9:12 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆ; ಜ.30 – ಫೆ.13ರ ವರೆಗೆ ‘ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನಾ ಕಾರ್ಯಕ್ರಮ’

28/01/2025, 19:53

ಮಂಗಳೂರು(reporterkarnataka.com): ಜಿಲ್ಲೆಯಾದ್ಯಂತ ಜ.30ರಿಂದ ಫೆ.13 ರವರೆಗೆ ‘ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನಾ ಕಾರ್ಯಕ್ರಮ’-2025 ನಡೆಯಲಿದೆ.
ಜಿಲ್ಲಾ ಕುಷ್ಠರೋಗ ಅಧಿಕಾರಿ ಡಾ.ಸುದರ್ಶನ್ ಅವರು ಮಂಗಳವಾರ ಜಿಲ್ಲಾ ಆರೋಗ್ಯ ಅಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು.
‘ಒಟ್ಟಾಗಿ ನಾವು ಕುಷ್ಠರೋಗದ ಬಗ್ಗೆ ಜಾಗೃತಿ ಮೂಡಿಸೋಣ, ತಪ್ಪು ಕಲ್ಪನೆಗಳನ್ನು ಹೋಗಲಾಡಿಸೋಣ ಮತ್ತು ಕುಷ್ಠರೋಗದಿಂದ ಯಾರೂ ಬಾಧಿತರಾಗದಂತೆ ನೋಡಿಕೊಳ್ಳೋಣ’ ಎಂಬ ಧ್ಯೇಯ ವಾಕ್ಯದೊಂದಿಗೆ ಈ ವರ್ಷದ ಕುಷ್ಠರೋಗದ ಜಾಗೃತಿಯನ್ನು ಮೂಡಿಸಲಾಗುವುದು ಎಂದರು.
ಜ.30ರಂದು ಪ್ರತಿಜ್ಞಾವಿಧಿ ಬೋಧಿಸಲಾಗುವುದು. 15 ದಿನಗಳ ಕಾಲ ನಡೆಯುವ ಈ ಆಂದೋಲನಾ ಕಾರ್ಯಕ್ರಮದಲ್ಲಿ ಗ್ರಾ.ಪಂ. ಸದಸ್ಯರಿಗೆ ಹಾಗೂ ಗ್ರಾಮಸ್ಥರಿಗೆ ಕುಷ್ಠರೋಗಿಗಳ ಬಗ್ಗೆ ತಾರತಮ್ಯ ಮಾಡದಂತೆ ಮಾಹಿತಿ ನೀಡುವುದು, ಕುಷ್ಠರೋಗಿಯ ಬಗ್ಗೆ ಸಾರ್ವಜನಿಕರು ತೋರುವ ತಾರತಮ್ಯವನ್ನು ಹೋಗಲಾಡಿಸಲು ಕುಷ್ಠರೋಗಿಗಳನ್ನು ಸಭೆಗಳಲ್ಲಿ ಮುಖ್ಯ ಅತಿಥಿಯಾಗಿ ಘೋಷಿಸುವುದು., ಗುಣಮುಖರಾದ ಕುಷ್ಠರೋಗಿಗಳಿಗೆ ಸಾರ್ವಜನಿಕವಾಗಿ ಗ್ರಾ.ಪಂ. ಅಧ್ಯಕ್ಷರಿಂದ ಸನ್ಮಾನಿಸಿ ಕುಷ್ಠರೋಗದ ಬಗ್ಗೆ ಕುಷ್ಠರೋಗಿಯಿಂದ ಸಾರ್ವಜನಿಕರಿಗೆ ಮಾಹಿತಿ ನೀಡಿಸುವುದು. ಆಶಾ ಕಾರ್ಯಕರ್ತೆಯರಿಗೆ ಹಾಗೂ ಇತರ ಕ್ಷೇತ್ರ ಸಿಬ್ಬಂದಿಗಳಿಗೆ ಹಾಗೂ ಕುಷ್ಠರೋಗಿಯ ಬಗ್ಗೆ ತಾರತಮ್ಯವನ್ನು ನಿರ್ಮೂಲನಗೊಳಿಸಲು ತರಬೇತಿ ನೀಡಿ ಅವರ ಮೂಲಕ ಪ್ರತಿ ಮನೆಗೆ ಈ ಮಾಹಿತಿಯನ್ನು ತಲುಪಿಸುವುದು. ಎಲ್ಲಾ ಶಾಲಾ ಕಾಲೇಜುಗಳಲ್ಲಿ ಅವರ ಬೆಳಗ್ಗಿನ ಪ್ರರ್ಥಾನಾ ಸಮಯದಲ್ಲಿ ಕ್ಷೇತ್ರ ಸಿಬ್ಬಂದಿಗಳ ಮೂಲಕ ಕುಷ್ಠರೋಗದ ಬಗ್ಗೆ ಮಾಹಿತಿ ನೀಡುವುದು. ಎಲ್ಲಾ ಗ್ರಾಮ ಸಭೆ, ಸಾಮಾನ್ಯ ಸಭೆ ಹಾಗೂ ಇತರ ಸಭೆಯಲ್ಲಿ ಸಭಿಕರಿಗೆ ಕುಷ್ಠರೋಗದ ಬಗ್ಗೆ ಮಾಹಿತಿ ನೀಡುವುದು. ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲ ಗ್ರಾಪಂ ಅಧ್ಯಕ್ಷರು ಹಾಗೂ ಪಿಡಿಓಗಳನ್ನು ಸಂಪರ್ಕಿಸಿ ಅವರ ಸಹಯೋಗದೊಂದಿಗೆ ಕುಷ್ಠರೋಗದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ಮೈಕಿಂಗ್, ಬ್ಯಾನರ್, ಕರಪತ್ರ, ಮುದ್ರಣ, ಜಾಥಾ, ಕ್ವಿಜ್ ಇತ್ಯಾದಿಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.
