3:17 PM Saturday23 - August 2025
ಬ್ರೇಕಿಂಗ್ ನ್ಯೂಸ್
ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ! Kodagu | ಸೋಮವಾರಪೇಟೆ: ಯುವಕನ ಆತ್ಮಹತ್ಯೆ; 3 ದಿನಗಳ ಹುಡುಕಾಟದ ಬಳಿಕ ಮೃತದೇಹ… ರಾಜ್ಯದ ಮೊದಲ ‘ವಿದೇಶ ಅಧ್ಯಯನ ಎಕ್ಸ್‌ಪೋ’ ಯಶಸ್ವಿ: 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು…

ಇತ್ತೀಚಿನ ಸುದ್ದಿ

ದ.ಕ. ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್  ನೂತನ ಅಧ್ಯಕ್ಷರಾಗಿ ಶಾಸಕ ವೇದವ್ಯಾಸ ಕಾಮತ್ ಆಯ್ಕೆ

13/08/2022, 20:58

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್ ಇದರ ವಾರ್ಷಿಕ ಸಾಮಾನ್ಯ ಸಭೆ ನಗರದ ಬೆಂದೂರ್ ನಲ್ಲಿರುವ ಸೆಂಟ್ ಸೆಬೇಂಸ್ಟಿನ್ ಚರ್ಚ್ ಸಭಾಂಗಣದಲ್ಲಿ ಶನಿವಾರ ಜರುಗಿದ್ದು, ನೂತನ ಅಧ್ಯಕ್ಷರಾಗಿ ಶಾಸಕ ವೇದವ್ಯಾಸ ಕಾಮತ್ ಅವರು ಆಯ್ಕೆಗೊಂಡಿದ್ದಾರೆ.

2022-23 ಮತ್ತು 2023-24 ಅವಧಿಗೆ ನೂತನ ಕಮಿಟಿಯ ಪದಾಧಿಕಾರಿಗಳನ್ನು ಸಹಕಾರಿ ಸಂಘಗಳ ಒಕ್ಕೂಟದ ಸಹಾಯಕ ರಿಜಿಸ್ಟ್ರಾರ್ ಸುಧೀರ್ ಕುಮಾರ್ ಅವರು ಘೋಷಿಸಿದರು.

ಅಧ್ಯಕ್ಷರಾಗಿ ವೇದವ್ಯಾಸ ಕಾಮತ್, ಉಪಾಧ್ಯಕ್ಷರುಗಳಾಗಿ ಅಶೋಕ್ ಪೂವಯ್ಯ ಹಾಗೂ ಶಿವಾನಂದ ಶೆಣೈ, ಕಾರ್ಯದರ್ಶಿಯಾಗಿ ಐವನ್ ಆಲ್ಪ್ರೇಡ್ ಪತ್ರಾವೋ, ಸಹಕಾರ್ಯದರ್ಶಿಗಳಾಗಿ ಗಣೇಶ್ ಪ್ರಸಾದ್ ಕೆ, ಗಣೇಶ್ ಕಾಮತ್, ಕೋಶಾಧಿಕಾರಿಯಾಗಿ ಎ.ಎಸ್ ವೆಂಕಟೇಶ್, ಕಾರ್ಯಕಾರಿಣಿ ಸದಸ್ಯರಾಗಿ ಸುರೇಶ್ ಎಚ್, ರಾಜೇಶ್ ಆಚಾರ್ಯ, ಆರ್.‌ ಶ್ರೀನಿವಾಸ್ ಬಾಳಿಗಾ ಆಯ್ಕೆಯಾಗಿದ್ದಾರೆ.

ಅಶೋಕ್ ಪೂವಯ್ಯ ಸ್ವಾಗತಿಸಿದರು. ಗಣೇಶ್ ಕಾಮತ್ ವಂದಿಸಿದರು.

ಪದಗ್ರಹಣದ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವುದು ಎಂದು ಪದಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು