10:36 AM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆಯಲ್ಲಿ ಭಾರಿ ಮಳೆ: ತುಂಬಿ ಹರಿದ ನೇತ್ರಾವತಿ, ಕುಮಾರಧಾರಾ; ಚೇಳ್ಯಡ್ಕ ಸೇತುವೆ ಮುಳುಗಡೆ, ಕುಕ್ಕೆ ಸ್ನಾನಘಟ್ಟ 2ನೇ ದಿನವೂ ಜಲಾವೃತ

15/07/2021, 18:06

ಮಂಗಳೂರು(reporterkarnataka news); ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಬಿರುಸಿನ ಮಳೆಯಾಗುತ್ತಿದ್ದು, ಜಿಲ್ಲೆಯ ಪ್ರಮುಖ ನದಿಗಳು, ಹಳ್ಳ-ಕೊಳ್ಳ ತುಂಬಿ ಹರಿಯುತ್ತಿದೆ. ಪವಿತ್ರಾ ಯಾತ್ರಾ ಸ್ಥಳವಾದ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಎರಡನೇ ದಿನವಾದ ಇಂದು ಕೂಡ ಮುಳುಗಿದೆ. ಪುತ್ತೂರು- ಪಾಣಾಜೆ ಸಂಪರ್ಕಿಸುವ ಚೇಳ್ಯಡ್ಕ ಸೇತುವೆ ಭಾರಿ ಮಳೆಗೆ ಮುಳುಗಡೆಯಾಗಿ ಜನ ಸಂಚಾರಕ್ಕೆ ತೊಂದರೆ ಉಂಟಾಗಿದೆ.

ಜಿಲ್ಲೆಯ ಪ್ರಮುಖ ನದಿಗಳಾದ ನೇತ್ರಾವತಿ, ಕುಮಾರಧಾರ, ಫಲ್ಗುಣಿ, ನಂದಿನಿ, ಶಾಂಭವಿ ಹಾಗೂ ಪಯಸ್ವಿನಿ ತುಂಬಿ ಹರಿಯುತ್ತದೆ. ಹಳ್ಳ-ಕೊಳ್ಳಗಳು ಕೂಡ ನೀರಿನಿಂದ ತುಂಬಿವೆ. ಧರ್ಮಸ್ಥಳದಲ್ಲಿ ನಿನ್ನೆ ನೇತ್ರಾವತಿ ರುದ್ರರೂಪ ತಾಳಿತ್ತು. ಆದರೆ ಯಾವುದೇ ಅನಾಹುತ ಉಂಟು ಮಾಡದೆ ನಂತರ ಶಾಂತವಾಯಿತು.

ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಸ್ನಾನಘಟ್ಟ ಎರಡನೇ ದಿನವಾದ ಇಂದು ಕೂಡ ಮುಳುಗಿದೆ. ಜಿಲ್ಲೆಯ ಹಲವೆಡೆ ಗುಡ್ಡ ಕುಸಿದ ಬಗ್ಗೆ ವರದಿಯಾಗಿದೆ. ಪುತ್ತೂರು ನಗರದಲ್ಲಿ ಗುರುವಾರ ಧರೆ ಕುಸಿದು ಎರಡು ಮನೆಗಳಿಗೆ ಅಪಾಯ ಉಂಟಾಗಿದೆ. ಕುಮಾರಧಾರಾ ಮತ್ತು ನೇತ್ರಾವತಿ ಸಂಗಮ ಸ್ಥಳವಾದ ಉಪ್ಪಿನಂಗಡಿಯಲ್ಲಿ ನದಿ ನೀರಿನ ಮಟ್ಟ ಅಪಾಯದ ಮಟ್ಟದತ್ತ ಸಾಗುತ್ತಿದೆ. ಈಗಾಗಲೇ ನದಿ ನೀರಿನ ಮಟ್ಟ 27.5. ಅಡಿಗೆ ತಲುಪಿದೆ. 30 ಅಡಿ ಅಪಾಯದ ಮಟ್ಟವಾಗಿದೆ. ಗೃಹ ರಕ್ಷಕ ದಳದ ಸಿಬ್ಬಂದಿಗಳು ಹಾಗೂ ಕಂದಾಯ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಎರಡು ಬೋಟು ಹಾಗೂ ಮೂವರು ನುರಿತ ಈಜುಗಾರರ ತಂಡವನ್ನು ಸನ್ನದ್ಧ ಸ್ಥಿತಿಯಲ್ಲಿ ಇಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು