6:47 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8ರಂದು ಲಕ್ಷ ಲಸಿಕಾ ಮೇಳ: 430 ಉಪ ಕೇಂದ್ರಗಳಲ್ಲಿ ವ್ಯವಸ್ಥೆ; ಹೆಚ್ಚುವರಿ ಸಿಬ್ಬಂದಿ ನಿಯೋಜನೆ

07/09/2021, 09:11

ಮಂಗಳೂರು(reporterkarnataka.com): ಕೋವಿಡ್ ಲಸಿಕೆಯ ಲಕ್ಷ ಲಸಿಕಾ ಮೇಳವನ್ನು ಜಿಲ್ಲೆಯಲ್ಲಿ ಸೆ. 8ರ ಬುಧವಾರ ಹಮ್ಮಿಕೊಳ್ಳಲಾಗಿದ್ದು, 430 ಉಪಕೇಂದ್ರಗಳಲ್ಲಿ ಅದಕ್ಕಾಗಿ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಇರುವ ಸಿಬ್ಬಂದಿಗಳೊಂದಿಗೆ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. 

ಪ್ರತಿ ಕೇಂದ್ರದಲ್ಲಿ ಇಬ್ಬರು ಡೇಟಾ ಎಂಟ್ರಿ ಆಪರೇಟರ್ ಸೇರಿದಂತೆ ಅಗತ್ಯವಿರುವ ಸಿಬ್ಬಂದಿಗಳನ್ನು ಈ ಕಾರ್ಯಕ್ಕೆ ನೇಮಿಸಲಾಗಿದೆ. 18 ವರ್ಷ ಮೇಲ್ಪಟ್ಟವರು ಮೊದಲ ಅಥವಾ ಎರಡನೇ ಡೋಸ್ ಲಸಿಕೆಯನ್ನು ಈ ಲಸಿಕಾ ಮೇಳದಲ್ಲಿ ಪಡೆಯಬಹುದಾಗಿದೆ. ಉದ್ಯೋಗಸ್ಥರ ಅನುಕೂಲಕ್ಕಾಗಿ ಬೆಳಿಗ್ಗೆಯಿಂದ ರಾತ್ರಿಯ ವರೆಗೆ ಲಸಿಕೆಯನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ನಾಗರೀಕರು ಇದರ ಸದುಪಯೋಗ ಪಡೆಯುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದರು.

ಜಿಲ್ಲೆಯಲ್ಲಿ ಪಾಸಿಟಿವಿಟಿ ಸೂಚ್ಯಂಕ ಕಡಿಮೆ ಮಾಡಲು ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳಂತೆ ಈ ಬಾರಿಯೂ ಪರಿಸರ ಸ್ನೇಹಿ ಗಣೇಶ ಚತುರ್ಥಿಯನ್ನು ಜಿಲ್ಲೆಯ ಜನತೆ ಆಚರಿಸುವಂತೆ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ತಿಳಿದರು.

ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಉಪ ವಿಭಾಗಾಧಿಕಾರಿ ಮದನ್ ಮೋಹನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕಿಶೋರ್, ಆರೋಗ್ಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.  

ಇತ್ತೀಚಿನ ಸುದ್ದಿ

ಜಾಹೀರಾತು