11:03 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ದ.ಕ. ಲೋಕಸಭೆ ಕ್ಷೇತ್ರದಿಂದ ಪದ್ಮರಾಜ್ ಆರ್., ಉಡುಪಿಯಿಂದ ಕೋಟ, ಶಿವಮೊಗ್ಗದಿಂದ ಗೀತಾ ಶಿವರಾಜಕುಮಾರ್ ಗೆಲ್ಲಿಸಿ: ಸತ್ಯಜಿತ್ ಸುರತ್ಕಲ್

01/04/2024, 16:10

ಮಂಗಳೂರು(reporterkarnataka.com):ರಾಜಕೀಯವನ್ನು ಬದಿಗೆ ಸರಿಸಿ ದ.ಕ. ಲೋಕಸಭೆ ಕ್ಷೇತ್ರದಿಂದ ಪದ್ಮರಾಜ್ ಆರ್., ಉಡುಪಿಯಿಂದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಿವಮೊಗ್ಗದಿಂದ ಗೀತಾ ಶಿವರಾಜಕುಮಾರ್ ಅವರನ್ನು ಗೆಲ್ಲಿಸುವ ಮೂಲಕ ಬಿಲ್ಲವ ಸಮುದಾಯಕ್ಕೆ ಬಲ ನೀಡುವಂತೆ ಬ್ರಹ್ಮಶ್ರೀ ನಾರಾಯಣ ಗುರು ವೇದಿಕೆ ಅಧ್ಯಕ್ಷ ಸತ್ಯಜಿತ್ ಸುರತ್ಕಲ್ ಹೇಳಿದರು.

ನಗರದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಲೋಕಸಭೆಗೆ ಬಿಜೆಪಿ ಟಿಕೆಟ್ ತಪ್ಪಿದ ಬಗ್ಗೆ ಅಸಮಾಧಾನ ಹೊರ ಹಾಕಿದರು.
ರಾಜ್ಯದಲ್ಲಿ ಬಿಜೆಪಿ ಇಲ್ಲ, ಬಿ.ಎಲ್. ಸಂತೋಷರ ಪಾರ್ಟಿ ಇತ್ತು. ಈಗ ಇಲ್ಲ. ಈಗ ಯಡಿಯೂರಪ್ಪರ ಪಾರ್ಟಿ ಇರೋದು. ಅವರ ಹಿಂದೆ ಯಾರು ಜೈಕಾರ ಹಾಕುತ್ತಾರೋ, ಅವರಿಗೆ ಬಕೆಟ್ ಹಿಡಿಯುತ್ತಾರೋ ಅವರಿಗೆ ಮಾತ್ರ ಅವಕಾಶ ಎಂದು
ಸತ್ಯಜಿತ್ ಸುರತ್ಕಲ್ ಆಕ್ರೋಶ ವ್ಯಕ್ತಪಡಿಸಿದರು.
ನಾನು ಹುಟ್ಟಿದ ಜಾತಿ, ಊರು ಸರಿಯಿಲ್ಲ. ಅದಕ್ಕಾಗಿ ಟಿಕೆಟ್ ತಪ್ಪಿದೆ. ಬ್ರಾಹ್ಮಣ, ಲಿಂಗಾಯತ, ಒಕ್ಕಲಿಗ, ಬಂಟ ಸಮುದಾಯದಲ್ಲಿ ಹುಟ್ಟಿದರೆ ನನಗೂ ಟಿಕೆಟ್ ಸಿಕುತ್ತಿತ್ತು. ಶೂದ್ರ ಸಮಾಜದಲ್ಲಿ ಹುಟ್ಟಿದ್ದರಿಂದ ನನಗೆ ಸೇವೆ ಮಾಡಲು ಮಾತ್ರ ಅವಕಾಶ. ಶೂದ್ರರು ತಾವಾಗಿ ಸ್ಥಾನ ಕೇಳಲು ಹೋಗಬಾರದು. ನಾಯಕರು ಹೇಳಿದಂತೆ, ಅವರಿಗೆ ಬಕೆಟ್ ಹಿಡಿದರೆ ಅವಕಾಶಗಳು ಸಿಗುತ್ತದೆ. ವೈಯಕ್ತಿಕ ಶಕ್ತಿ- ಸಾಮರ್ಥ್ಯ ಇರೋರಿಗೆ ಅವಕಾಶ ಇಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಉಡುಪಿಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಟಿಕೆಟ್ ನೀಡಿ ಬಿಲ್ಲವರಿಗೆ ಅನ್ಯಾಯ ಮಾಡಿದೆ. ಕೋಟರು ಎಂಎಲ್ಸಿ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ. ಇಂತಹ ಸ್ಥಾನ ನಮ್ಮ ಸಮಾಜಕ್ಕೆ ಮತ್ತೆ ಸಿಗಲು ಸಾಧ್ಯವಿಲ್ಲ. ಉಡುಪಿ ಯಲ್ಲಿ ಪ್ರಾಮಾಣಿಕ ಸೇವೆ ಮಾಡಿದ ಬೇರೆಯವರು ಇದ್ದರು. ಅವರಿಗೆ ನೀಡುತ್ತಿದರೆ ಬಿಲ್ಲವ ಸಮಾಜಕ್ಕೆ ನ್ಯಾಯ ಸಿಗುತ್ತಿತ್ತು.ಈಗ ಬಿಜೆಪಿಯಿಂದ ಬಿಲ್ಲವ ಸಮಾಜಕ್ಕೆ ಅನ್ಯಾಯವಾಗಿದೆ ಎಂದು ಅವರು ನುಡಿದರು.
ಅನೇಕ ವರ್ಷಗಳ ಬಳಿಕ ಬಿಲ್ಲವ ಸಮಾಜಕ್ಕೆ ಕರಾವಳಿಯಲ್ಲಿ ಮೂವರಿಗೆ ಟಿಕೆಟ್ ಸಿಕ್ಕಿದೆ. ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಸಿಕ್ಕಿದೆ.
ದ.ಕ. ದಲ್ಲಿ ಪದ್ಮರಾಜ್, ಉಡುಪಿ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಿವಮೊಗ್ಗದಲ್ಲಿ ಗೀತಾ ಶಿವರಾಜಕುಮಾರ್ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸುವ ಮೂಲಕ ಬಿಲ್ಲವ ಸಮುದಾಯಕ್ಕೆ ಬಲ ನೀಡಬೇಕು. ಬಿಲ್ಲವ ಬಾಂಧವರು ಪಕ್ಷ ಬದಿಗೊತ್ತಿ ಈ ಮೂವರು ಅಭ್ಯರ್ಥಿಗಳನ್ನು ಗೆಲ್ಲಿಸಬೇಕೆಂದು ಸತ್ಯಜಿತ್ ಸುರತ್ಕಲ್ ಕರೆ ಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು