11:19 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ದಕ್ಷಿಣ ಭಾರತದಲ್ಲಿ ಚುರುಕುಗೊಂಡ ಮಳೆ: ರಾಜ್ಯದಲ್ಲಿ ಇನ್ನಷ್ಟು ಬಿರುಸುಗೊಳ್ಳಲಿದೆ ವರ್ಷಧಾರೆ

09/07/2022, 22:42

ಬೆಂಗಳೂರು(reporterkarnataka.com):ಬದಲಾದ ಹವಾಮಾನದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ, ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಕರ್ನಾಟಕದ ಕರಾವಳಿ, ಮಲೆನಾಡು ಭಾಗಗಳಲ್ಲಿ ಮಳೆ ಇನ್ನಷ್ಟು ಬಿರುಸು ಪಡೆದುಕೊಳ್ಳುವ ಸಾಧ್ಯತೆಯಿದೆ.

ಹವಾಮಾನ ಇಲಾಖೆ ಮೂಲಗಳ ಪ್ರಕಾರ ದೇಶದ ಹವಾಮಾನದಲ್ಲಿ ಬದಲಾವಣೆಯಾಗುತ್ತಿದ್ದು, ಕರ್ನಾಟಕ ಸೇರದಂತೆ ಮಹಾರಾಷ್ಟ್ರ, ಕೇರಳ, ಆಂಧ್ರ ಪ್ರದೇಶದ ಹಲವು ಭಾಗಗಳಲ್ಲಿ ಮಳೆ ಇನ್ನಷ್ಟು ಬಿರುಸಾಗಲಿದೆ. ಈ ಬೆಳವಣಿಗೆ ಜು.19ರ ತನಕ ಮುಂದುವರಿಯಲಿದೆ.

ಎಲ್ಲೆಲ್ಲಿ ಮಳೆ: ರಾಜ್ಯದ ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ, ಉಡುಪಿ, ಮಲೆನಾಡು ಭಾಗ, ದಕ್ಷಿಣ ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ. ಇದಕ್ಕೆ ಪೂರಕವಾಗಿ ಕರಾವಳಿ ಜಿಲ್ಲೆಗಳಲ್ಲಿ ಶುಕ್ರವಾರ ರಾತ್ರಿಯಿಂದಲೇ ಧಾರಾಕಾರ ಮಳೆಯಾಗುತ್ತಿದೆ.

ಮತ್ತೆ ವಾಯುಭಾರ ಕುಸಿತ: ಅರಬ್ಬೀ ಸಮುದ್ರದಲ್ಲಿ ಉಂಟಾಗಿದ್ದ ಮೇಲ್ಮೈ ಸುಳಿಗಾಳಿ ಇನ್ನೂ ಪ್ರಬಲವಾಗಿಯೇ ಮುಂದುವರಿದಿದ್ದು, ರಾಜ್ಯದ ಪಶ್ಚಿಮ ಘಟ್ಟಗಳತ್ತ ಗಂಟೆಗೆ ಸುಮಾರು 50 ಕಿ. ಮೀ. ವೇಗದಲ್ಲಿ ಚಲಿಸುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು