4:40 AM Sunday5 - April 2026
ಬ್ರೇಕಿಂಗ್ ನ್ಯೂಸ್
ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ…

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆಯಲ್ಲಿ ದನಗಳಿಗೆ ಚರ್ಮಗಂಟು ರೋಗ: ಮುನ್ನೆಚ್ಚರಿಕೆ ವಹಿಸಲು ಸೂಚನೆ

02/12/2022, 13:53

ಸುಳ್ಯ(reporterkarnataka.com): ಉತ್ತರ ಕರ್ನಾಟಕದಲ್ಲಿ ಕಾಣಿಸಿಕೊಂಡ ಚರ್ಮಗಂಟು ರೋಗ ಈಗ ದ.ಕ. ದಲ್ಲಿ ಕಾಣಿಸಿಕೊಂಡಿದೆ. ಆ ಮೂಲಕ ಹೈನುಗಾರರ ನಿದ್ದೆಗೆಡಿಸುವಂತೆ ಮಾಡಿದೆ.

ಜಿಲ್ಲೆಯ ಬೆಳ್ತಂಗಡಿ, ಕಡಬ, ಸುಳ್ಯ ತಾಲೂಕುಗಳ ಕೆಲವು ಗ್ರಾಮಗಳಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗದ ಲಕ್ಷಣಗಳು ಕಂಡು ಬಂದಿವೆ.
ಚರ್ಮಗಂಟು ರೋಗವು ದನ ಮತ್ತು ಎಮ್ಮೆಗಳಲ್ಲಿ ಕಂಡು ಬರುವ ವೈರಸ್ ಕಾಯಿಲೆಯಾಗಿದ್ದು ಕ್ಯಾಪ್ರಿಪಾಕ್ಸ್ ಎಂಬ ವೈರಾಣುವಿನಿಂದ ಹರಡುತ್ತದೆ. ರೋಗ ತಗುಲಿದ ಪ್ರಾಣಿಯಿಂದ ರಕ್ತ ಹೀರುವ ಸೊಳ್ಳೆ,ಉಣ್ಣೆ ನೊಣಗಳು ಆರೋಗ್ಯವಂತ ಜಾನುವಾರುಗಳಿಗೆ ಕಚ್ಚುವ ಮೂಲಕ ರೋಗವನ್ನು ಹರಡುತ್ತವೆ. ರೋಗಪೀಡಿತ ಜಾನುವಾರುಗಳ ರಕ್ತ, ಕೀವು, ದೈಹಿಕ ಸ್ರಾವಗಳ ನೇರ ಸಂಪರ್ಕದಿಂದಲೂ ರೋಗಾಣು ಹರಡಬಹುದು.

ಬೆಳ್ತಂಗಡಿ ತಾಲೂಕಿನ ಹೊಸಂಗಡಿ, ಚಿಬಿದ್ರೆ, ಧರ್ಮಸ್ಥಳ ಗ್ರಾಮಗಳ ಶಂಕಿತ 5 ಹಸುಗಳ ಕಡಬದ ಕಡಬ, ಕುಟುಪಾಡಿ, ಬಂಟ್ರ ಗ್ರಾಮಗಳ 3 ಹಸುಗಳ, ಸುಳ್ಯ ತಾಲೂಕಿನ ಉಬರಡ್ಕ ಮಿತ್ತೂರು, ಮಕರ್ಂಜೆ ಗ್ರಾಮಗಳ 2 ಚರ್ಮ ಗಂಟು ರೋಗ ಶಂಕಿತ ಹಸುಗಳ ರಕ್ತದ ಮಾದರಿಯನ್ನು ಜಿಲ್ಲಾ ಪ್ರಯೋಗಕ್ಕೆ ಈಗಾಗಲೇ ರವಾನಿಸಲಾಗಿದೆ.
ಚರ್ಮಗಂಟು ರೋಗದ ಲಕ್ಷಣಗಳು ಕಂಡು ಬರುತ್ತಿದ್ದಂತೆ ಇದೀಗ ಜಿಲ್ಲೆಯ ಪ್ರತಿ ತಾಲೂಕಿಗೆ ತಲಾ 19,000 ಲಸಿಕೆಯನ್ನು ಇಲಾಖೆ ವತಿಯಿಂದ ಪೂರೈಸಲಾಗಿದ್ದು, ಅಲ್ಲಲ್ಲಿ ಶಿಬಿರಗಳನ್ನು ಏರ್ಪಡಿಸುವ ಮೂಲಕ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು