6:48 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

ದೈವಾರಾಧನೆ: ನಟ ಚೇತನ್ ವಿರುದ್ಧ ಹಿಂದೂ ಜಾಗರಣ ವೇದಿಕೆ ಕಾರ್ಕಳ ಠಾಣೆಗೆ ದೂರು

20/10/2022, 10:27

ಕಾರ್ಕಳ(reporterkarnataka.com): ದೇಶದಾದ್ಯಂತ ರಿಷಬ್ ಶೆಟ್ಟಿ ನಟಿಸಿ ,ನಿರ್ದೇಶಿಸಿದ “ಕಾಂತಾರ “ ಚಿತ್ರದಲ್ಲಿ ಬರುವ ದೈವ ಪಾತ್ರಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನಟ ಚೇತನ್ ವಿರುದ್ಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದೇಶದಾದ್ಯಂತ ಮಾತ್ರವಲ್ಲದೆ ದೇಶ ವಿದೇಶದಲ್ಲಿ ಅದ್ದೂರಿ ಪ್ರದರ್ಶನ ಕಾಣುವ ಮೂಲಕ ಕರಾವಳಿಯ ಸಂಸ್ಕೃತಿ ಮತ್ತು ಆಚರಣೆಯ ಪರಿಚಯ ಮಾಡಿಸುವುದು ಮಾತ್ರವಲ್ಲದೆ ಮಹತ್ವವನ್ನು ಸಾರುತ್ತಿದೆ.
ನಟ ರಿಷಬ್ ಶೆಟ್ಟಿ ಭೂತ ಕೋಲ ದೈವರಾಧನೆ ಹಿಂದೂ ಸಂಸ್ಕೃತಿಯ ಒಂದು ಭಾಗ ಎಂದು ಚಿತ್ರ ಬಿಡುಗಡೆಯ ಸಂದರ್ಭದಲ್ಲಿ ಹೇಳಿಕೆ ನೀಡಿದ್ದು, ಇದೀಗ ಈ ಮಾತಿಗೆ ನಟ ಚೇತನ್ ತಮ್ಮದೇ ಶೈಲಿಯಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ. ದೈವಾರಾಧನೆ ಹಿಂದೂ ಸಂಸ್ಕೃತಿಗೆ ಸೇರಿದ್ದಲ್ಲ ,ಎನ್ನುವ ನಟ ಚೇತನ್ ವಿವಾದಾತ್ಮಕ ಹೇಳಿಕೆಗೆ ಎಲ್ಲಾ ಕಡೆಯಿಂದ ಆಕ್ರೋಶಗಳು ವ್ಯಕ್ತವಾಗಿದೆ.

ಈ ಹಿನ್ನಲೆ ಹಿಂದೂ ಜಾಗರಣ ವೇದಿಕೆ ಕಾರ್ಕಳ, ಕರಾವಳಿಯ ಹಿಂದೂಗಳ ಮನೆ ಮನೆಯಲ್ಲಿ ಅತ್ಯಂತ ಶೃದ್ಧಾ ಭಕ್ತಿಯಿಂದ ಆರಾಧಿಸುವ ಮತ್ತು ನಡೆಸುವ ಭೂತ ಕೋಲದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದೂ ಅಲ್ಲದೆ, ಹಿಂದೂ ಧರ್ಮೀಯರ ಭಾವನೆಗಳಿಗೆ ಪದೇ ಪದೇ ಧಕ್ಕೆ ತರುತ್ತಿರುವ ಕನ್ನಡ ನಟ ಚೇತನ ಕುಮಾರ್ ವಿರುದ್ದ ಕಾರ್ಕಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಸಂದರ್ಭದಲ್ಲಿ ಕಾರ್ಕಳ ನಗರ ಸಂಯೋಜಕ ಸಂದೀಪ್ ಕಾರ್ಲ, ಬೋಳ ಸದಾಶಿವ ಶೆಟ್ಟಿ , ದೀಪಕ್ ಬೈಲೂರು ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು