ಇತ್ತೀಚಿನ ಸುದ್ದಿ
ದೈವ ನರ್ತಕರಿಗೆ ಮಾಶಾಸನ: ಬಿ.ಟಿ.ಲಲಿತಾ ನಾಯ್ಕ್ ಹೇಳಿಕೆಗೆ ಪ್ರತಿಪಕ್ಷ ಉಪ ನಾಯಕ ಯು.ಟಿ.ಖಾದರ್ ಖಂಡನೆ
06/11/2022, 18:09

ಮಂಗಳೂರು(reporterkarnataka.com); ಸರಕಾರ ದೈವ ನರ್ತಕರಿಗೆ ಘೋಷಿಸಿರುವ ಮಾಶಾಸನದ ಕುರಿತು ಬಿ.ಟಿ.ಲಲಿತಾ ನಾಯ್ಕ್ ರವರ ಹೇಳಿಕೆಯನ್ನು ಪ್ರತಿಪಕ್ಷ ನಾಯಕ ಯು.ಟಿ.ಖಾದರ್ ತೀವ್ರವಾಗಿ ಖಂಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಯು.ಟಿ.ಖಾದರ್ ಮಾನ್ಯ ಬಿ ಟಿ ಲಲಿತಾ ನಾಯಕ್ ಅವರೇ, ನಿಮ್ಮ ಬಗ್ಗೆ ನಮಗೆ ಗೌರವವಿದೆ. ಆದರೆ ದೈವ ನರ್ತಕರಿಗೆ ನೀಡಿರುವ ಮಾಶಾಸನ ಸರಿ ಅಲ್ಲ ಎಂಬ ಮಾತನ್ನ ನಾನು ಒಪ್ಪಲು ಸಿದ್ದವಿಲ್ಲ. ನನ್ನ ಕ್ಷೇತ್ರ ಹಾಗೂ ಸಂಪೂರ್ಣ ಕರಾವಳಿ ಜನರ ಪರವಾಗಿ ನಾನು ನಿಮ್ಮ ಮಾತನ್ನು ಖಂಡಿಸುತ್ತೇನೆ. ದೈವ ನರ್ತಕರ ಪವಿತ್ರ ಆಚರಣೆ ಗೌರವಿಸಿ ಹಾಗೂ ಕರಾವಳಿ ಸಂಸ್ಕೃತಿಯನ್ನ ಅರ್ಥೈಸಿಕೊಂಡು ನಿಮ್ಮ ನಿಲುವಿನ ಬಗ್ಗೆ ಮರು ಚಿಂತನೆ ಮಾಡುವುದು ಒಳಿತು ಎಂದು ಪ್ರತಿಕ್ರಿಯಿಸಿದ್ದಾರೆ.