ಈ 15 ದಿನಗಳಲ್ಲಿ ಜ.30 ರಂದು ವಿಟ್ಲ ಪಿ.ಯು. ಕಲೇಜಿನಲ್ಲಿ, ಜ.31 ರಂದು ಕೋಟೆಕರ್ ಒಲವಿನ ಹಳ್ಳಿ ಆಶ್ರಮದಲ್ಲಿ, ಫೆ.1ರಂದು ಕೂಳೂರಿನ ವಿದ್ಯಾಜ್ಯೋತಿ ಶಾಲೆಯಲ್ಲಿ, ಫೆ.4ರಂದು ಹಳೆಯಂಗಡಿ ನಾರಾಯಣ ಸನಿಲ್ ಶಾಲೆಯಲ್ಲಿ, ಫೆ.5 ರಂದು ಜಿಲ್ಲಾ ಕಾರಾಗೃಹದಲ್ಲಿ, ಫೆ.6 ರಂದು ಪಡೀಲ್‌ನ ಕೇಂಬ್ರಿಡ್ಜ್ ಶಾಲೆಯಲ್ಲಿ, ಫೆ.11 ರಂದು ಕನ್ಯಾನದ ಭಾರತಿ ಸೇವಾ ಆಶ್ರಮದಲ್ಲಿ, ಫೆ.12 ರಂದು ವಾಮಂಜೂರಿನ ನಿರಾಶ್ರಿತ ಕೇಂದ್ರದಲ್ಲಿ ಶಿಬಿರಗಳು ನಡೆಯಲಿದ್ದು, ಫೆ.3ರಂದು ವೆನ್‌ಲಾಕ್ ಆಸ್ಪತರೆಯಲ್ಲಿ ಹಾಗೂ ಫೆ.7 ರಂದು ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಡಿಪಿಎಂಆರ್ ಶಿಬಿರ ನಡೆಯಲಿದೆ ಎಂದು ಹೇಳಿದರು.
ಇಲ್ಲಿ ಚರ್ಮ ರೋಗ ತಜ್ಞರು ಭಾಗವಹಿಸಲಿದ್ದು, ಉತ್ತಮ ತಪಾಸಣೆ ನಡೆಸಿ, ಉಚಿತ ಮದ್ದು ನೀಡಲಿದ್ದಾರೆ, ನಡೆದಾಡಲು ಆಗದವರಿಗೆ ವೀಲ್‌ಚೇರ್ ಹಾಗೂ ಬೇಕಾದ ಸಾಧನಗಳನ್ನು ವಿತರಿಸಲಾಗುವುದು. ಗಾಯ ಆದವರಿಗೆ ಚಿಕಿತ್ಸೆ ಹಾಗೂ ಉತ್ತಮ ಪಾದರಕ್ಷೆಗಳನ್ನು ವಿತರಿಸಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ೧೭೮೫ ಜನರು ಕುಷ್ಠರೋಗಕ್ಕೆ ಒಳಗಾಗಿದ್ದು, ಜಿಲ್ಲೆಯಲ್ಲಿ ಈ ವರ್ಷ ೩೦ ಜನ ಮಾತ್ರ ರೋಗಿಗಳು ಪತ್ತೆಯಾಗಿದ್ದಾರೆ. ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ೧೦೦ಕ್ಕೂ ಹೆಚ್ಚು ಜನರು ರೋಗಿಗಳಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ ೭೨ ಜನ ಆನ್‌ಲೈನ್ ಮೂಲಕ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಾ.ಸುದರ್ಶನ್ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು