12:21 AM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪದಾಧಿಕಾರಿಗಳ ಪುನಶ್ಚೇತನ ಶಿಬಿರ

28/05/2023, 13:42

ಮಂಗಳೂರು(reporterkarnataka.com): ಸಂಘಟನೆಯನ್ನು ಕೆಡಹುವ ಮಾತಿಗಿಂತ ಕಟ್ಟುವ ಪರ್ಯಾಯ ದಾರಿಗಳ ಶೋಧ ಮುಖ್ಯ. ವ್ಯಕ್ತಿಗಿಂತ ಸಂಸ್ಥೆ ಮುಖ್ಯ ಎಂಬುದನ್ನು ಸಂಘಟನೆಯಲ್ಲಿರುವ ಎಲ್ಲರೂ ಅರಿತಿರಬೇಕು. ಪರಿಣಾಮಕಾರಿ ಸಂವಹನ ಮತ್ತು ಸಮನ್ವಯದಿಂದ ಬಲಿಷ್ಠ ಸಂಘಟನೆ ಸಾಧ್ಯ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯ ಹಾವೇರಿ ಇಲ್ಲಿನ ವಿಶ್ರಾಂತ ಕುಲಪತಿ ಪ್ರೊ.ಕೆ ಚಿನ್ನಪ್ಪಗೌಡ ಹೇಳಿದರು.

ಅವರು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಮಂದಿರದಲ್ಲಿ ನಡೆದ ಪದಾಧಿಕಾರಿಗಳ ಪುನಶ್ಚೇತನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ ಶ್ರೀನಾಥ್ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡದ ವಿವಿಧ ಘಟಕಗಳು ಕ್ರಿಯಾಶೀಲವಾಗಿವೆ. ಪದಾಧಿಕಾರಿಗಳು ಪರಸ್ಪರ ಹೊಂದಾಣಿಕೆಯಿಂದ ಇನ್ನಷ್ಟು ಅರ್ಥಪೂರ್ಣ ಕಾರ್ಯಕ್ರಮಗಳು ನಡೆಯಲಿ ಎಂದರು.
ಸಂಪನ್ಮೂಲ ವ್ಯಕ್ತಿಗಳಾಗಿ ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ವರದರಾಜ ಚಂದ್ರಗಿರಿ, ಕರ್ನಾಟಕ ಸರಕಾರದ ಕುವೆಂಪು ಭಾಷಾ ಭಾರತಿ ನಿಕಟಪೂರ್ವ ಅಧ್ಯಕ್ಷ ಡಾ.ಅಜೆಕ್ಕಳ ಗಿರೀಶ್ ಭಟ್ ಭಾಗವಹಿಸಿದರು.
ಕಸಾಪ ಬೆಂಗಳೂರು ಇದರ ಕಾರ್ಯಕಾರಿ ಸಮಿತಿ ಸದಸ್ಯ ಡಾ. ಮಾಧವ ಎಂ.ಕೆ ಸ್ವಾಗತಿಸಿದರು. ಜಿಲ್ಲಾ ಸಂಘಟನಾ ಕಾರ್ಯದರ್ಶಿ ಲಯನ್ ಚಂದ್ರಹಾಸ ಶೆಟ್ಟಿ ದೇರಳಕಟ್ಟೆ ವಂದಿಸಿದರು.ಚಂದ್ರಾವತಿ ಕೆ ಸುಳ್ಯ ಪ್ರಾರ್ಥಿಸಿದರು. ಕಸಾಪ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಯು.ಎಚ್ ಖಾಲಿದ್ ಉಜಿರೆ ನಿರೂಪಿಸಿದರು.
ಕಾರ್ಯಾಗಾರದಲ್ಲಿ ಮಂಗಳೂರು, ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ, ಉಳ್ಳಾಲ, ಮೂಡುಬಿದಿರೆ, ಕಡಬ, ಮೂಲ್ಕಿ ಕಸಾಪ ತಾಲೂಕು ಘಟಕಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು