7:27 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ದ.ಕ.: ಒಟ್ಟು 130 ಕಿ.ಮೀ. ಉದ್ದದ ಮಾನವ ಸರಪಳಿಗೆ ಸಾಕ್ಷಿಯಾಗಲಿದೆ ಸೆ. 15; ಸುಮಾರು 1 ಲಕ್ಷಕ್ಕೂ ಅಧಿಕ ಮಂದಿ ಭಾಗಿ

13/09/2024, 21:19

ಮಂಗಳೂರು(reporterkarnataka.com): ಸೆಪ್ಟೆಂಬರ್ 15ರಂದು ನಡೆಯುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಜಿಲ್ಲೆಯಲ್ಲಿ ಮೂಲ್ಕಿ ಹೆಜಮಾಡಿ ಟೋಲ್ ಗೇಟ್‍ನಿಂದ ಸುಳ್ಯ ಸಂಪಾಜೆ ಗೇಟ್‍ವರೆಗೆ ಬೃಹತ್ ಮಾನವ ಸರಪಳಿ ನಿರ್ಮಿಸಲಾಗುವುದು.
ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಟ್ಟು 130 ಕಿ.ಮೀ. ಸಾಗಲಿರುವ ಈ ಮಾನವ ಸರಪಳಿಯಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ. ಮೂಲ್ಕಿ-ಸುರತ್ಕಲ್-ಬೈಕಂಪಾಡಿ-ನಂತೂರು-ಪಡೀಲ್-ಬಿ.ಸಿ.ರೋಡು-ಪುತ್ತೂರು-ಸುಳ್ಯ ಮಾರ್ಗದಲ್ಲಿ ಮಾನವ ಸರಪಳಿ ಸಾಗಲಿದೆ.ಭಾನುವಾರ ಬೆಳಿಗ್ಗೆ 9.30ರಿಂದ 9:37 ರವರೆಗೆ ಮಾನವ ಸರಪಳಿಯಲ್ಲಿ ಭಾಗವಹಿಸುವವರು ಸರತಿ ಸಾಲಿನಲ್ಲಿ ನಿಲ್ಲಬೇಕು. 9:37ರಿಂದ 9.40 ರವರೆಗೆ ನಾಡಗೀತೆ, 9.41ರಿಂದ 9:55ರ ವರೆಗೆ ಮುಖ್ಯ ಅತಿಥಿಗಳಿಂದ ಭಾಷಣ, 9:55ರಿಂದ 9:57ರವರೆಗೆ ಸಂವಿಧಾನ ಪ್ರಸ್ತಾವನೆ ಓದುವುದು, 9:57 ರಿಂದ 9:59 ರವರೆಗೆ ಮಾನವ ಸರಪಳಿಯಲ್ಲಿ ಕೈ ಕೈ ಹಿಡಿದು ನಿಲ್ಲುವುದು. ಬೆಳಿಗ್ಗೆ 10 ಗಂಟೆಗೆ ಮಾನವ ಸರಪಳಿಯಲ್ಲಿಯೇ ತಮ್ಮ ಎರಡು ಕೈಗಳನ್ನು ಮೇಲೆತ್ತಿ ಜೈ ಹಿಂದ್, ಜೈ ಕರ್ನಾಟಕ ಘೋಷಣೆ ಕೂಗಿ ಸರಪಳಿಯನ್ನು ಕಳಚಲಿದ್ದಾರೆ.
ಈಗಾಗಲೇ ಈ ಬೃಹತ್ ಮಾನವ ಸರಪಳಿಗೆ ಜಿಲ್ಲಾಡಳಿತ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿದೆ. ವಿದ್ಯಾರ್ಥಿಗಳು, ಯುವಜನರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಅಧಿಕಾರಿ ಸಿಬ್ಬಂಧಿಗಳು ಸೇರಿದಂತೆ ಸಾರ್ವಜನಿಕರು ಈ ಮಾನವ ಸರಪಳಿಯಲ್ಲಿ ಭಾಗವಹಿಸಲಿದ್ದಾರೆ.
ಸುಗಮ ಸಂಚಾರಕ್ಕಾಗಿ ಹಾಗೂ ಸಂಚಾರ ನಿಯಂತ್ರಣಕ್ಕಾಗಿ ಹೆಚ್ಚಿನ ಬಂದೋಬಸ್ತ್ ಮತ್ತು ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು