7:19 PM Saturday14 - February 2026
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್…

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆಯಲ್ಲಿ ಭಾರಿ ಮಳೆ: ತುಂಬಿ ಹರಿದ ನೇತ್ರಾವತಿ, ಕುಮಾರಧಾರಾ; ಚೇಳ್ಯಡ್ಕ ಸೇತುವೆ ಮುಳುಗಡೆ, ಕುಕ್ಕೆ ಸ್ನಾನಘಟ್ಟ 2ನೇ ದಿನವೂ ಜಲಾವೃತ

15/07/2021, 18:06

ಮಂಗಳೂರು(reporterkarnataka news); ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಬಿರುಸಿನ ಮಳೆಯಾಗುತ್ತಿದ್ದು, ಜಿಲ್ಲೆಯ ಪ್ರಮುಖ ನದಿಗಳು, ಹಳ್ಳ-ಕೊಳ್ಳ ತುಂಬಿ ಹರಿಯುತ್ತಿದೆ. ಪವಿತ್ರಾ ಯಾತ್ರಾ ಸ್ಥಳವಾದ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಎರಡನೇ ದಿನವಾದ ಇಂದು ಕೂಡ ಮುಳುಗಿದೆ. ಪುತ್ತೂರು- ಪಾಣಾಜೆ ಸಂಪರ್ಕಿಸುವ ಚೇಳ್ಯಡ್ಕ ಸೇತುವೆ ಭಾರಿ ಮಳೆಗೆ ಮುಳುಗಡೆಯಾಗಿ ಜನ ಸಂಚಾರಕ್ಕೆ ತೊಂದರೆ ಉಂಟಾಗಿದೆ.

ಜಿಲ್ಲೆಯ ಪ್ರಮುಖ ನದಿಗಳಾದ ನೇತ್ರಾವತಿ, ಕುಮಾರಧಾರ, ಫಲ್ಗುಣಿ, ನಂದಿನಿ, ಶಾಂಭವಿ ಹಾಗೂ ಪಯಸ್ವಿನಿ ತುಂಬಿ ಹರಿಯುತ್ತದೆ. ಹಳ್ಳ-ಕೊಳ್ಳಗಳು ಕೂಡ ನೀರಿನಿಂದ ತುಂಬಿವೆ. ಧರ್ಮಸ್ಥಳದಲ್ಲಿ ನಿನ್ನೆ ನೇತ್ರಾವತಿ ರುದ್ರರೂಪ ತಾಳಿತ್ತು. ಆದರೆ ಯಾವುದೇ ಅನಾಹುತ ಉಂಟು ಮಾಡದೆ ನಂತರ ಶಾಂತವಾಯಿತು.

ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಸ್ನಾನಘಟ್ಟ ಎರಡನೇ ದಿನವಾದ ಇಂದು ಕೂಡ ಮುಳುಗಿದೆ. ಜಿಲ್ಲೆಯ ಹಲವೆಡೆ ಗುಡ್ಡ ಕುಸಿದ ಬಗ್ಗೆ ವರದಿಯಾಗಿದೆ. ಪುತ್ತೂರು ನಗರದಲ್ಲಿ ಗುರುವಾರ ಧರೆ ಕುಸಿದು ಎರಡು ಮನೆಗಳಿಗೆ ಅಪಾಯ ಉಂಟಾಗಿದೆ. ಕುಮಾರಧಾರಾ ಮತ್ತು ನೇತ್ರಾವತಿ ಸಂಗಮ ಸ್ಥಳವಾದ ಉಪ್ಪಿನಂಗಡಿಯಲ್ಲಿ ನದಿ ನೀರಿನ ಮಟ್ಟ ಅಪಾಯದ ಮಟ್ಟದತ್ತ ಸಾಗುತ್ತಿದೆ. ಈಗಾಗಲೇ ನದಿ ನೀರಿನ ಮಟ್ಟ 27.5. ಅಡಿಗೆ ತಲುಪಿದೆ. 30 ಅಡಿ ಅಪಾಯದ ಮಟ್ಟವಾಗಿದೆ. ಗೃಹ ರಕ್ಷಕ ದಳದ ಸಿಬ್ಬಂದಿಗಳು ಹಾಗೂ ಕಂದಾಯ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಎರಡು ಬೋಟು ಹಾಗೂ ಮೂವರು ನುರಿತ ಈಜುಗಾರರ ತಂಡವನ್ನು ಸನ್ನದ್ಧ ಸ್ಥಿತಿಯಲ್ಲಿ ಇಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು