12:51 PM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ 68 ಶಿಕ್ಷಕರಲ್ಲಿ ಕೊರೊನಾ ಪಾಸಿಟಿವ್ !

28/01/2022, 12:40

ಮಂಗಳೂರು (reporterkarnataka.com)
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜ.1 ರಿಂದ 27 ರವರೆಗೆ ಒಟ್ಟು 421 ಶಾಲಾ ಮಕ್ಕಳು ಮತ್ತು 68 ಶಿಕ್ಷಕರಲ್ಲಿ ಕೋವಿಡ್ 19 ಸೋಂಕು ಪತ್ತೆಯಾಗಿದೆ ಎಂದು ಸಚಿವ ಡಾ.ಸುಧಾಕರ್ ಮಾಹಿತಿಯನ್ನು ನೀಡಿದ್ದಾರೆ.

ದ. ಕ ಜಿಲ್ಲೆಯಲ್ಲಿ ಶಾಲಾ ಮಕ್ಕಳಲ್ಲಿ ಕೋವಿಡ್-19 ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದ್ದು, 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೋಂಕಿಗೊಳಗಾಗಿದ್ದಾರೆ.

ಅಲ್ಲದೆ ಜಿಲ್ಲೆಯ 68 ಶಾಲಾ ಶಿಕ್ಷಕರಲ್ಲಿ ಸೋಂಕು ಪತ್ತೆಯಾಗಿರುವ ಹಿನ್ನೆಲೆ ಹೆಚ್ಚು ಸೋಂಕು ಇರುವ ಶಾಲೆಗಳನ್ನು ಬಂದ್ ಮಾಡುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.

ಮಂಗಳೂರಿನಲ್ಲಿ ಅತೀ ಹೆಚ್ಚು ಸೋಂಕು ಪ್ರಕರಣಗಳು ವರದಿಯಾಗಿದೆ. ಆದರೆ, ಆಸ್ಪತ್ರೆಗೆ ದಾಖಲಾಗುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಮಾತ್ರ ಶೂನ್ಯದಲ್ಲಿದೆ ಎಂದಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ದ. ಕ ದಲ್ಲಿ ಕೋವಿಡ್ ನೋಡಲ್ ಅಧಿಕಾರಿ ಡಾ.ಅಶೋಕ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಐದಕ್ಕಿಂತ ಕಡಿಮೆ ಪ್ರಕರಣಗಳು ವರದಿಯಾದರೂ ಎಲ್ಲಾ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಶಾಲೆಗಳಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು