7:28 AM Saturday19 - July 2025
ಬ್ರೇಕಿಂಗ್ ನ್ಯೂಸ್
ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು…

ಇತ್ತೀಚಿನ ಸುದ್ದಿ

ದೈವಾರಾಧನೆ: ನಟ ಚೇತನ್ ವಿರುದ್ಧ ಹಿಂದೂ ಜಾಗರಣ ವೇದಿಕೆ ಕಾರ್ಕಳ ಠಾಣೆಗೆ ದೂರು

20/10/2022, 10:27

ಕಾರ್ಕಳ(reporterkarnataka.com): ದೇಶದಾದ್ಯಂತ ರಿಷಬ್ ಶೆಟ್ಟಿ ನಟಿಸಿ ,ನಿರ್ದೇಶಿಸಿದ “ಕಾಂತಾರ “ ಚಿತ್ರದಲ್ಲಿ ಬರುವ ದೈವ ಪಾತ್ರಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನಟ ಚೇತನ್ ವಿರುದ್ಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದೇಶದಾದ್ಯಂತ ಮಾತ್ರವಲ್ಲದೆ ದೇಶ ವಿದೇಶದಲ್ಲಿ ಅದ್ದೂರಿ ಪ್ರದರ್ಶನ ಕಾಣುವ ಮೂಲಕ ಕರಾವಳಿಯ ಸಂಸ್ಕೃತಿ ಮತ್ತು ಆಚರಣೆಯ ಪರಿಚಯ ಮಾಡಿಸುವುದು ಮಾತ್ರವಲ್ಲದೆ ಮಹತ್ವವನ್ನು ಸಾರುತ್ತಿದೆ.
ನಟ ರಿಷಬ್ ಶೆಟ್ಟಿ ಭೂತ ಕೋಲ ದೈವರಾಧನೆ ಹಿಂದೂ ಸಂಸ್ಕೃತಿಯ ಒಂದು ಭಾಗ ಎಂದು ಚಿತ್ರ ಬಿಡುಗಡೆಯ ಸಂದರ್ಭದಲ್ಲಿ ಹೇಳಿಕೆ ನೀಡಿದ್ದು, ಇದೀಗ ಈ ಮಾತಿಗೆ ನಟ ಚೇತನ್ ತಮ್ಮದೇ ಶೈಲಿಯಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ. ದೈವಾರಾಧನೆ ಹಿಂದೂ ಸಂಸ್ಕೃತಿಗೆ ಸೇರಿದ್ದಲ್ಲ ,ಎನ್ನುವ ನಟ ಚೇತನ್ ವಿವಾದಾತ್ಮಕ ಹೇಳಿಕೆಗೆ ಎಲ್ಲಾ ಕಡೆಯಿಂದ ಆಕ್ರೋಶಗಳು ವ್ಯಕ್ತವಾಗಿದೆ.

ಈ ಹಿನ್ನಲೆ ಹಿಂದೂ ಜಾಗರಣ ವೇದಿಕೆ ಕಾರ್ಕಳ, ಕರಾವಳಿಯ ಹಿಂದೂಗಳ ಮನೆ ಮನೆಯಲ್ಲಿ ಅತ್ಯಂತ ಶೃದ್ಧಾ ಭಕ್ತಿಯಿಂದ ಆರಾಧಿಸುವ ಮತ್ತು ನಡೆಸುವ ಭೂತ ಕೋಲದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದೂ ಅಲ್ಲದೆ, ಹಿಂದೂ ಧರ್ಮೀಯರ ಭಾವನೆಗಳಿಗೆ ಪದೇ ಪದೇ ಧಕ್ಕೆ ತರುತ್ತಿರುವ ಕನ್ನಡ ನಟ ಚೇತನ ಕುಮಾರ್ ವಿರುದ್ದ ಕಾರ್ಕಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಸಂದರ್ಭದಲ್ಲಿ ಕಾರ್ಕಳ ನಗರ ಸಂಯೋಜಕ ಸಂದೀಪ್ ಕಾರ್ಲ, ಬೋಳ ಸದಾಶಿವ ಶೆಟ್ಟಿ , ದೀಪಕ್ ಬೈಲೂರು ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು