8:02 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆಯಲ್ಲಿ ದನಗಳಿಗೆ ಚರ್ಮಗಂಟು ರೋಗ: ಮುನ್ನೆಚ್ಚರಿಕೆ ವಹಿಸಲು ಸೂಚನೆ

02/12/2022, 13:53

ಸುಳ್ಯ(reporterkarnataka.com): ಉತ್ತರ ಕರ್ನಾಟಕದಲ್ಲಿ ಕಾಣಿಸಿಕೊಂಡ ಚರ್ಮಗಂಟು ರೋಗ ಈಗ ದ.ಕ. ದಲ್ಲಿ ಕಾಣಿಸಿಕೊಂಡಿದೆ. ಆ ಮೂಲಕ ಹೈನುಗಾರರ ನಿದ್ದೆಗೆಡಿಸುವಂತೆ ಮಾಡಿದೆ.

ಜಿಲ್ಲೆಯ ಬೆಳ್ತಂಗಡಿ, ಕಡಬ, ಸುಳ್ಯ ತಾಲೂಕುಗಳ ಕೆಲವು ಗ್ರಾಮಗಳಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗದ ಲಕ್ಷಣಗಳು ಕಂಡು ಬಂದಿವೆ.
ಚರ್ಮಗಂಟು ರೋಗವು ದನ ಮತ್ತು ಎಮ್ಮೆಗಳಲ್ಲಿ ಕಂಡು ಬರುವ ವೈರಸ್ ಕಾಯಿಲೆಯಾಗಿದ್ದು ಕ್ಯಾಪ್ರಿಪಾಕ್ಸ್ ಎಂಬ ವೈರಾಣುವಿನಿಂದ ಹರಡುತ್ತದೆ. ರೋಗ ತಗುಲಿದ ಪ್ರಾಣಿಯಿಂದ ರಕ್ತ ಹೀರುವ ಸೊಳ್ಳೆ,ಉಣ್ಣೆ ನೊಣಗಳು ಆರೋಗ್ಯವಂತ ಜಾನುವಾರುಗಳಿಗೆ ಕಚ್ಚುವ ಮೂಲಕ ರೋಗವನ್ನು ಹರಡುತ್ತವೆ. ರೋಗಪೀಡಿತ ಜಾನುವಾರುಗಳ ರಕ್ತ, ಕೀವು, ದೈಹಿಕ ಸ್ರಾವಗಳ ನೇರ ಸಂಪರ್ಕದಿಂದಲೂ ರೋಗಾಣು ಹರಡಬಹುದು.

ಬೆಳ್ತಂಗಡಿ ತಾಲೂಕಿನ ಹೊಸಂಗಡಿ, ಚಿಬಿದ್ರೆ, ಧರ್ಮಸ್ಥಳ ಗ್ರಾಮಗಳ ಶಂಕಿತ 5 ಹಸುಗಳ ಕಡಬದ ಕಡಬ, ಕುಟುಪಾಡಿ, ಬಂಟ್ರ ಗ್ರಾಮಗಳ 3 ಹಸುಗಳ, ಸುಳ್ಯ ತಾಲೂಕಿನ ಉಬರಡ್ಕ ಮಿತ್ತೂರು, ಮಕರ್ಂಜೆ ಗ್ರಾಮಗಳ 2 ಚರ್ಮ ಗಂಟು ರೋಗ ಶಂಕಿತ ಹಸುಗಳ ರಕ್ತದ ಮಾದರಿಯನ್ನು ಜಿಲ್ಲಾ ಪ್ರಯೋಗಕ್ಕೆ ಈಗಾಗಲೇ ರವಾನಿಸಲಾಗಿದೆ.
ಚರ್ಮಗಂಟು ರೋಗದ ಲಕ್ಷಣಗಳು ಕಂಡು ಬರುತ್ತಿದ್ದಂತೆ ಇದೀಗ ಜಿಲ್ಲೆಯ ಪ್ರತಿ ತಾಲೂಕಿಗೆ ತಲಾ 19,000 ಲಸಿಕೆಯನ್ನು ಇಲಾಖೆ ವತಿಯಿಂದ ಪೂರೈಸಲಾಗಿದ್ದು, ಅಲ್ಲಲ್ಲಿ ಶಿಬಿರಗಳನ್ನು ಏರ್ಪಡಿಸುವ ಮೂಲಕ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು