ಮತ್ತು ಶರೀರಕ್ರಿಯಾ ವಿಜ್ಞಾನ ಸಂಸ್ಥೆ,ಐ.ಸಿ.ಎ.ಆರ್‍, ಆಡುಗೋಡಿ ಬೆಂಗಳೂರು) ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಐ.ಸಿ.ಎ.ಆರ್.-ಗೇರು, ನಿರ್ದೇಶನಾಲಯ, ಪುತ್ತೂರು ಇವರ ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಯ್ದ ಪರಿಶಿಷ್ಟ ಜಾತಿ ರೈತರಿಗೆ ಹಸುಗಳಿಗೆ ಕೊಟ್ಟಿಗೆಯಲ್ಲಿ ಬಳಸುವ ರಬ್ಬರ್‌ಮ್ಯಾಟ್‌ಗಳನ್ನು ವಿತರಿಸಲಾಯಿತು. ಈ ಕಾರ್ಯಕ್ರಮವನ್ನು ಡಾ. ಶಿವಕುಮಾರ್, ಆರ್, (ಸಹಾಯಕ
ಪ್ರಾಧ್ಯಾಪಕರು (ಪ್ರಾಣಿ ಶಾಸ್ತ್ರ) ಕೃಷಿ ವಿಜ್ಞಾನ ಕೇಂದ್ರ, ಮಂಗಳೂರು), ಇವರು ಸಂಯೋಜನೆ ಮಾಡಿದ್ದು, ಡಾ.ಮೋಹನ್‌, ಜಿ.ಎಸ್‌.(ಮುಖ್ಯ ವಿಜ್ಞಾನಿಗಳು, ಹಾಗೂ ಡಾ. ಮಂಜೇಶ, ವಿಜ್ಞಾನಿಗಳು, ಗೇರು ನಿರ್ದೇಶನಾಲಯ, ಪುತ್ತೂರು) ಹಾಗೂ ಕೃಷಿ ವಿಜ್ಞಾನ ಕೇಂದ್ರದ ಎಲ್ಲಾ ವಿಜ್ಞಾನಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು