6:40 AM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಡೈಮಂಡ್ ಕ್ಲಬ್ ಆರ್ಟ್ ಕಲ್ಚರಲ್ ಆ್ಯಂಡ್ ಸ್ಪೋರ್ಟ್ಸ್ ಕ್ಲಬ್ ಎಲ್ಲೆಡೆ ಹೆಸರುವಾಸಿಯಾಗಲಿ: ಶಿವಕುಮಾರ ಸವದಿ

06/11/2021, 14:34

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಗ್ರಾಮೀಣ ಭಾಗದ ಯುವ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಲೆದರ್ ಬಾಲ್ ಕ್ರಿಕೆಟ್ ಕೋಚಿಂಗ್ ನೂತನ ಹೆಜ್ಜೆ ಇಟ್ಟಿದೆ. ಕ್ರಿಕೆಟ್ ಪಟುಗಳಿಗೆ ನುರಿತ ಆಟಗಾರರಿಂದ ತರಬೇತಿ ನೀಡಲು ಅಥಣಿಯಲ್ಲಿ ನೂತನವಾಗಿ ಪ್ರಾರಂಭವಾಗಿರುವ ಡೈಮಂಡ್ ಕ್ಲಬ್ ಆರ್ಟ್ ಕಲ್ಚರಲ್ ಆ್ಯಂಡ್  ಸ್ಪೋರ್ಟ್ಸ್ ಕ್ಲಬ್ ಮುಂದಾಗಿದೆ.

ಅಥಣಿ ಪಟ್ಟಣದಲ್ಲಿರುವ ಸುವರ್ಣ ವಿದ್ಯಾಭೂಮಿಯ ಹಿಂದುಗಡೆ ಈ ಸ್ಪೋರ್ಟ್ಸ್ ಕ್ಲಬ್ ಹಾಗೂ ತರಬೇತಿ ಕೇಂದ್ರವನ್ನು ಗಣ್ಯರು ಉದ್ಘಾಟಿಸಿದರು. 

ನಂತರ ಮಾತನಾಡಿದ ಯುವ ಮುಖಂಡ ಶಿವಕುಮಾರ ಸವದಿ, ಗ್ರಾಮೀಣ ಭಾಗದ ಯುವಕರಿಗೆ ಕ್ರೀಡೆಯ ಮಹತ್ವ ತಿಳಿಸುವ ಮೂಲಕ ಅವರಿಗೆ ಗುಣಮಟ್ಟದ ತರಬೇತಿ ನೀಡುವ ನಿಟ್ಟಿನಲ್ಲಿ ಆನಂದ ಮಟಗಾರ ಅವರ ನೇತೃತ್ವದ ಈ ಕ್ಲಬ್ ಎಲ್ಲೆಡೆ ಹೆಸರುವಾಸಿಯಾಗುವಂತಾಗಲಿ ಎಂದು ಶುಭ ಹಾರೈಸಿದರು.


ಸುಸಜ್ಜಿತವಾದ ಕ್ರಿಕೆಟ್ ಮೈದಾನದಲ್ಲಿ ಲೆದರ್ ಬಾಲ್ ಕ್ರಿಕೆಟ್ ತರಬೇತಿ ಪಡೆದ ಕ್ರೀಡಾಳುಗಳು ಉನ್ನತ ಮಟ್ಟದ ಸಾಧನೆ ಮಾಡುವಂತಾಗಿ ಈ ಕ್ರಿಕೆಟ್ ಕ್ಲಬ್   ಹೆಸರುವಾಸಿಯಗಲಿ ಎಂದು ಕ್ಲಬ್ ನ ರೂವಾರಿಗಳಾದ ಆನಂದ ಮಟಗಾರ್, ಮಲ್ಲಪ್ಪ ಗದ್ಯಾಳ ಕಾರ್ಯವನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು.

ಕ್ರೀಡೆಗಳಲ್ಲಿ ಆಸಕ್ತಿರುವ 8 ರಿಂದ 23 ವರ್ಷದೊಳಗಿನ ಗಂಡು ಮತ್ತು ಹೆಣ್ಣು ಮಕ್ಕಳಿಗಾಗಿ ತರಬೇತಿ ನೀಡಿ ಸಂಪನ್ಮೂಲ ಭರಿತ ಕ್ರಿಡಾಪಟುಗಳನ್ನಾಗುವಂತೆ ಮಾಡುವುದು ಈ ಕ್ಲಬ್ ನ ಮೂಲ ಉದ್ದೇಶವಾಗಿದೆ. ಈಗಾಗಲೇ 26-10- 2021ರಿಂದ ಪ್ರವೇಶಗಳು ಪ್ರಾರಂಭವಾಗಿವೆ.

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯಿಂದ ಅರ್ಹತೆ ಪಡೆದ ನುರಿತ ತರಬೇತುದಾರರಿಂದ 15 ದಿನಗಳಿಗೊಮ್ಮೇ ತರಬೇತಿ ನೀಡುವ ವಿಶೇಷ ಯೋಜನೆ ರೂಪಿಸಲಾಗಿದೆ. ವಾರಕ್ಕೊಮ್ಮೆ ಅಭ್ಯಾಸ ಪಂದ್ಯಗಳನ್ನು ನಡೆಸಿ ಕ್ರೀಡಾಪಟುಗಳಿಗೆ ಆತ್ಮವಿಶ್ವಾಸ ತುಂಬುವ ಕಾರ್ಯ ಮಾಡಲಾಗುತ್ತದೆ.

ಹೀಗೆ ಅನೇಕ ನೂತನ ಆಲೋಚನೆ ಗಳೊಂದಿಗೆ ಈ ಕ್ಲಬ್ ಮುನ್ನಡೆಯುತ್ತಿರುವುದು ತಾಲೂಕಿನ ಕ್ರೀಡಾಳುಗಳಿಗೆ ಹೊಸ ಹುರುಪಿನೊಂದಿಗೆ ತರಬೇತಿ ಪಡೆಯುವಂತಾಗಿದೆ.


ಈ ವೇಳೆಯಲ್ಲಿ ಆನಂದ ಮಟಗಾರ, ಬಸಯ್ಯ ಸ್ವಾಮೀಜಿ, ಮಾರುತಿ ಬಸಗೌಡರ್, ಮಲ್ಲಪ್ಪ ಗದ್ಯಾಳ, ಆಕಾಶ್ ಹೊನ್ನಳ್ಳಿ,ಮಾಂತೇಶ್ ಮಾಳಿ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು