10:45 AM Wednesday19 - August 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ…

ಇತ್ತೀಚಿನ ಸುದ್ದಿ

ದಕ್ಷಿಣ ಭಾರತದಲ್ಲಿ ಚುರುಕುಗೊಂಡ ಮಳೆ: ರಾಜ್ಯದಲ್ಲಿ ಇನ್ನಷ್ಟು ಬಿರುಸುಗೊಳ್ಳಲಿದೆ ವರ್ಷಧಾರೆ

09/07/2022, 22:42

ಬೆಂಗಳೂರು(reporterkarnataka.com):ಬದಲಾದ ಹವಾಮಾನದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ, ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಕರ್ನಾಟಕದ ಕರಾವಳಿ, ಮಲೆನಾಡು ಭಾಗಗಳಲ್ಲಿ ಮಳೆ ಇನ್ನಷ್ಟು ಬಿರುಸು ಪಡೆದುಕೊಳ್ಳುವ ಸಾಧ್ಯತೆಯಿದೆ.

ಹವಾಮಾನ ಇಲಾಖೆ ಮೂಲಗಳ ಪ್ರಕಾರ ದೇಶದ ಹವಾಮಾನದಲ್ಲಿ ಬದಲಾವಣೆಯಾಗುತ್ತಿದ್ದು, ಕರ್ನಾಟಕ ಸೇರದಂತೆ ಮಹಾರಾಷ್ಟ್ರ, ಕೇರಳ, ಆಂಧ್ರ ಪ್ರದೇಶದ ಹಲವು ಭಾಗಗಳಲ್ಲಿ ಮಳೆ ಇನ್ನಷ್ಟು ಬಿರುಸಾಗಲಿದೆ. ಈ ಬೆಳವಣಿಗೆ ಜು.19ರ ತನಕ ಮುಂದುವರಿಯಲಿದೆ.

ಎಲ್ಲೆಲ್ಲಿ ಮಳೆ: ರಾಜ್ಯದ ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ, ಉಡುಪಿ, ಮಲೆನಾಡು ಭಾಗ, ದಕ್ಷಿಣ ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ. ಇದಕ್ಕೆ ಪೂರಕವಾಗಿ ಕರಾವಳಿ ಜಿಲ್ಲೆಗಳಲ್ಲಿ ಶುಕ್ರವಾರ ರಾತ್ರಿಯಿಂದಲೇ ಧಾರಾಕಾರ ಮಳೆಯಾಗುತ್ತಿದೆ.

ಮತ್ತೆ ವಾಯುಭಾರ ಕುಸಿತ: ಅರಬ್ಬೀ ಸಮುದ್ರದಲ್ಲಿ ಉಂಟಾಗಿದ್ದ ಮೇಲ್ಮೈ ಸುಳಿಗಾಳಿ ಇನ್ನೂ ಪ್ರಬಲವಾಗಿಯೇ ಮುಂದುವರಿದಿದ್ದು, ರಾಜ್ಯದ ಪಶ್ಚಿಮ ಘಟ್ಟಗಳತ್ತ ಗಂಟೆಗೆ ಸುಮಾರು 50 ಕಿ. ಮೀ. ವೇಗದಲ್ಲಿ ಚಲಿಸುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು