6:22 AM Wednesday23 - July 2025
ಬ್ರೇಕಿಂಗ್ ನ್ಯೂಸ್
Davanagere | ವೀರಶೈವ ಲಿಂಗಾಯತ ಎಲ್ಲ ಗುರು ಭಕ್ತರು ಒಂದಾದರೆ ನಮ್ಮನ್ನು ತಡೆಯುವವರು… Chikkamagaluru | ಬಣಕಲ್ ಪ್ರೌಢ ಶಾಲೆಯಲ್ಲಿ ಲಾಸ್ಟ್ ಬೆಂಚ್ ಸ್ಟೂಡೆಂಟ್ಸ್ ಪರಿಕಲ್ಪನೆಗೆ ಮಂಗಳ:… Kodagu | ಮಹಿಳೆಗೆ ಹಲ್ಲೆ ನಡೆಸಿ ಸರ ಅಪಹರಣ: ಗ್ರಾಮಸ್ಥರ ಕೈಗೆ ಸಿಕ್ಕಿ… ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:…

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆಯಲ್ಲಿ ದನಗಳಿಗೆ ಚರ್ಮಗಂಟು ರೋಗ: ಮುನ್ನೆಚ್ಚರಿಕೆ ವಹಿಸಲು ಸೂಚನೆ

02/12/2022, 13:53

ಸುಳ್ಯ(reporterkarnataka.com): ಉತ್ತರ ಕರ್ನಾಟಕದಲ್ಲಿ ಕಾಣಿಸಿಕೊಂಡ ಚರ್ಮಗಂಟು ರೋಗ ಈಗ ದ.ಕ. ದಲ್ಲಿ ಕಾಣಿಸಿಕೊಂಡಿದೆ. ಆ ಮೂಲಕ ಹೈನುಗಾರರ ನಿದ್ದೆಗೆಡಿಸುವಂತೆ ಮಾಡಿದೆ.

ಜಿಲ್ಲೆಯ ಬೆಳ್ತಂಗಡಿ, ಕಡಬ, ಸುಳ್ಯ ತಾಲೂಕುಗಳ ಕೆಲವು ಗ್ರಾಮಗಳಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗದ ಲಕ್ಷಣಗಳು ಕಂಡು ಬಂದಿವೆ.
ಚರ್ಮಗಂಟು ರೋಗವು ದನ ಮತ್ತು ಎಮ್ಮೆಗಳಲ್ಲಿ ಕಂಡು ಬರುವ ವೈರಸ್ ಕಾಯಿಲೆಯಾಗಿದ್ದು ಕ್ಯಾಪ್ರಿಪಾಕ್ಸ್ ಎಂಬ ವೈರಾಣುವಿನಿಂದ ಹರಡುತ್ತದೆ. ರೋಗ ತಗುಲಿದ ಪ್ರಾಣಿಯಿಂದ ರಕ್ತ ಹೀರುವ ಸೊಳ್ಳೆ,ಉಣ್ಣೆ ನೊಣಗಳು ಆರೋಗ್ಯವಂತ ಜಾನುವಾರುಗಳಿಗೆ ಕಚ್ಚುವ ಮೂಲಕ ರೋಗವನ್ನು ಹರಡುತ್ತವೆ. ರೋಗಪೀಡಿತ ಜಾನುವಾರುಗಳ ರಕ್ತ, ಕೀವು, ದೈಹಿಕ ಸ್ರಾವಗಳ ನೇರ ಸಂಪರ್ಕದಿಂದಲೂ ರೋಗಾಣು ಹರಡಬಹುದು.

ಬೆಳ್ತಂಗಡಿ ತಾಲೂಕಿನ ಹೊಸಂಗಡಿ, ಚಿಬಿದ್ರೆ, ಧರ್ಮಸ್ಥಳ ಗ್ರಾಮಗಳ ಶಂಕಿತ 5 ಹಸುಗಳ ಕಡಬದ ಕಡಬ, ಕುಟುಪಾಡಿ, ಬಂಟ್ರ ಗ್ರಾಮಗಳ 3 ಹಸುಗಳ, ಸುಳ್ಯ ತಾಲೂಕಿನ ಉಬರಡ್ಕ ಮಿತ್ತೂರು, ಮಕರ್ಂಜೆ ಗ್ರಾಮಗಳ 2 ಚರ್ಮ ಗಂಟು ರೋಗ ಶಂಕಿತ ಹಸುಗಳ ರಕ್ತದ ಮಾದರಿಯನ್ನು ಜಿಲ್ಲಾ ಪ್ರಯೋಗಕ್ಕೆ ಈಗಾಗಲೇ ರವಾನಿಸಲಾಗಿದೆ.
ಚರ್ಮಗಂಟು ರೋಗದ ಲಕ್ಷಣಗಳು ಕಂಡು ಬರುತ್ತಿದ್ದಂತೆ ಇದೀಗ ಜಿಲ್ಲೆಯ ಪ್ರತಿ ತಾಲೂಕಿಗೆ ತಲಾ 19,000 ಲಸಿಕೆಯನ್ನು ಇಲಾಖೆ ವತಿಯಿಂದ ಪೂರೈಸಲಾಗಿದ್ದು, ಅಲ್ಲಲ್ಲಿ ಶಿಬಿರಗಳನ್ನು ಏರ್ಪಡಿಸುವ ಮೂಲಕ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು