11:59 AM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ದ.ಕ. ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್  ನೂತನ ಅಧ್ಯಕ್ಷರಾಗಿ ಶಾಸಕ ವೇದವ್ಯಾಸ ಕಾಮತ್ ಆಯ್ಕೆ

13/08/2022, 20:58

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್ ಇದರ ವಾರ್ಷಿಕ ಸಾಮಾನ್ಯ ಸಭೆ ನಗರದ ಬೆಂದೂರ್ ನಲ್ಲಿರುವ ಸೆಂಟ್ ಸೆಬೇಂಸ್ಟಿನ್ ಚರ್ಚ್ ಸಭಾಂಗಣದಲ್ಲಿ ಶನಿವಾರ ಜರುಗಿದ್ದು, ನೂತನ ಅಧ್ಯಕ್ಷರಾಗಿ ಶಾಸಕ ವೇದವ್ಯಾಸ ಕಾಮತ್ ಅವರು ಆಯ್ಕೆಗೊಂಡಿದ್ದಾರೆ.

2022-23 ಮತ್ತು 2023-24 ಅವಧಿಗೆ ನೂತನ ಕಮಿಟಿಯ ಪದಾಧಿಕಾರಿಗಳನ್ನು ಸಹಕಾರಿ ಸಂಘಗಳ ಒಕ್ಕೂಟದ ಸಹಾಯಕ ರಿಜಿಸ್ಟ್ರಾರ್ ಸುಧೀರ್ ಕುಮಾರ್ ಅವರು ಘೋಷಿಸಿದರು.

ಅಧ್ಯಕ್ಷರಾಗಿ ವೇದವ್ಯಾಸ ಕಾಮತ್, ಉಪಾಧ್ಯಕ್ಷರುಗಳಾಗಿ ಅಶೋಕ್ ಪೂವಯ್ಯ ಹಾಗೂ ಶಿವಾನಂದ ಶೆಣೈ, ಕಾರ್ಯದರ್ಶಿಯಾಗಿ ಐವನ್ ಆಲ್ಪ್ರೇಡ್ ಪತ್ರಾವೋ, ಸಹಕಾರ್ಯದರ್ಶಿಗಳಾಗಿ ಗಣೇಶ್ ಪ್ರಸಾದ್ ಕೆ, ಗಣೇಶ್ ಕಾಮತ್, ಕೋಶಾಧಿಕಾರಿಯಾಗಿ ಎ.ಎಸ್ ವೆಂಕಟೇಶ್, ಕಾರ್ಯಕಾರಿಣಿ ಸದಸ್ಯರಾಗಿ ಸುರೇಶ್ ಎಚ್, ರಾಜೇಶ್ ಆಚಾರ್ಯ, ಆರ್.‌ ಶ್ರೀನಿವಾಸ್ ಬಾಳಿಗಾ ಆಯ್ಕೆಯಾಗಿದ್ದಾರೆ.

ಅಶೋಕ್ ಪೂವಯ್ಯ ಸ್ವಾಗತಿಸಿದರು. ಗಣೇಶ್ ಕಾಮತ್ ವಂದಿಸಿದರು.

ಪದಗ್ರಹಣದ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವುದು ಎಂದು ಪದಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು