6:31 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 1.50 ಲಕ್ಷ ಮಂದಿಗೆ ಲಸಿಕೆ ನೀಡುವ ಗುರಿ: 18 ವರ್ಷ ತುಂಬಿದವರಿಗೆ ಕಡ್ಡಾಯ

16/09/2021, 08:47

ಮಂಗಳೂರು(reporterkarnataka.com) ಸೆಪ್ಟೆಂಬರ್ 17ರಂದು ಜಿಲ್ಲೆಯಾದ್ಯಂತ ನಡೆಯುವ ಬೃಹತ್ ಲಸಿಕಾ ಮೇಳ ಯಶಸ್ವಿಯಾಗುವಂತೆ ಕಾರ್ಯ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳು ಹಾಗೂ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು  ವಿಧಾನಸೌಧದ ಸಮಿತಿ ಕಚೇರಿಯಲ್ಲಿ ನಡೆದ ಸೆಪ್ಟೆಂಬರ್ 17ರಂದು ನಡೆಯುವ ಬೃಹತ್ ಲಸಿಕಾ ಮೇಳದ ಕುರಿತು ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳು ಹಾಗೂ ಆರೋಗ್ಯಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 1,50,000 ಲಸಿಕಾಕರಣ ಗುರಿಯನ್ನು ನೀಡಲಾಗಿದ್ದು, ಜಿಲ್ಲೆಯ 18 ವರ್ಷ ತುಂಬಿದ ಪ್ರತಿಯೊಬ್ಬರಿಗೂ ಕಡ್ಡಾಯವಾಗಿ ಲಸಿಕೆಯನ್ನು ನೀಡುವ ಕೆಲಸವಾಗಬೇಕು ಹಾಗೂ ಈ ಮೇಳವನ್ನು ಯಶಸ್ವಿಯಾಗಿಸಬೇಕು ಎಂದು ಸೂಚಿಸಿದರು.
ಸೆಪ್ಟೆಂಬರ್ 17ರಂದು ಸರಿಯಾದ ವಾಹನದ ವ್ಯವಸ್ಥೆ, ಲಸಿಕಾ ಕೇಂದ್ರಗಳ ವ್ಯವಸ್ಥೆ, ವೈದ್ಯಕೀಯ ಸಿಬ್ಬಂದಿಗಳ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಸಂಬಂಧಪಟ್ಟ ಅಧಿಕಾರಿಗಳು ಮುಂಚಿತವಾಗಿ ಪೂರ್ವ ಸಿದ್ಧತಾ ತಯಾರಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಖಾಸಗಿ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜು ಹಾಗೂ ನರ್ಸಿಂಗ್
ಕಾಲೇಜುಗಳ ವೈದ್ಯಕೀಯ ಸಿಬ್ಬಂದಿಗಳ ಸಹಯೋಗ ಪಡೆದುಕೊಂಡು
ಜಿಲ್ಲಗೆ ನೀಡಿದ ಗುರಿಯನ್ನು ಸಾಧಿಸಿ ಎಂದು ಕರೆ ನೀಡಿದರು.
ಸಂಬಂಧಪಟ್ಟ ಅಧಿಕಾರಿಗಳು ಗಡಿಭಾಗದ ಗ್ರಾಮಗಳು ಹಾಗೂ ನಗರ ಪ್ರದೇಶದಲ್ಲಿ ಕೊಳಗೇರಿಗಳಲ್ಲಿ ವಾಸಿಸುವ ಮನೆಗಳಿಗೆ ಭೇಟಿ ನೀಡಿ ಹಾಗೂ ಹೆಚ್ಚು ಹೆಚ್ಚು ಲಸಿಕಾ ಕೇಂದ್ರಗಳನ್ನು ತೆರೆಯಲು ತಿಳಿಸಿದರು.
ಜಿಲ್ಲಾಧಿಕಾರಿ ಡಾ.ರಾಜೇಂದ್ರ.ಕೆ.ವಿ ಮಾತನಾಡಿ, ಸೆಪ್ಟೆಂಬರ್ 17ರ ಒಳಗಾಗಿ ಸಂಬಂಧಪಟ್ಟ ಅಧಿಕಾರಿಗಳು ಪ್ರತಿ ಮನೆಮನೆಗೆ ತೆರಳಿ ಲಸಿಕೆ ಪಡೆಯದೇ ಇರುವವರ ಮಾಹಿತಿ ಪಟ್ಟಿಯನ್ನು ಪಡೆದುಕೊಂಡು ಲಸಿಕೆ ಹಾಕಿಕೊಳ್ಳಲು ಬರುವಂತೆ ತಿಳಿ ಹೇಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆಯಾ ಗ್ರಾಮ ಸಹಾಯಕರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ಹಾಗೂ ಪ್ರತಿ ಪಂಚಾಯಿತಿಗಳಲ್ಲಿ ಸಭೆ ನಡೆಸಿ ಬೃಹತ್ ಲಸಿಕೆ ಮೇಳದ ಕುರಿತು ಜನರಿಗೆ ಅರಿವು ಮೂಡಿಸಬೇಕು ಎಂದರು.

ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಕಿಶೋರ್, ಡಿಯುಡಿಸಿ ಗಾಯತ್ರಿ ನಾಯಕ್ ಹಾಗೂ ಮತ್ತಿತರ ವೈದ್ಯಾಧಿಕಾರಿಗಳು ವಿಡಿಯೋ ಸಂವಾದದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು